ಮೋದಿ ಕಾಲದಲ್ಲಿ ಜನ ಸಂಪದ್ಭರಿತರಾಗಿದ್ದಾರೆ, ಅದ್ಕೆ ಬೆಲೆ ಏರಿಕೆ ಬಗ್ಗೆ ಪ್ರಶ್ನಿಸುತ್ತಿಲ್ಲ: ಹೆಚ್‌ಡಿಕೆ

Public TV
2 Min Read
KUMARASWAMY

ಬೆಂಗಳೂರು: ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಸಂಪದ್ಭರಿತರಾಗಿದ್ದಾರೆ. ಅದಕ್ಕೆ ಬೆಲೆ ಏರಿಕೆ ಬಗ್ಗೆ ಯಾರೂ ಪ್ರಶ್ನೆ ಮಾಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಆಡಳಿತದಲ್ಲಿ ಜನ ಸಂಪದ್ಭರಿತರಾಗಿದ್ದಾರೆ. ಹೀಗಾಗಿ ಜನ ಬೆಲೆ ಏರಿಕೆ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಬಹುಶಃ ಈ ಕಾರಣಕ್ಕೆ ಅವರು ಪ್ರತಿಭಟನೆ ಮಾಡುತ್ತಿಲ್ಲ. ಈಗಲಾದರೂ ಎಲ್ಲರೂ ಎಚ್ಚೆತ್ತು ಸಂಘಟನಾತ್ಮಕವಾಗಿ ಹೋರಾಟ ಮಾಡಬೇಕಿದೆ ತಿಳಿಸಿದರು. ಇದನ್ನೂ ಓದಿ: ಮುಸ್ಲಿಮರು ಈ ದೇಶದ ಪ್ರಜೆಗಳು, ಅವ್ರು ವ್ಯಾಪಾರ ಮಾಡದಂತೆ ಬಹಿಷ್ಕರಿಸುವುದು ಸರಿಯಲ್ಲ: ಎಚ್.ವಿಶ್ವನಾಥ್

NARENDRA MODI 1

ಜನರು ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದೇನು ದುರಂತ ಕಾದಿದೆಯೊ ಗೊತ್ತಿಲ್ಲ. ಬೆಲೆ ಏರಿಕೆ ವಿಚಾರ ಜನರಿಗೆ ಬೇಡವಾಗಿದೆ. ನಮ್ಮದು ಕೀರಲು ದನಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಭಿವೃದ್ಧಿ ಪೂರಕ ಚರ್ಚೆ ಮಾಡಲು ಬಿಜೆಪಿಯವರ ಬಳಿ ಸರಕಿಲ್ಲ. ಅದಕ್ಕಾಗಿಯೇ ಅವರು ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದಿದ್ದಾರೆ. ಮೂರ್ನಾಲ್ಕು ತಿಂಗಳ ಹಿಂದೆಯೇ ನಾನು ಈ ಬಗ್ಗೆ ಹೇಳಿದ್ದೆ. ಬಿಜೆಪಿ ಮತ್ತು ಅದರ ಅಂಗಸಂಸ್ಥೆಗಳು ಭಾವನಾತ್ಮಕ ವಿಚಾರಗಳನ್ಮು ಸಾರ್ವಜನಿಕವಾಗಿ ತೆಗೆದುಕೊಂಡು ಹೋಗುತ್ತಾರೆ ಎಂದು ತಿಳಿಸಿದ್ದೆ. ಅದರಂತೆ ರಾಜ್ಯದಲ್ಲಿ ಅಶಾಂತಿ ವಾತಾವರಣ ನಿರ್ಮಾಣ ಮಾಡಲಾಗುತ್ತಿದೆ. ಈಗ ಆರಂಭವಾಗಿದೆ ಅಷ್ಟೇ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹೆಡ್‌ಫೋನ್ ತೆಗೆದ ಯಡಿಯೂರಪ್ಪ – ಸಿದ್ದುಗೆ ಶಾಕ್!

petrol 13

ಅಭಿವೃದ್ಧಿ ಪೂರಕ ಚರ್ಚೆ ಮಾಡುವುದು ಸರ್ಕಾರಕ್ಕೆ ಬೇಕಿಲ್ಲ. ಉತ್ತರ ಭಾರತದ ಚುನಾವಣಾ ವಿಚಾರವನ್ನು ಕರ್ನಾಟಕಕ್ಕೆ ಪರಿಚಯಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಮುಂದೆ ಏನೇನು ಆಗುತ್ತದೋ ನನಗಂತೂ ಗೊತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಬರೆದಿದ್ದಾರೆ. ಅವರು ಬರೆದ ಗೀತೆಯನ್ನು ನಾವು ನಾಡಗೀತೆಯಾಗಿ ಅಳವಡಿಸಿಕೊಂಡಿದ್ದೇವೆ. ಇಂಥ ಸರ್ವ ಜನಾಂಗದ ತೋಟಕ್ಕೆ ಕೊಳ್ಳಿ ಇಡುವ ಕೆಲಸ ಆರಂಭವಾಗಿದೆ. ಇವರು ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಕೋಮು ಸಂಘರ್ಷ ಉಂಟು ಮಾಡಲು ಇದೆಲ್ಲ ಮಾಡುತ್ತಿದ್ದಾರೆ. ಕರಾವಳಿಯ ಸಂಘರ್ಷವನ್ನು ಇಡೀ ರಾಜ್ಯಕ್ಕೆ ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು

Share This Article
Leave a Comment

Leave a Reply

Your email address will not be published. Required fields are marked *