Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಗುಜರಾತಿನಲ್ಲಿ ಸ್ಯಾಂಟ್ರೋ ರವಿ ಬಂಧನದ ಬಗ್ಗೆ ಅನುಮಾನಗಳಿವೆ: ಹೆಚ್.ಡಿ.ಕುಮಾರಸ್ವಾಮಿ

Public TV
Last updated: January 14, 2023 10:52 pm
Public TV
Share
5 Min Read
H.D.Kumaraswamy
SHARE

ಬೆಂಗಳೂರು: ರಾಜ್ಯದ ಗೃಹ ಸಚಿವರು ಗುಜರಾತ್‌ನಲ್ಲಿದ್ದಾರೆ. ಸ್ಯಾಂಟ್ರೋ ರವಿ (Santro Ravi) ಕೂಡ ಅಲ್ಲೇ ಇದ್ದ. ಗೃಹ ಸಚಿವರು ಗುಜರಾತ್‌ಗೆ ಯಾವಾಗ ಹೋದರು ಎನ್ನುವುದೇ ಯಕ್ಷಪ್ರಶ್ನೆ. ಗುಜರಾತಿನಲ್ಲೂ ಬಿಜೆಪಿ ಸರ್ಕಾರವಿದೆ. ಬಿಜೆಪಿಯವರು ಏನು ಬೇಕಾದರೂ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ಯಾಂಟ್ರೋ ರವಿಯನ್ನು ಗುಜರಾತ್‌ನಿಂದ ರಾಜ್ಯಕ್ಕೆ ಕರೆತಂದ ಪೊಲೀಸರು ಅಜ್ಞಾತ ಸ್ಥಳಕ್ಕೆ ಮಾಧ್ಯಮಗಳ ಕಣ್ತಪ್ಪಿಸಿ ರಾಜಾತಿಥ್ಯ ಕೊಟ್ಟು ಕರೆದೊಯ್ದಿದ್ದಾರೆ. ವಿಐಪಿ ಗೇಟ್ ಮೂಲಕ ಸ್ಯಾಂಟ್ರೋ ರವಿಯನ್ನು ಎಲ್ಲರ ಕಣ್ತಪ್ಪಿಸಿ ಕರೆತಂದದ್ದು ಏಕೆ? ವಿಐಪಿ ಗೇಟ್ ಇರುವುದು ಪ್ರಧಾನಿ, ಮುಖ್ಯಮಂತ್ರಿಗಳಿಗೆ ಮಾತ್ರ. ಒಬ್ಬ ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗೆ ಇಷ್ಟೊಂದೆಲ್ಲ ರಾಜಾತಿಥ್ಯ ಏಕೆ ಎಂದು ಅವರು ಪ್ರಶ್ನಿಸಿದರು. ಇದನ್ನೂ ಓದಿ: ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!

SANTRO RAVI 4

ಸ್ಯಾಂಟ್ರೋ ರವಿಯನ್ನು ಎರಡು-ಮೂರು ದಿನಗಳ ಹಿಂದೆಯೇ ಗುಜರಾತ್‌ನಲ್ಲಿ ಬಂಧಿಸಿದ್ದಾರೆ. ಏನೆಲ್ಲಾ ಸಾಕ್ಷ್ಯ ಇಟ್ಟುಕೊಂಡಿದ್ದನೋ ಅದನ್ನೆಲ್ಲ ಕಿತ್ತುಕೊಂಡು ಬಂದಿದ್ದಾರೆ. ಅಧಿಕಾರಿಗಳ ವರ್ಗಾವಣೆಯಲ್ಲಿ ಇವನದ್ದೇ ನೇರ ಪಾತ್ರವಿದೆ. ಮೈಸೂರಿನಲ್ಲಿ ಮಹಿಳೆಯೊಬ್ಬರು ದಾಖಲಿಸಿದ ಪ್ರಕರಣ ಬಿಟ್ಟು ಉಳಿದ ಪ್ರಕರಣವನ್ನು ಯಾವ ರೀತಿ ತನಿಖೆ ಮಾಡುತ್ತಾರೆ? ಸರ್ಕಾರದ ಆಡಳಿತ, ದಂಧೆಕೋರರು ದಲ್ಲಾಳಿಗಳಿಂದ ನಡೆಯಬೇಕು ಅಂದರೆ ಈ ಸರ್ಕಾರ ಮುಂದುವರೆಯಬೇಕಾ? ಎಂದು ಗುಡುಗಿದರು.

ನನ್ನ ಆಡಳಿತ ಇದ್ದಾಗ ನಾನು ಬಿಗಿಯಾಗಿ ಇಟ್ಟುಕೊಂಡಿದ್ದೆ. ಜನರಿಗೆ ಉತ್ತರ ಕೊಡಬೇಕಾದವರು ಸರ್ಕಾರದವರೇ. ಸ್ಯಾಂಟ್ರೋ ರವಿ ರಾಜರೋಷವಾಗಿ ಮಾತಾಡ್ತಾನೆ ಅಂದರೆ ಹೇಗೆ? ಪೂನಾದಿಂದ ಗುಜರಾತ್‌ಗೆ ಯಾಕೆ ಕರೆಸಿಕೊಂಡರು? ಅವನಿಗೆ ಏನು ಪ್ರಾಮಿಸ್ ಮಾಡಿ ಕರೆಸಿಕೊಂಡರು. ಒಂದು ತಿಂಗಳು ಸುದ್ದಿಯಲ್ಲಿ ಇರ್ತಾರೆ. ನಂತರ ಜನ ಮರೆತಾಗ ಮುಚ್ಚಿ ಹಾಕುತ್ತಾರೆ ಅಷ್ಟೆ ಎಂದು ಹೇಳಿದರು. ಇದನ್ನೂ ಓದಿ: ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

santro ravi araga jnanendra

ಗೃಹ ಸಚಿವರು ಯಾಕೆ ಗುಜರಾತ್‌ಗೆ ಹೋದರು. ಸಾಬರಮತಿ ಆಶ್ರಮದಲ್ಲಿ ಗಾಂಧಿ ಪ್ರತಿಮೆ ಬಳಿ ಫೋಟೊ ತೆಗೆಸಿಕೊಳ್ಳುವುದು, ವೀಡಿಯೋ ಕ್ಲಿಪ್ಪಿಂಗ್ ಯಾಕೆ ಕಳಿಸಿರುವುದು. ನನಗೆ ಅನುಮಾನ ಅಂತೂ ಇದೆ. ಪೂನಾದಲ್ಲೇ ಅರೆಸ್ಟ್ ಮಾಡಬಹುದಿತ್ತಲ್ಲಾ? ಆತನನ್ನು ಗುಜರಾತ್‌ಗೆ ಯಾಕೆ ಕರೆಸಿಕೊಂಡರು. ನಾನೇ ಎಲ್ಲ ಹೇಳೋದಾದ್ರೆ ಸರ್ಕಾರ ತನಿಖೆ ಮಾಡಬೇಕಲ್ಲಾ? ವಾಸ್ತವಾಂಶ ಹೇಳಬೇಕಲ್ಲವೇ? 40 ಪರ್ಸೆಂಟ್ ಸರ್ಕಾರ ಅಂತಾರೆ. ಒಂದು ದಾಖಲೆ ಕೊಡಕಾಗುತ್ತದೆಯೇ? ಸಚಿವ ಎಂಟಿಬಿ ನಾಗರಾಜ್ ಹೇಳಿಕೆ ಸಾಕಲ್ಲವೇ? ಇಂತಹ ಕೆಟ್ಟ ಸರ್ಕಾರ ಹಿಂದೆ ಬಂದಿಲ್ಲ, ಮುಂದೆ ಬರುವುದಿಲ್ಲ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಸರಿ ಬಟ್ಟೆ ಬಗ್ಗೆ ಮಾತಾಡೋವ್ರು, ಅದೇ ಕೇಸರಿ ಬಟ್ಟೆನೇ ಇಂಥವರು ಹೆಗಲಿಕೆ ಹಾಕಿದ್ದಲ್ವಾ. ಅದಕ್ಕೆ ಗೌರವವಿಲ್ಲವೆ? ಜೆಡಿಎಸ್ ಜನರ ಟೀಂ, ಕಾಂಗ್ರೆಸ್-ಬಿಜೆಪಿ ಅವರು ಹೇಳಿದ್ದಾರಲ್ಲಾ ಅಲ್ಲೇ ಅರ್ಥ ಮಾಡಿಕೊಳ್ಳಿ. ಇವರು ಯಾವ ಟೀಂ ಅಂತ. ಬಿಜೆಪಿ ಆಡಳಿತ ಮಾಡಬೇಕಾದರೆ ಯಾವ ಕೃಪಾಕಟಾಕ್ಷ ಇತ್ತು ಚಾಟಿ ಬೀಸಿದರು.

santro ravi

ಈ ಸರ್ಕಾರದಲ್ಲಿ ಸ್ಯಾಂಟ್ರೋ ರವಿಯಂಥವರು ತುಂಬಾ ಜನ ಇದ್ದಾರೆ. ಕೆಲವು ಮಂತ್ರಿಗಳು, ರಾಜಕಾರಣಿಗಳಲ್ಲಿ ಸಂಪರ್ಕದಲ್ಲಿ ಇದ್ದಾರೆ. ನಾನು ಅಂದು ಹೇಳದೇ ಹೋಗಿದ್ರೆ ಇದನ್ನು ಮುಚ್ಚಿ ಹಾಕ್ತಿದ್ರು ಅಷ್ಟೆ. ಕೇರಳ ಅಲ್ಲಿ ಇಲ್ಲಿ ಹೋಗಿದ್ದ ಅಂತ ಹೇಳಿದ್ದರು. ನಾನು ಯಾಕೆ ಮೊಸರಲ್ಲಿ ಕಲ್ಲು ಹುಡುಕಲಿ. ಪಾರದರ್ಶಕವಾಗಿ ತನಿಖೆ ನಡೆಸುತ್ತಿದ್ದರೆ ಹೇಳಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಇದನ್ನೂ ಓದಿ: ನಿಮಿಷಾಂಭ ದೇವಿಗೆ ಹರಕೆ ಹೊತ್ತ 22 ಗಂಟೆಗಳಲ್ಲೇ ಸ್ಯಾಂಟ್ರೋ ರವಿ ಅರೆಸ್ಟ್: ಅಲೋಕ್ ಕುಮಾರ್

ಮೀಸಲಾತಿಗಾಗಿ ಮಠಾಧೀಶರನ್ನು ಎತ್ತಿಕಟ್ಟುತ್ತಿರುವ ರಾಜಕಾರಣಿಗಳು
ಈಗಿನ ರಾಜಕಾರಣಿಗಳು ಮೀಸಲಾತಿ ಕುರಿತಂತೆ ಮಠಾಧೀಶರನ್ನು ಎತ್ತಿ ಕಟ್ಟುತ್ತಿದ್ದಾರೆ. ಅವರನ್ನು ಬಿಸಿಲಲ್ಲಿ ಕೂರಿಸಿ ಹೋರಾಟ ಮಾಡಿಸುತ್ತಿದ್ದಾರೆ. ಮೀಸಲಾತಿ ಕುರಿತು ಸರ್ಕಾರಕ್ಕೆ ಅರಿವಿಲ್ಲವೇ? ರಾಜಕಾರಣಿಗಳು ಮಠಾಧೀಶರನ್ನು ಮುಂದೆ ಬಿಟ್ಟು ಹೋರಾಟವನ್ನು ಮಾಡಿಸುತ್ತಿದ್ದಾರೆ. ಮೀಸಲಾತಿ ಅರ್ಥ ಏನು? ಹೋದ ಕಡೆಯೆಲ್ಲಾ ಸದಾಶಿವ ಆಯೋಗ ವರದಿ ಮಾಡಿ ಅಂತಿದ್ದಾರೆ. ನಾವು ಈ ವರದಿ ಜಾರಿಗೆ ತಂದರೆ ಬೋವಿ, ಬಂಜಾರ ಸಮುದಾಯಕ್ಕೆ ಅನ್ಯಾಯ ಆಗುತ್ತೆ ಅನ್ನೊ ಭಯವಿದೆ. ನಾನು ಅಧಿಕಾರಕ್ಕೆ ಬಂದ್ರೆ ಎಲ್ಲರನ್ನೂ ಕರೆದು ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.

PANCHAMASALI

ರಾಜಕಾರಣಿಗಳಿಂದಲೇ ಸಮಸ್ಯೆ ಆರಂಭವಾಗಿದೆ. ಪರ್ಸೆಂಟೆಜ್ ಹೆಚ್ಚು ಮಾಡಿ ಅಂತ ಕೇಳಲಾಗ್ತಿದೆ. ಆದರೆ ಸರ್ಕಾರಿ ನೌಕರರು, ಸಮುದಾಯ ಪರಿಸ್ಥಿತಿ ಎಲ್ಲಾ ಅಧ್ಯಯನ ಆಗಬೇಕು. ಅವರಿಗೆ ಹೆಚ್ಚಳ ಮಾಡಿದ್ರು ನಮಗೂ ಹೆಚ್ಚಳ ಮಾಡಿ ಅನ್ನುವುದಲ್ಲ. 12% ಹೆಚ್ಚಳ ಮಾಡಿ ಅನ್ನೋದಕ್ಕೆ ಸರಿಯಾದ ಮಾಹಿತಿ ಕೊಟ್ಟು ಚರ್ಚೆ ಮಾಡಬೇಕು. ಮಠಾಧೀಶರ ಭಾವನೆ ತಪ್ಪು ಅನ್ನೋದಿಲ್ಲ. ನಮ್ಮನ್ನು ಈ ವರ್ಗಕ್ಕೆ ಸೇರಿಸಿ ಅಂತ ಕೇಳಿದಾಗ ಯಾವ ಆಧಾರದ ಮೇಲೆ ಕೇಳುತ್ತಿದ್ದೇವೆ. ಯಾವ ಮಾರ್ಗಸೂಚಿ ಇದೆ ಅನ್ನೋದನ್ನ ನೋಡಬೇಕು. ಜನರನ್ನು ಬೀದಿಯಲ್ಲಿ ಬೆಂಕಿ ಹಚ್ಚಿಸಿ ಹೋರಾಟ ಮಾಡಿಸುವುದು ಯಾಕೆ? ಸರ್ಕಾರಕ್ಕೆ ವಿವರವಾಗಿ ವಾಸ್ತವಾಂಶ ಹೇಳಬೇಕಲ್ಲ. ಅದಕ್ಕೆ ನಾನು ಅಂದು ಹೇಳಿದ್ದು. ರಂಗ ಅಲ್ಲ ಮಂಗ ಅಂತ. ಮೀಸಲಾತಿ ವ್ಯವಸ್ಥೆಯಲ್ಲಿ ಇಂತಹ ಬೇಡಿಕೆಗಳು ಬಂದಾಗ ಯೋಚನೆ ಮಾಡಬೇಕು ಎಂದರು.

ಸದಾಶಿವ ಆಯೋಗದ ವರದಿ ಬಂದು ಎಷ್ಟು ವರ್ಷ ಆಯ್ತು. ನಾವು ಈ ಕಾರ್ಯಕ್ರಮ ಕೊಡೋಕೆ ಹೋದ್ರೆ ಏನಾಗುತ್ತದೆ ಅಂತ ಹೇಳಿದ್ದೆ. ಅವರಿಗೂ ಕೊಟ್ರಿ ನಮಗೂ ಕೊಡಿ ಅಂತ ಅಂದಾಗ, ಎಷ್ಟು ಜನರಿಗೆ ಮೋಸ ಮಾಡ್ತೀರ ನೀವು. ನಮ್ಮ ಸಮಾಜಕ್ಕೆ ಶೇ.12 ರಷ್ಟು ಹೆಚ್ಚಿಸುವುದಕ್ಕೆ ಯಾವ ಆಧಾರದಲ್ಲಿ ಕೊಡಬೇಕು ಸರ್ಕಾರ. ಇಂಟರ್ನಲ್ ರಿಪೋರ್ಟ್ ತೆಗೆದುಕೊಂಡು ಚರ್ಚಿಸಿ ಎಂದು ನಮ್ಮ ಸ್ವಾಮೀಜಿಗೂ ಹೇಳಿದ್ದೆ ಎಂದು ತಿಳಿಸಿದರು. ಇದನ್ನೂ ಓದಿ: ನಿರಾಣಿ ಆ ಹುಲಿ ಜೊತೆ ಮಾತಾಡಲಿ- ಯತ್ನಾಳ್‍ರನ್ನ ಹುಲಿಗೆ ಹೋಲಿಕೆ ಮಾಡಿದ ಸ್ವಾಮೀಜಿ

Janardhana Reddy

ಊಹಾಪೋಹಕ್ಕೆ ನಕ್ಕ ಹೆಚ್ಡಿಕೆ
ನಾನು ಜನಾರ್ದನ ರೆಡ್ಡಿ ಅವರ ಜೊತೆ ಕೈ ಜೋಡಿಸಿಲ್ಲ, ಜೋಡಿಸುವುದೂ ಇಲ್ಲ. ನಮ್ಮ ಮತ್ತು ಅವರ ಕೈ ದೂರ. ಇದೊಂದು ಊಹಾಪೋಹ ಸುದ್ದಿ ಅಷ್ಟೆ ಎಂದು ಹೇಳಿದರು. ಸಿ.ಪಿ.ಯೋಗೇಶ್ವರ್ ಆಡಿಯೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ವಿಚಾರಕ್ಕೆ ಪ್ರಾಮುಖ್ಯತೆ ಕೊಡೋದು ಬೇಡ ಎಂದರು.

ಹಾಸನದಲ್ಲಿ ಕುಟುಂಬದಿಂದ ಮತ್ತೊಬ್ಬರು ಸ್ಪರ್ಧೆ ವಿಚಾರ ಹಾಗೂ ಬಿಜೆಪಿ ಶಾಸಕ ಪ್ರೀತಂಗೌಡ ಹೇಳಿಕೆ ಕುರಿತು ಮಾತನಾಡಿ, ಅವರು ಪ್ರವೋಕ್ ಮಾಡುತ್ತಿದ್ದಾರೆ ಅನ್ನುವುದು ನನ್ನ ಅಭಿಪ್ರಾಯ. ಹಾಸನದಲ್ಲಿ ಚುನಾವಣೆ ಗೆಲ್ಲಲು ನಮ್ಮ ಕುಟುಂಬದವರೇ ನಿಲ್ಲಬೇಕಿಲ್ಲ. ಸಾಮಾನ್ಯ ಕಾರ್ಯಕರ್ತರಿಗೆ ಕೊಟ್ಟರೂ ಗೆಲ್ಲುತ್ತಾರೆ. ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲುವ ಶಕ್ತಿಯಿದೆ. ಹಾಸನ ಜಿಲ್ಲೆಯನ್ನು ಹೆಚ್.ಡಿ.ರೇವಣ್ಣನವರಿಗೆ ಬಿಡಲಾಗಿದೆ. ಅವರು ಎಲ್ಲವನ್ನು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಬಗ್ಗೆ ಗೌರವ ಇಲ್ಲ ಅಂದ್ರೆ ಈ ಪಕ್ಷದಲ್ಲಿ ಯಾಕೆ ಇರ್ತೀಯಾ: ಯತ್ನಾಳ್‍ ವಿರುದ್ಧ ನಿರಾಣಿ ಏಕವಚನದಲ್ಲೇ ಗುಡುಗು

ಯಾರೇ ಹೋದರೂ ಪಕ್ಷಕ್ಕೆ ಧಕ್ಕೆ ಇಲ್ಲ
ನಮ್ಮ ಪಕ್ಷ ನಾಯಕರನ್ನು ತಯಾರು ಮಾಡುವ ಪಕ್ಷ. ನಮ್ಮಿಂದ ಹೋಗಿರೋರ ಚರಿತ್ರೆ ನೋಡಿ. ಬೇರೆ ಪಕ್ಷಗಳಿಗೆ ಹೋಗಿ ಏನಾಗಿದ್ದಾರೆ ಅವರೆಲ್ಲ. ನಮ್ಮಿಂದ ಯಾರೇ ಹೋದರೂ ನಮ್ಮ ಪಕ್ಷಕ್ಕೆ ಧಕ್ಕೆ ಇಲ್ಲ. ಇನ್ನು ಕೆಲ ದಿನಗಳಲ್ಲಿ 50-60 ಸೀಟ್‌ಗಳಿಗೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಹೊಸಬರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬರುತ್ತೇವೆ. ಇನ್ನು ಬೆಂಗಳೂರು ನಗರದಲ್ಲಿ ಈ ಬಾರಿ 6 ರಿಂದ 8 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpgujarath d kumaraswamysantro raviಗುಜರಾತ್ಬಿಜೆಪಿಸ್ಯಾಂಟ್ರೋ ರವಿಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

You Might Also Like

Mohammed Siraj
Cricket

ಸಿರಾಜ್‌ ಬೆಂಕಿ ಬೌಲಿಂಗ್‌, 20 ರನ್‌ ಅಂತರದಲ್ಲಿ 5 ವಿಕೆಟ್‌ ಪತನ – 244 ರನ್‌ ಮುನ್ನಡೆಯಲ್ಲಿ ಭಾರತ

Public TV
By Public TV
4 hours ago
Rahul Gandhi
Latest

ಬಿಹಾರ ಚುನಾವಣೆ| ಕಾಂಗ್ರೆಸ್‌ನಿಂದ ಸ್ಯಾನಿಟರಿ ಪ್ಯಾಡ್ – ವಿವಾದಕ್ಕೀಡಾದ ರಾಹುಲ್ ಗಾಂಧಿ ಚಿತ್ರ

Public TV
By Public TV
4 hours ago
Ranya Rao 2
Bengaluru City

ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ಮೌಲ್ಯದ ಆಸ್ತಿ ಜಪ್ತಿ

Public TV
By Public TV
4 hours ago
Eshwar Khandre 1
Bengaluru City

5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಚಕ್ರಪಾಣಿ ಸೇರಿ 3 ಅಧಿಕಾರಿಗಳ ಅಮಾನತಿಗೆ ಖಂಡ್ರೆ ಶಿಫಾರಸು

Public TV
By Public TV
5 hours ago
donald trump
Latest

ಟ್ರಂಪ್ ಬಿಗ್ ಬ್ಯೂಟಿಫುಲ್ ಬಿಲ್‌ಗೆ ಒಪ್ಪಿಗೆ – ಭಾರತೀಯರಿಗೂ ಕಾದಿದೆ ಆಘಾತ

Public TV
By Public TV
6 hours ago
Chalwadi Narayanswamy
Bengaluru City

ಎಸ್‌ಸಿ ಜನಗಣತಿಯಲ್ಲಿ 50%ಕ್ಕಿಂತ ಹೆಚ್ಚು ಜನರು ಭಾಗವಹಿಸಲಾಗದು: ಛಲವಾದಿ ಆರೋಪ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?