ಬೆಂಗಳೂರು: ದೇಶವೆಂದರೆ ಮಣ್ಣಲ್ಲ, ಮನುಷ್ಯರು ಎಂದು ಬಿಜೆಪಿ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ಹಲಾಲ್ ಕಟ್ ಸಂಘರ್ಷದ ನಡುವೆ ಹೆಚ್.ಡಿ ಕುಮಾರಸ್ವಾಮಿ ಅವರು ತಮ್ಮ ಟ್ವಿಟ್ಟರ್ನಲ್ಲಿ, ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಕರಪತ್ರಗಳನ್ನು ಹಂಚಿ ಸಮಾಜ ಒಡೆಯುತ್ತಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ ಬಗ್ಗೆ ನನ್ನ ಹೇಳಿಕೆಯಲ್ಲಿ ಯಾವ ಬದಲಾವಣೆಯೂ ಇಲ್ಲ. ಧರ್ಮ-ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ. ‘ಧರ್ಮೋದ್ಧಾರದ ಸೋಗಿನಲ್ಲಿ ಅಶಾಂತಿ’ ಸೃಷ್ಟಿಸುವ ಕೃತ್ಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ.1/11
— H D Kumaraswamy (@hd_kumaraswamy) April 1, 2022
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ. ಇದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇವಲ 1 ರೂ. ಸಂಬಳ ತೆಗೆದುಕೊಳ್ಳುತ್ತೇನೆ: ಪಂಜಾಬ್ನ ಹೊಸ ಅಡ್ವೊಕೇಟ್ ಜನರಲ್
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ.ಇದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಜಹಗೀರಲ್ಲ. ಇವೇನು ಹಿಂದೂಗಳ ಪ್ರಾತಿನಿಧಿಕ ಸಂಸ್ಥೆಗಳೂ ಅಲ್ಲ. ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳಷ್ಟೇ. ಹಿಂದೂ, ಹಿಂದುತ್ವ ಎನ್ನುವ ಪರಂಪರೆ ಇವರ ಗುತ್ತಿಗೆಯಲ್ಲ. 2/11
— H D Kumaraswamy (@hd_kumaraswamy) April 1, 2022
ಧರ್ಮೋ ರಕ್ಷತಿ ರಕ್ಷಿತಃ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರನ್ನು ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ಒಡೆದ ಮಡಿಕೆ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು ಎಂದು ಹೇಳಿದ್ದಾರೆ.
ʼಧರ್ಮೋ ರಕ್ಷತಿ ರಕ್ಷಿತಃʼ ಎನ್ನುವುದರ ಅರಿವು ನನಗೂ ಇದೆ. ಧರ್ಮ ರಕ್ಷಣೆ ಎಂದರೆ ಇನ್ನೊಬ್ಬರ ಅನ್ನ ಕಸಿಯುವುದಲ್ಲ? ನೆಮ್ಮದಿಯ ನಾಡಿಗೆ ಕಿಚ್ಚಿಡುವುದಲ್ಲ? ಮನಸ್ಸುಗಳನ್ನು ಒಡೆದು ದೇಶವನ್ನು ʼಒಡೆದ ಮಡಿಕೆʼ ಮಾಡುವುದಲ್ಲ. ದೇಶವೆಂದರೆ ಮಣ್ಣಲ್ಲ, ಮನುಷ್ಯರು. 3/11
— H D Kumaraswamy (@hd_kumaraswamy) April 1, 2022
ವಿಶ್ವ ಹಿಂದೂ ಪರಿಷತ್, ವಿಶ್ವ ವಿನಾಶಕ ಪರಿಷತ್ ಅಥವಾ ಧರ್ಮ ವಿನಾಶಕ ಪರಿಷತ್ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವುದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಉಡ್ತಾ ಪಂಜಾಬ್ ಅಲ್ಲ, ಪ್ರಗತಿಪರ ಪಂಜಾಬ್: ಭಗವಂತ್ ಮಾನ್
ವಿಶ್ವ ಹಿಂದೂ ಪರಿಷತ್, ʼವಿಶ್ವ ವಿನಾಶಕ ಪರಿಷತ್ʼ ಅಥವಾ ʼಧರ್ಮ ವಿನಾಶಕ ಪರಿಷತ್ʼ ಆಗುವುದು ಬೇಡ. ಬಜರಂಗದಳ ಭಾವನೆಗಳ ಭಯೋತ್ಪಾದಕ ಆಗುವದು ಬೇಡ. ಹಿಂದೂ ಧರ್ಮದ ನಾಶ ಚಕ್ರವರ್ತಿ, ಸಾಮ್ರಾಟರಿಗೇ ಆಗಲಿಲ್ಲ. ಹಿಂದುತ್ವ ಅಂದೂ ಉಳಿದಿತ್ತು, ಮುಂದೆಯೂ ಉಳಿಯುತ್ತದೆ. ನಿಮ್ಮ ಕಿತಾಪತಿ ಏಕೆ? 4/11
— H D Kumaraswamy (@hd_kumaraswamy) April 1, 2022
ಕೊರೊನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ಶವ ಸಂಸ್ಕಾರದಲ್ಲೂ ಕೀರ್ತಿಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ ಎಂದು ಕಿಡಿಕಾರಿದ್ದಾರೆ.
ಕೊರೋನಾ ಕಾಲದಲ್ಲಿ ನೀವೊಬ್ಬರೇ ಜನರ ಸೇವೆ ಮಾಡಿಲ್ಲ. ಎಲ್ಲರೂ ಜಾತಿ, ಧರ್ಮ ಮೀರಿ ಸೇವೆ ಮಾಡಿದ್ದಾರೆ. ʼಶವ ಸಂಸ್ಕಾರದಲ್ಲೂ ಕೀರ್ತಿʼಯನ್ನು ಹುಡುಕುವ ನಿಮ್ಮಗಳ ವಿಕೃತ ಮನಸ್ಥಿತಿಗೆ ನನ್ನ ಮರುಕವಿದೆ. ಇದಾ ನಿಮ್ಮ ಧರ್ಮ? 5/11
— H D Kumaraswamy (@hd_kumaraswamy) April 1, 2022
ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರ್ಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಸುರೇಶ್ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ.
ಸೋಂಕಿಗೆ ಬಲಿಯಾದವರ ಪಾರ್ಥೀವ ಶರೀರಗಳನ್ನು ನೀವು ಬಾಲಂಗೋಚಿ ಆಗಿರುವ ಪಕ್ಷದ ಸರಕಾರ ಹೇಗೆ ಕಂಡಿತು ಎಂಬುದಕ್ಕೆ ದಿವಂಗತ ಕೇಂದ್ರ ಮಂತ್ರಿ ಶ್ರೀ ಸುರೇಶ ಅಂಗಡಿಯವರೇ ಸಾಕ್ಷಿ. ಅವರ ಅಂತ್ಯಕ್ರಿಯೆ ಹೇಗಾಯಿತು ಎಂದು ಮಾಧ್ಯಮಗಳ ಮೂಲಕ ಕಣ್ಣಾರೆ ನೋಡಿದ್ದೇನೆ. 6/11
— H D Kumaraswamy (@hd_kumaraswamy) April 1, 2022
ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲಾ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಅಂದು ಕೇಂದ್ರ-ರಾಜ್ಯ ಸರಕಾರಗಳ ವೈಫಲ್ಯಗಳು ಯಾವ ಮಟ್ಟದಲ್ಲಿದ್ದವು? ಬೆಂಗಳೂರಿನಲ್ಲಿ ಯಾರೆಲ್ಲ ಶವ ಸಂಸ್ಕಾರ ಮಾಡಿದರು ಎನ್ನುವುದನ್ನು ನಾವೂ ಮಾಧ್ಯಮಗಳಲ್ಲಿ ಕಂಡಿದ್ದೇವೆ. ಆಗ ಇವರೆಲ್ಲ ಎಲ್ಲಿದ್ದರೋ ನನಗಂತೂ ಗೊತ್ತಿಲ್ಲ. 7/11
— H D Kumaraswamy (@hd_kumaraswamy) April 1, 2022
ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರ್ಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ ಎಂದು ಪ್ರಶ್ನಿಸುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಂಜಾಬ್ನಲ್ಲಿ `ಆಪ್’ ಸುನಾಮಿಗೆ ಕಾಂಗ್ರೆಸ್ ತತ್ತರ- ಚನ್ನಿ, ಸಿಧು, ಕ್ಯಾಪ್ಟನ್ಗೆ ಹೀನಾಯ ಸೋಲು
ಡಿಜೆ ಹಳ್ಳಿ ಗಲಭೆ ಕಾರಣದ ಬಗ್ಗೆ ನೀವು ಏಕೆ ದನಿಯೆತ್ತುವುದಿಲ್ಲ? ಠಾಣೆಗೆ ಬೆಂಕಿ ಬಿದ್ದಾಗ ಅದರಲ್ಲಿ ಚಳಿ ಕಾಯಿಸಿಕೊಂಡವರು ನೀವು. ಧರ್ಮದ ಪಾಠ ಮಾಡುವ ನೀವು, ಧರ್ಮಗುರುಗಳಿಗೆ ಗೌರವ ಕೊಡಬೇಕು ಎನ್ನುವುದನ್ನೂ ತಿಳಿದಿರಬೇಕಲ್ಲವೇ? ನೀವು ಬಾಲಂಗೋಚಿ ಆಗಿರುವ ಸರಕಾರದ ಬೇಹುಗಾರಿಕೆ ವಿಭಾಗ ನಿದ್ದೆ ಮಾಡುತ್ತಿತ್ತು, ಏಕೆ? 8/11
— H D Kumaraswamy (@hd_kumaraswamy) April 1, 2022
ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144 ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಬ್ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ ಎಂದಿದ್ದಾರೆ.
ಧರ್ಮ ರಕ್ಷಣೆ ಎಂದರೆ ಶಿವಮೊಗ್ಗದಲ್ಲಿ ಸಚಿವರೇ 144 ಸೆಕ್ಷನ್ ಉಲ್ಲಂಘಿಸುವುದಾ? ಅವರೇ ನಿಂತು ಹಿಂಸೆಗೆ ಪ್ರಚೋದನೆ ಕೊಡುವುದಾ? ನಾವ್ಯಾರೂ ಹೀಗೆ ಮಾಡಿಲ್ಲ. ಸಮಾಜಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಎಂದು ನೇರವಾಗಿ ಹೇಳಿದ್ದೇನೆ. ಹಿಜಾಬ್ ಗಲಾಟೆ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಿ ಎಂದು ಸದನದಲ್ಲೇ ಆಗ್ರಹಿಸಿದ್ದೇನೆ. 9/11
— H D Kumaraswamy (@hd_kumaraswamy) April 1, 2022
ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ? ಅಶಾಂತಿಯ ಅಶ್ವಮೇಧ? ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ ಎಂದು ತಿಳಿಸಿದ್ದಾರೆ.
ಜಗತ್ತಿಗೆ ಶಾಂತಿ ಸಂದೇಶ ಕೊಟ್ಟ ಕುವೆಂಪು ಅವರು ಜನಿಸಿದ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತಿ ಹಬ್ಬ-ಹರಿದಿನದಲ್ಲಿ ನೀವು ಮಾಡುತ್ತಿರುವುದೇನು? ಸೂಕ್ಷ್ಮ ಭಾವನೆಗಳನ್ನು ಕೆರಳಿಸಿ ʼಅಶಾಂತಿಯ ಅಶ್ವಮೇಧʼ ನಡೆಸುತ್ತಿದ್ದೀರಿ. ಬೆಂಕಿ ಹಾಕುವುದು, ಕಲ್ಲು ಹೊಡೆಯುವುದು ನನ್ನ ಅಥವಾ ನನ್ನ ಪಕ್ಷದ ಸಂಸ್ಕೃತಿ ಅಲ್ಲ. 10/11
— H D Kumaraswamy (@hd_kumaraswamy) April 1, 2022
ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ?ಭಾವನೆಗಳ ದಾಳಗಳು? ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ ಎಂದಿದ್ದಾರೆ.
ನಿಮಗೆ ದೇಶ, ಸಂವಿಧಾನದ ಮೇಲೆ ಗೌರವ ಇಲ್ಲ. ಜನರೆಂದರೆ ನಿಮ್ಮ ಪಾಲಿಗೆ ʼಭಾವನೆಗಳ ದಾಳಗಳುʼ ಮಾತ್ರ. ನಿಜವಾದ ಹಿಂದೂ ಎಂದೂ ಸಮಾಜ ಒಡೆಯಲಾರ. “ಹಿಂದೂ ಎಂದರೆ ಎಲ್ಲರೂ ಒಂದು” ಎನ್ನುವ ಆದರ್ಶ & ಪರಂಪರಾಗತ ನಂಬಿಕೆ. ಈ ನಂಬಿಕೆಯ ಮೇಲೆಯೇ ಭಾರತ ನಿಂತಿದೆ. ಭಾವನೆಗಳನ್ನು ಹೇರಿ ಭಾರತವನ್ನು ಒಡೆಯಲು ನಿಮ್ಮಿಂದ ಸಾಧ್ಯವಿಲ್ಲ. 11/11
— H D Kumaraswamy (@hd_kumaraswamy) April 1, 2022