Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Karnataka

ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ

Public TV
Last updated: November 2, 2021 5:28 pm
Public TV
Share
3 Min Read
h.d.kumaraswamy
SHARE

ಬೆಂಗಳೂರು: ಜೆಡಿಎಸ್‌ ಪಕ್ಷವು ಬಿಜೆಪಿ ಬಿ ಟೀಮ್‌ ಎಂದು ಕಾಂಗ್ರೆಸ್‌ ಪಕ್ಷದ ನಾಯಕರು ನಡೆಸಿದ ದುರುದ್ದೇಶಪೂರಿತ ಅಪಪ್ರಚಾರಕ್ಕೆ ಉಪ ಚುನಾವಣೆ ಫಲಿತಾಂಶವೇ ಉತ್ತರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಹೇಳಿದರು.

sindagi 2

ಉಪ ಚುನಾವಣೆ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷವು ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಸ್ಪರ್ಧೆ ಮಾಡಿತ್ತು ಎಂದು ಹೇಳಿದ್ದ ಕಾಂಗ್ರೆಸ್‌ ಪಕ್ಷಕ್ಕೆ ಸಿಂದಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ಸಿಕ್ಕಿರುವ ಮತಗಳೇ ಉತ್ತರ ನೀಡಿವೆ ಎಂದು ಕುಟುಕಿದರು. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ; ಜಯದ ನಗೆ ಬೀರಿದ ಬಿಜೆಪಿ

ಸ್ಥಳೀಯ ಕಾರ್ಯಕರ್ತರ ಒತ್ತಾಸೆಯ ಮೇರೆಗೆ ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ನಿಲ್ಲಿಸಲಾಯಿತು. ಕಾಂಗ್ರೆಸ್-ಬಿಜೆಪಿ ಪಕ್ಷಗಳು ಹೇಳಿರುವಂತೆ ನಾನು ಉಪ ಚುನಾವಣೆ ಫಲಿತಾಂಶಕ್ಕೆ ಮಹತ್ವ ನೀಡುವುದಿಲ್ಲ. ನಮ್ಮ ಗುರಿ ಏನಿದ್ದರೂ 2023ರ ಚುನಾವಣೆ ಮೇಲೆ ಕೇಂದ್ರೀಕೃತವಾಗಿದೆ ಎಂದು ಹೆಚ್‌ಡಿಕೆ ತಿಳಿಸಿದರು.

hanagal bypoll 2

ಸಿಂದಗಿ ವಿಧಾನಸಭೆ ಕ್ಷೇತ್ರಕ್ಕೆ ನಮ್ಮ ಪಕ್ಷ ಸಾಕಷ್ಟು ಕೊಡುಗೆ ನೀಡಿದೆ. ಪ್ರಚಾರದ ವೇಳೆ ನಾನು ಐವತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಭೇಟಿ ನೀಡಿದ್ದೆ. ಜನರ ಸ್ಪಂದನೆ ಉತ್ತಮವಾಗಿತ್ತು. ದೇವೇಗೌಡರು ಮುಖ್ಯಮಂತ್ರಿ ಮತ್ತು ಪ್ರಧಾನಿಯಾಗಿ ನೀಡಿದ್ದ ನೀರಾವರಿ ಯೋಜನೆಗಳ ಬಗ್ಗೆ, ನಾನು ಮುಖ್ಯಮಂತ್ರಿ ಆಗಿದ್ದಾಗ ನೀಡಿದ ಕಾರ್ಯಕ್ರಮಗಳು ಹಾಗೂ ಸಾಲ ಮನ್ನಾ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜನ ಮಾತನಾಡಿದ್ದರು. ಸ್ವತಃ ಜನರೇ ನನ್ನ ಬಳಿಗೆ ಬಂದು ಈ ಬಗ್ಗೆ ಮಾತನಾಡುತ್ತಿದ್ದರು. ಆದರೂ ಈ ರೀತಿಯ ಫಲಿತಾಂಶ ಬಂದಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾನಗಲ್‌ನಲ್ಲಿ ಕಾಂಗ್ರೆಸ್‌ಗೆ ಗೆಲುವು – ತವರು ಜಿಲ್ಲೆಯಲ್ಲೇ ಸಿಎಂಗೆ ಮುಖಭಂಗ

ಮನಗೂಳಿ ಮಗನ ಹೈಜಾಕ್
ಮಾಜಿ ಸಚಿವ ಎಂ.ಸಿ.ಮನಗೂಳಿ ಮರಣದ ನಂತರ ಅವರ ಪುತ್ರ ಅಶೋಕ್‌ ಮನಗೂಳಿ ಅವರನ್ನು ಕಾಂಗ್ರೆಸ್‌ ಹೈಜಾಕ್‌ ಮಾಡಿತು. ಜತೆಗೆ, ನಮ್ಮ ಸಂಘಟನೆಯನ್ನೂ ದುರ್ಬಲ ಮಾಡಲಾಗಿತ್ತು. ಇದು ನನ್ನ ಗಮನದಲ್ಲಿತ್ತು. ಮತಗಟ್ಟೆಗಳಲ್ಲಿ ಕಾರ್ಯಕರ್ತರನ್ನು ಗುರುತಿಸುವುದೇ ದೊಡ್ಡ ಸವಾಲಾಗಿತ್ತು. ಈ ಕಾರಣಕ್ಕೆ ನಮಗೆ ಹಿನ್ನಡೆ ಉಂಟಾಯಿತು. ಆದರೂ ಈ ಫಲಿತಾಂಶದಿಂದ ನಾನು ಅಧೀರನೂ ಆಗಿಲ್ಲ, ನನಗೆ ಆತಂಕವೂ ಇಲ್ಲ ಎಂದು ಪ್ರತಿಕ್ರಿಯಿಸಿದರು.

sindagi 3

ಹಾನಗಲ್‌ನಲ್ಲಿ ನಮಗೆ ನೆಲೆ ಇರಲಿಲ್ಲ. ಆದರೆ, ಸಿಂದಗಿಯಲ್ಲಿ ನಮ್ಮವರೇ ಶಾಸಕರಿದ್ದರು. ಯಾವ ಚುನಾವಣೆಯಲ್ಲೂ ಕಾಂಗ್ರೆಸ್‌ ಎರಡನೇ ಸ್ಥಾನಕ್ಕೆ ಬಂದಿರಲಿಲ್ಲ. ಯಾವಾಗಲೂ ಇಲ್ಲಿ ಜೆಡಿಎಸ್-ಬಿಜೆಪಿ ನಡುವೆ ಸ್ಪರ್ಧೆ ಇರುತ್ತಿತ್ತು ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ಜನ ರಾಜ್ಯದಲ್ಲಿ ಬದಲಾವಣೆ ಬಯಸುತ್ತಿದ್ದಾರೆ: ಡಿಕೆ ಶಿವಕುಮಾರ್

ಸಾಮಾನ್ಯವಾಗಿ ಎಲ್ಲರಿಗೂ ತಿಳಿದಂತೆ ಉಪ ಚುನಾವಣೆಗಳು ನಡೆಯುವ ಬಗೆಯೇ ಬೇರೆ, ಸಾರ್ವತ್ರಿಕ ಚುನಾವಣೆಗಳು ನಡೆಯುವ ರೀತಿಯೇ ಬೇರೆ ಎಂದ ಅವರು, ನಮ್ಮ ಪಕ್ಷ 2023ನೇ ವಿಧಾನಸಭೆ ಚುನಾವಣೆ ಮೇಲೆ ಪೂರ್ಣ ಗಮನ ಕೇಂದ್ರೀಕರಿಸಿದೆ. ಅದಕ್ಕೆ ಬಿಡದಿಯಲ್ಲಿ ಸಂಘಟನಾ ಕಾರ್ಯಗಾರವನ್ನೂ ನಡೆಸಲಾಯಿತು. ಈಗ ಪಕ್ಷದ ಸಂಘಟನೆಯತ್ತಲೇ ನಾವು ಗಮನ ಇರಿಸಿದ್ದೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

bommai 3

ಹಣದಿಂದಲೇ ಚುನಾವಣೆ ನಡೆದಿದೆ
ಉಪ ಚುನಾವಣೆಗಳು ನಡೆಯುವುದು ಹಣಬಲದಿಂದಲೇ ಎನ್ನುವುದು ಎಲ್ಲರೂ ಬಲ್ಲ ಸಂಗತಿ. ಸಿಂದಗಿಯಲ್ಲಿ ಕೊನೆ ಆಟ ಎಂದಿದ್ದ ಸಚಿವರೊಬ್ಬರ ಹೇಳಿಕೆಯನ್ನು ಮಾಧ್ಯಮಗಳೇ ವರದಿ ಮಾಡಿವೆ. ಹಾನಗಲ್‌ ಮತ್ತು ಸಿಂದಗಿ ಕ್ಷೇತ್ರದಲ್ಲಿ ಹಣದ ಹೊಳೆ ಹರಿದಿದೆ ಎನ್ನುವುದನ್ನು ಎಲ್ಲ ಮಾಧ್ಯಮಗಳೂ ವರದಿ ಮಾಡಿವೆ. ಬಿಜೆಪಿ-ಕಾಂಗ್ರೆಸ್‌ ಎರಡೂ ಪಕ್ಷಗಳು ಅಧಿಕಾರದಲ್ಲಿದ್ದಾಗ ಇದೇ ಆಗಿದೆ. ಸಿದ್ದರಾಮಮಯ್ಯ ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಗುಂಡ್ಲುಪೇಟೆ ಮತ್ತು ನಂಜನಗೂಡು ಉಪ ಚುನಾವಣೆಗಳ ಕಥೆ ಏನೂ ಎನ್ನುವುದು ತಿಳಿದ ವಿಷಯವೇ ಎಂದು ಮಾರ್ಮಿಕವಾಗಿ ನುಡಿದರು.‌

ಉಪ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಾರೆ ಎಂದು ಒತ್ತಿ ಹೇಳಿದರು.

HD Kumaraswamy at Bidadi 1

8ರಿಂದ ಜಿಲ್ಲಾವಾರು ಸಭೆ
ಇದೇ ನವೆಂಬರ್‌ 8ರಿಂದ 16ರವರೆಗೆ ಪಕ್ಷದ ಕಚೇರಿಯಲ್ಲಿ ಪ್ರತಿ ಜಿಲ್ಲಾವಾರು ಸಭೆಗಳನ್ನು ಕರೆಯಲಾಗಿದೆ. ಪ್ರತಿದಿನ ನಾಲ್ಕು ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ನಡೆಸಲಿದ್ದೇನೆ. ಪದಾಧಿಕಾರಿಗಳು ಹಾಗೂ ಸಂಭವನೀಯ ಅಭ್ಯರ್ಥಿಗಳು ಈ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ. ತಳಮಟ್ಟದಿಂದ ಪಕ್ಷವನ್ನು ಕಟ್ಟುವುದು ಹಾಗೂ ವಿಷಯಾಧಾರಿತವಾಗಿ ಹೋರಾಟ ನಡೆಸುವುದು ನಮ್ಮ ಗುರಿ. ಈ ನಿಟ್ಟಿನಲ್ಲಿ ೨೦೨೩ಕ್ಕೆ ಪಕ್ಷವನ್ನು ಸಜ್ಜುಗೊಳಿಸುತ್ತಿದ್ದೇವೆ ಎಂದು ತಿಳಿಸಿದರು.

TAGGED:Bypollh d kumaraswamyPublic TVಉಪ ಚುನಾವಣೆಪಬ್ಲಿಕ್ ಟಿವಿಫಲಿತಾಂಶಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Priyank kharge 1
Karnataka

AI Impact ಶೃಂಗಸಭೆಯಲ್ಲಿ ರಾಜ್ಯದ ಸಾಧನೆ ಪ್ರದರ್ಶನ – ಎಐ ಕ್ಷೇತ್ರ, ನವೋದ್ಯಮಗಳ ಮುಖ್ಯಸ್ಥರ ಜೊತೆ ಪ್ರಿಯಾಂಕ್ ಖರ್ಗೆ ಸಮಾಲೋಚನೆ

Public TV
By Public TV
18 minutes ago
India AI Impact Summit Guinness World Record
Latest

ಇಂಡಿಯಾ ಎಐ ಶೃಂಗದಲ್ಲಿ ಗಿನ್ನೆಸ್‌ ವರ್ಲ್ಡ್‌ ರೆಕಾರ್ಡ್‌ – ಜವಾಬ್ದಾರಿಯುತವಾಗಿ AI ಬಳಸುವ ಪ್ರತಿಜ್ಞೆ ಮಾಡಿದ 2.5 ಲಕ್ಷ ಜನರು

Public TV
By Public TV
39 minutes ago
Nelamangala Crime 1
Bengaluru Rural

ವೃದ್ಧೆಯ ಹತ್ಯೆಗೈದು ದರೋಡೆ – ಸಾಲ ತೀರಿಸೋಕೆ ಚಿನ್ನಾಭರಣ ಎಗರಿಸಿ ಪಕ್ಕದ ಮನೆಯವನಿಂದ್ಲೇ ಕೊಲೆ

Public TV
By Public TV
54 minutes ago
Anil Ambani
Court

ಅನುಮತಿ ಇಲ್ಲದೆ ಭಾರತ ತೊರೆಯುವುದಿಲ್ಲ – ಸುಪ್ರೀಂಗೆ ಅನಿಲ್ ಅಂಬಾನಿ ಮುಚ್ಚಳಿಕೆ

Public TV
By Public TV
55 minutes ago
majestic bus stand
Bengaluru City

ಸಾರಿಗೆ ಮುಷ್ಕರ ಎಫೆಕ್ಟ್; ಪ್ರಯಾಣಿಕರ ಸಂಖ್ಯೆ ಇಳಿಕೆ – ಬಸ್ ಸಂಚಾರ ಇದ್ರೂ ಪ್ರಯಾಣಿಕರಿಲ್ಲ

Public TV
By Public TV
57 minutes ago
Vijayapura Murder
Crime

ಪತ್ನಿ ಕೊಂದು ಮನೆಯಲ್ಲೇ ಹೂತಿದ್ದ ಕೇಸ್ – ಕೊಲೆ ಬಳಿಕ ನಾಪತ್ತೆಯಾಗಿರುವ ನಾಟಕವಾಡಿ ದೂರು ನೀಡಿದ್ದ ಹಂತಕ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?