Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Kolar

ಮೇಲ್ಮನೆ ಚುನಾವಣೆ ಮೈತ್ರಿ ವಿಚಾರ ಭಾನುವಾರದೊಳಗೆ ನಿರ್ಧಾರ: ಹೆಚ್‌ಡಿಕೆ

Public TV
Last updated: December 4, 2021 11:22 pm
Public TV
Share
2 Min Read
KUMARASWAMY
SHARE

ಕೋಲಾರ: 2023ರ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷವು ಯಾವ ಪಕ್ಷಕ್ಕೆ ಬೆಂಬಲ ನೀಡಬೇಕು ಎಂಬುದನ್ನು ಭಾನುವಾರದೊಳಗೆ ತೀರ್ಮಾನ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮೇಲ್ಮನೆ ಚುನಾವಣೆ ನಿಮಿತ್ತ ಕೋಲಾರ ಜಿಲ್ಲೆಯಲ್ಲಿ ಇಂದು ಪ್ರಚಾರ ಕೈಗೊಂಡಿದ್ದು, ಬೆಳಗ್ಗೆ ಮುಳಬಾಗಿಲಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಬಿಜೆಪಿ ನಾಯಕರು ಬೆಂಬಲ ಕೇಳಿದ್ದಾರೆ ನಿಜ. ಎರಡು ದಿನದಲ್ಲಿ ನಮ್ಮ ಪಕ್ಷದ ಅಭಿಪ್ರಾಯ ಹೇಳುವುದಾಗಿ ನಾನು ಹೇಳಿರುವುದೂ ನಿಜ. ಇನ್ನೂ ಸಮಯ ಇದೆ, ಆತುರವೇನೂ ಇಲ್ಲ. 2023ರ ವಿಧಾನಸಭೆ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ ನಮ್ಮ ಪಕ್ಷದ್ದು. ಆ ಗೆಲುವಿಗೆ ಏನೆಲ್ಲ ಆಗಬೇಕೋ ಆ ಹಿನ್ನೆಲೆಯಲ್ಲಿ ಸ್ಥಳೀಯವಾಗಿಯೇ ಪಕ್ಷದ ನಾಯಕರು ಏನು ತೀರ್ಮಾನ ತೆಗೆದುಕೊಳ್ಳಬೇಕೋ ಎಂಬ ನಿರ್ದೇಶನವನ್ನು ನಾಳೆ ಅಥವಾ ನಾಡಿದ್ದರ ಒಳಗೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಭಗವಂತ ಖೂಬಾರನ್ನು ಶ್ವಾನಕ್ಕೆ ಹೋಲಿಸಿದ ಈಶ್ವರ್ ಖಂಡ್ರೆ

VIDHANASOUDHA

ಬಿಜೆಪಿ ಒಂದು ಕಡೆ ಬೆಂಬಲ ಕೇಳುತ್ತಿದ್ದು, ಮತ್ತೊಂದು ಕಡೆ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನ ಮಾಡುತ್ತಿದೆ. ಜೆಡಿಎಸ್ ಪಕ್ಷವನ್ನು ಸಂಪೂರ್ಣ ನಾಶ ಮಾಡಬೇಕೆಂದು ಎರಡೂ ರಾಷ್ಟ್ರೀಯ ಪಕ್ಷಗಳು ಪೈಪೋಟಿ ನಡೆಸುತ್ತಿವೆ. ಇದೆಲ್ಲವನ್ನು ಜನರು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. 2023ಕ್ಕೆ ಜನತೆಯಿಂದಲೇ ಇದೆಲ್ಲದ್ದಕ್ಕೂ ಉತ್ತರ ದೊರೆಯಲಿದೆ ಎಂದು ತಿಳಿಸಿದರು.

ಚುನಾವಣೆಗಳನ್ನು ಹೇಗೆ ಗೆಲ್ಲಬೇಕು ಎಂಬುದು ಬಿಜೆಪಿಗೆ ಚೆನ್ನಾಗಿ ಕರಗತವಾಗಿದೆ. ಹಣದಿಂದ ಗೆಲುವು ಸಾಧಿಸುವುದು ಹೇಗೆ ಎಂಬುದು ಆ ಪಕ್ಷಕ್ಕೆ ಚೆನ್ನಾಗಿ ತಿಳಿದಿದೆ. ರಾಜ್ಯದ ಹಣ ಲೂಟಿ ಮಾಡಿ ಆ ಪಕ್ಷ ಚುನಾವಣೆಗಳನ್ನು ಗೆಲ್ಲುತ್ತಿದೆ. ಆ ವಿಷಯದಲ್ಲಿ ಆ ಪಕ್ಷದ ನಾಯಕರಿಗೆ ಒಳ್ಳೆಯ ಅನುಭವ ಇದ್ದು, ಅದರಲ್ಲಿ ಅವರು ಯಶಸ್ಸು ಸಾಧಿಸಿದ್ದಾರೆ. ಇಂಥ ಗೆಲುವು ನಿರಂತರವಾಗಿ ಎಲ್ಲ ಸಂದರ್ಭಗಳಲ್ಲೂ ಆಗುತ್ತದೆ ಎಂದು ಅವರು ನಂಬಿದ್ದಾರೆ. ಅದಕ್ಕೆ ವಿರುದ್ಧವಾಗಿ ಜನರು ತೀರ್ಮಾನ ತೆಗೆದುಕೊಳ್ಳುವ ಕಾಲ ಬಂದಿದೆ. ಹಣ ಬಲದ ವಿರುದ್ಧ ಒಂದಲ್ಲ ಒಂದು ದಿನ ಜನರು ತಿರುಗಿ ಬೀಳುತ್ತಾರೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ 16 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ ಎಂಬ ಮಾಹಿತಿ ಇದೆ: ಹೆಚ್.ಕೆ.ಪಾಟೀಲ್

Siddaramaiah 1

ಸಿದ್ದರಾಮಯ್ಯಗೆ ಪರೋಕ್ಷ ಚಾಟಿ
ಚಿಹ್ನೆಯ ಮೇಲೆ ಈ ಚುನಾವಣೆ ನಡೆಯಲ್ಲ. ಕೋಲಾರ-ಚಿಕ್ಕಬಳ್ಳಾಪುರ ಸೇರಿ ನಾವು ಸ್ಪರ್ಧೆ ಮಾಡುರುವ ಆರು ಕ್ಷೇತ್ರಗಳಲ್ಲಿಯೂ ಮೂರು ಪಕ್ಷಗಳ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು, ತ್ರಿಕೋನ ಸ್ಪರ್ಧೆ ಇದೆ. ಈ ಚುನಾವಣೆಯಲ್ಲಿ ಹಣಕ್ಕಿಂತ ಹೆಚ್ಚಾಗಿ ಸ್ಥಳೀಯವಾಗಿರುವ ರಾಜಕೀಯ ಬೆಳವಣಿಗೆಗಳು ಪ್ರಭಾವ ಬೀರಲಿವೆ. ಹೀಗಿದ್ದರೂ ಚುನಾವಣೆ ಎಂದ ಕೂಡಲೇ ಕಾಂಗ್ರೆಸ್ ನಾಯಕರೊಬ್ಬರು ಜೆಡಿಎಸ್ ಪಕ್ಷಕ್ಕೆ ಸರ್ಟಿಫಿಕೇಟ್ ಕೊಡಲು ಮುಂದಾಗುತ್ತಾರೆ. 2018ರಿಂದಲೂ ಅವರಿಂದ ಈ ರೀತಿಯ ಹೇಳಿಕೆಗಳು ಆರಂಭವಾಗಿದ್ದು, ಇದು 2023ರ ವಿಧಾನಸಭೆ ಚುನಾವಣೆವರೆಗೂ ಮುಂದುವರಿಯಲಿವೆ ಎಂದು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಚಾಟಿ ಬೀಸಿದರು.

CORONA 2 1

ಓಮಿಕ್ರಾನ್ ನಿಯಂತ್ರಿಸಿ:
ರಾಜ್ಯದಲ್ಲಿ ಓಮಿಕ್ರಾನ್ ಬಗ್ಗೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದೇನೆ. ನಿನ್ನೆಯೂ ಈ ಬಗ್ಗೆ ಮಾತನಾಡಿದ್ದೇನೆ. ಸರ್ಕಾರವೂ ಹಲವಾರು ಸಭೆಗಳನ್ನು ಮಾಡುತ್ತಿದೆ. ಕೇವಲ ಸಭೆ ಮಾಡಿದರೆ ಉಪಯೋಗವಿಲ್ಲ. ಎರಡನೇ ಅಲೆಯಲ್ಲಿ ಉಂಟಾದ ಪ್ರಾಣಹಾನಿ ಈ ಬಾರಿ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಮುಕ್ತವಾಗಿ ಕೆಲಸ ಮಾಡಲು ವೈದ್ಯರಿಗೆ ಅವಕಾಶ ಕಲ್ಪಿಸಬೇಕು. ಅವರಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ನೀಡಿದರು.

TAGGED:h d kumaraswamyVidhan Parishad Electionವಿಧಾನ ಪರಿಷತ್ ಚುನಾವಣೆಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
8 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
17 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
1 day ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
51 minutes ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
1 hour ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
2 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
1 hour ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
1 hour ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?