Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಕಲ್ಲುಬಂಡೆಗಳನ್ನೇ ನುಂಗಿದ ʼರಕ್ಕಸ ರಾಜಕಾರಣ’

Public TV
Last updated: December 29, 2021 1:24 pm
Public TV
Share
3 Min Read
KUMARASWAMY
SHARE

ಬೆಂಗಳೂರು: ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ – ಜೆಡಿಎಸ್ ನಡುವೆ ರಾಜಕೀಯ ಗುದ್ದಾಟ ದಿನೇ ದಿನೇ ತೀವ್ರಗೊಳ್ಳುತ್ತಿದೆ. ಸರಣಿ ಟ್ವೀಟ್ ಮೂಲಕ‌ ಕಾಂಗ್ರೆಸ್ ನಾಯಕರ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ಇಂದು 13 ಟ್ವೀಟ್‌ಗಳಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕಟುವಾದ ಟೀಕೆ ಮಾಡಿದ್ದಾರೆ.

ಎಚ್‌ಡಿಕೆ ಟ್ವೀಟ್‌ನಲ್ಲೇನಿದೆ..?:
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ದಿನಾಂಕ ಮುಂದೂಡಲು ವಾಟಾಳ್ ನಾಗರಾಜ್‌ಗೆ ಕರವೇ ಪತ್ರ

ನಿಮ್ಮ ʼಬ್ರೂಟಸ್ʼ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ʼಸಿದ್ಧಕಲೆʼಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ. 23/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ ಎಂದು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

Siddaramaiah 1

ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ, ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ, ಸತ್ಯ ಸತ್ಯವೇ. ದೇವೇಗೌಡರು ಅಂತಹ ಸತ್ಯದ ಸಾಕ್ಷಿ. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ.

ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ. 11/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮನಮೋಹನ್ ಸಿಂಗ್ ಪಿಎಂ ಆಗಿದ್ದಾಗ ಈಗಿನಂತೆ ಗಡಿ ಸಮಸ್ಯೆ ಇದ್ದಿದ್ರೆ ರಾಜೀನಾಮೆ ಕೊಡ್ತಿದ್ರು: ಮೋದಿ ವಿರುದ್ಧ ರಾಗಾ ವಾಗ್ದಾಳಿ

DK SHIVAKUMAR AND KUMARASWAMY

ಆಗ ಸಿಎಂ ಆಗಿದ್ದ ಗೌಡರನ್ನು ತಡೆದ ಪಕ್ಷಕ್ಕೆ ಪ್ರಧಾನಿಯಾದ ಗೌಡರನ್ನು ತಡೆಯಲು ಧೈರ್ಯ ಸಾಲಲಿಲ್ಲ. ಕಾಂಗ್ರೆಸ್ ಕುತ್ಸಿತತನದಿಂದ ತಡೆಯಲ್ಪಟ್ಟಿದ್ದ 9 ಟಿಎಂಸಿ ನೀರು ರಾಜ್ಯಕ್ಕೆ ದಕ್ಕುವ ಯೋಜನೆಗೆ ಮಣ್ಣಿನಮಗ ಎದೆಗುಂದದೆ ಹಸಿರುನಿಶಾನೆ ತೋರಿದ್ದರು. ಜಪಾನ್ʼನಿಂದ ಹಣವನ್ನೂ ತಂದರು.

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು. 10/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ‘ ಕೃತಘ್ನ ‘ ರಾಜಕಾರಣಕ್ಕೆ ಏನು ಹೇಳುವುದು ಎಂದು ಪ್ರಶ್ನಿಸಿದ್ದಾರೆ.

d k shivakumar 1

ಕಾಂಗ್ರೆಸ್‌ನ 5 ವರ್ಷದ ಸರಕಾರವೇ ಇತ್ತು. ‘ಸಿದ್ದಹಸ್ತರೇ’ ಸಿಎಂ ಆಗಿದ್ದರು. ಆಗ ಕೇಂದ್ರದ ಮುಂದೆ ಪ್ರತಾಪ ತೋರಬಹುದಿತ್ತು. ಬರೀ ಮಾತಿನ ಉತ್ತರ ಪೌರುಷ. ಆಗ ಗಾಂಧೀಜಿ ಪ್ರತಿಮೆ ಮುಂದೆ ಉಪವಾಸ ಕೂತ ಮಣ್ಣಿನಮಗನ ಖದರಿಗೆ ಕೇಂದ್ರವೇ ನಡುಗಿತ್ತು. ದಿಲ್ಲಿಯಿಂದ ಮಂತ್ರಿಗಳು ಓಡಿಬಂದರು. ಅದೆಲ್ಲವನ್ನೂ ಕಾಂಗ್ರೆಸ್ ಮರೆತಿದೆಯಾ? ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೇತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ. 8/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ಹೌದು. ಜಾಣ ಮರೆವು ಕೂಡ ಒಂದು ರೋಗ. ಮಲತಾಯಿ ದೋರಣೆಯೇ ಮೈವೆತ್ತ ಕಾಂಗ್ರೆಸ್ ಈಗ ಪವಿತ್ರ ಗಂಗೆಯನ್ನೂ ಮತಕ್ಕೆ ಬಳಸುತ್ತಿದೆ. ಆಗ ಏನೂ ಮಾಡದ ʼಉತ್ತರಕುಮಾರ ಸಿದ್ದಸೂತ್ರಧಾರʼ, ಈಗೇನು ಮಾಡಲು ಸಾಧ್ಯ? ಆದರೆ; ರಾಜ್ಯದ ಹಿತದ ಪ್ರಶ್ನೆ ಬಂದಾಗ ಗೌಡರು ರಾಜಿಯಾದವರಲ್ಲ. ಅವರೊಬ್ಬರಿಂದಲೇ ಮೇಕೆದಾಟು ಯೋಜನೆ ಸಾಕಾರ ಸಾಧ್ಯ ಎಂದಿದ್ದಾರೆ.

HD KUMARASWAMY 4

ಇಲ್ಲಿ 30 ವರ್ಷ ಆಳಿದವರು ಕಾವೇರಿ-ಕೃಷ್ಣಾ ವಿಚಾರದಲ್ಲಿ ಕೊಟ್ಟ ಕೊಡುಗೆ ಏನು? ಕಾಂಗ್ರೆಸ್ ನಡಿಗೆ ಕೃಷ್ಣೆಯ ಕಡೆಗೆ ಎಂದು ಸ್ಲೋಗನ್ ಹೇಳಿಕೊಂಡು ಹೋಗಿ ಉತ್ತರ ಕರ್ನಾಟಕಕ್ಕೆ ಟೋಪಿ ಹಾಕಿದ್ದಾಗಿದೆ. ಮೇಕೆದಾಟು ವಿಚಾರದಲ್ಲಿಯೂ ಅದೇ ಆಗಲಿದೆ ಎಂದರು.

ಬೆಂಗಳೂರಿಗೆ ಕಾವೇರಿ ನೀರು ಕೊಟ್ಟವರು ದೇವೇಗೌಡರು. ಜೀವಜಲ ತಂದು ಬವಣೆ ನೀಗಿಸಿದವರು ಅವರೇ. ಈ ಭಗೀರಥನನ್ನೇ ಮರೆತ ಕಾಂಗ್ರೆಸ್ ' ಕೃತಘ್ನ ' ರಾಜಕಾರಣಕ್ಕೆ ಏನು ಹೇಳುವುದು? 6/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ದೇವೇಗೌಡರು ಕೃಷ್ಣೆ, ಕಾವೇರಿ ಕೊಳ್ಳದಲ್ಲಿ ಮಾಡಿದ ಸಾಧನೆಗಳನ್ನು ತಿಳಿಯಲು ಇತಿಹಾಸದ ಪುಟಗಳನ್ನು ತೆರೆದು ನೋಡಬೇಕು.

h.d.kumaraswamy

ಈಗ ಬೇಕಿರುವುದು ತಾಂತ್ರಿಕವಾಗಿ ಮೇಕೆದಾಟು ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಬೇಕು. ಕೇಂದ್ರದ ಮೇಲೆ ಒತ್ತಡ ತಂದು ಯೋಜನೆಗೆ ಒಪ್ಪಿಗೆ ಪಡೆಯಲು ಹೋರಾಟ ನಡೆಸಬೇಕು. ಅದು ಬಿಟ್ಟು ಹೊಸ ಸ್ಲೋಗನ್ ಅಗತ್ಯ ಇಲ್ಲ.

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. 2/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ಪಾಪ ತೊಳೆಯುವ ತಾಯಿ ‘ಲೋಕಪಾವನಿ’ ಈಗ ವೋಟಿನ ದಾಳವಾಗುತ್ತಿರುವುದು ನಾಡಿನ ದುರ್ದೈವ. ನೀರಿನ ಮುಂದೆ ʼಕಪಟ ನಾಟಕʼ ಮಾಡುವ ಸಿದ್ದಹಸ್ತ, ಡಿಸೈನ್ ಶೂರರಿಗೆ ಮುಂದೆ ಕಾದಿದೆ ಶಾಸ್ತಿ. ಭೂತಾಯಿ ಒಡಲಿನ ಮಣ್ಣು ಬಗೆದ, ಕಲ್ಲುಬಂಡೆಗಳನ್ನೇ ನುಂಗಿದ ‘ರಕ್ಕಸ ರಾಜಕಾರಣ’ದ ಕಾಕದೃಷ್ಟಿ ಈಗ ತಾಯಿ ಕಾವೇರಿ ಮೇಲೂ ಬಿದ್ದಿದೆ.

ಬೆಂಗಳೂರಿನ ನ್ಯಾಯಯುತ ಪಾಲು, ಕಾವೇರಿ 4ನೇ ಹಂತದ 9 ಟಿಎಂಸಿ ನೀರನ್ನು ತಮಿಳುನಾಡಿನ ಒತ್ತಡಕ್ಕೆ ಮಣಿದು ತಡೆದಿತ್ತು ಕಾಂಗ್ರೆಸ್. ಆಗ ಪಿ.ವಿ.ನರಸಿಂಹರಾವ್ ಪ್ರಧಾನಿ. ಕನ್ನಡಿಗರ ಕನಸುಗಳಿಗೆ ಕೊಳ್ಳಿ ಇಟ್ಟ ಅದೇ ಪಕ್ಷ ಈಗ ಸತ್ಯಗಳನ್ನು ಹೂತು ಮುಜುಗರವಿಲ್ಲದೆ ಮತಯಾತ್ರೆಗೆ ಹೊರಟಿದೆ. 4/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

ನಿಮ್ಮ ‘ಬ್ರೂಟಸ್’ ಬುದ್ಧಿ, ಸರಕಾರವನ್ನೇ ಸ್ವಾಹ ಮಾಡಿದ ‘ಸಿದ್ಧಕಲೆ’ಯ ಬಗ್ಗೆ 2018ರಲ್ಲೇ ನನಗೆ ಅರಿವಾಯಿತು. ‘ಕೈ’ ಚಿಹ್ನೆ ಇಟ್ಟುಕೊಂಡು ಕಂಡೋರ ಮೇಲೆ ʼಕೈʼ ಇಡುವ ಭಸ್ಮಾಸುರ ರಾಜಕಾರಣದ ಅನುಭವ ನನಗೂ, ದೇವೇಗೌಡರಿಗೂ ಆಗಿದೆ. ಈ ಪಾದಯಾತ್ರೆ ಯಿಂದ ಜನರಿಗೇನು ಸಂದೇಶ ನೀಡುತ್ತಿದ್ದೀರಿ ಎಂದು ಪ್ರಶ್ನಿಸಿದ್ದಾರೆ.

ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಶ್ರೀ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ. 2/13

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 29, 2021

 

TAGGED:d k shivakumarh d kumaraswamymekedatu padayatresiddaramaiahtweetಟ್ವೀಟ್ಡಿ.ಕೆ.ಶಿವಕುಮಾರ್ಮೇಕೆದಾಟು ಪಾದಯಾತ್ರೆಸಿದ್ದರಾಮಯ್ಯಹೆಚ್‌.ಡಿ.ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
7 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
7 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
8 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
8 hours ago
Lakshmi Hebbalkar
Belgaum

ರಾಹುಲ್‌ ಗಾಂಧಿ ಜೊತೆ ಯುವಕರು ಸೈನಿಕರಾಗಿ ಕೆಲಸ ಮಾಡಬೇಕು: ಲಕ್ಷ್ಮಿ ಹೆಬ್ಬಾಳ್ಕರ್

Public TV
By Public TV
9 hours ago
American Airlines 1
Latest

ಟೇಕಾಫ್‌ ವೇಳೆ ಕೈಕೊಟ್ಟ ಲ್ಯಾಂಡಿಂಗ್‌ ಗೇರ್‌ – ಬೋಯಿಂಗ್ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?