Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಹೊತ್ತಲ್ಲೇ ಆಡಿಯೋ ಬಾಂಬ್- ರೇವಣ್ಣ, ಶಿವಲಿಂಗೇಗೌಡ ಮಾತುಕತೆ ಆಡಿಯೋ ವೈರಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಚುನಾವಣೆ ಹೊತ್ತಲ್ಲೇ ಆಡಿಯೋ ಬಾಂಬ್- ರೇವಣ್ಣ, ಶಿವಲಿಂಗೇಗೌಡ ಮಾತುಕತೆ ಆಡಿಯೋ ವೈರಲ್

Districts

ಚುನಾವಣೆ ಹೊತ್ತಲ್ಲೇ ಆಡಿಯೋ ಬಾಂಬ್- ರೇವಣ್ಣ, ಶಿವಲಿಂಗೇಗೌಡ ಮಾತುಕತೆ ಆಡಿಯೋ ವೈರಲ್

Public TV
Last updated: March 15, 2023 11:42 pm
Public TV
Share
5 Min Read
HSN HD REVANNA AND KM SHIVALINGE GOWDA
SHARE

ಹಾಸನ: ಚುನಾವಣೆ (Election) ಹೊತ್ತಲ್ಲೇ ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ (K.M.Shivalinge Gowda) ನಡುವೆ ನಡೆದಿರುವ ಮಾತುಕತೆಯ ಆಡಿಯೋ (Audio) ಇದೀಗ ವೈರಲ್ (Viral) ಆಗಿದೆ.

ಶಿವಲಿಂಗೇಗೌಡರು ಪಕ್ಷ ಬಿಡದಂತೆ ಹೆಚ್.ಡಿ.ರೇವಣ್ಣನವರು ಪ್ರಯತ್ನ ಮಾಡಿರುವುದನ್ನು ಈ ಆಡಿಯೋ ಮೂಲಕ ತಿಳಿದುಕೊಳ್ಳಬಹುದಾಗಿದೆ. ಶಿವಲಿಂಗೇಗೌಡ ಏನೇನು ಮಾಡಿದ್ದಾರೆ ಅದನ್ನು ದಾಖಲೆ ಸಮೇತ ಬಿಡುಗಡೆ ಮಾಡುತ್ತೇನೆ ಎಂದು ರೇವಣ್ಣನವರು ಹೇಳಿದ್ದರು. ಇದನ್ನೂ ಓದಿ: ಹಾಸನ ಟಿಕೆಟ್ ಫೈಟ್‍ಗೆ ಮೂರನೇ ವ್ಯಕ್ತಿ ಎಂಟ್ರಿ- ರಾಜೇಗೌಡ ಪರ ರೇವಣ್ಣ ಫ್ಯಾಮಿಲಿ ಬ್ಯಾಟಿಂಗ್ 

ರೇವಣ್ಣ: ಏನ್ ಶಿವಲಿಂಗಣ್ಣ, ನಾನ್ ಹೇಳೋದು.. ಅವು, ಇವು ಆಡ್ತವೆ ಅಂತ ನೀನು ಆಡಲು ಹೋಗಬೇಡ. ಯಾವತ್ತಾದರೂ ನಾನು ನಿನಗೆ ಕೆಟ್ಟದು ಮಾಡಿದ್ದೀನಾ?
ಕೆಎಂಶಿ: ನಾನು ಯಾರಿಗಾದರೂ ಅನ್ಯಾಯ ಮಾಡಿದ್ದೀನಾ ಅಣ್ಣಾ?
ರೇವಣ್ಣ: ನಾನೆಲ್ಲಿ ಹಾಗಂತ ಹೇಳಿದ್ದೀನಿ?
ಕೆಎಂಶಿ: ನಾನು ರಾಜಿ ಮಾಡ್ಕತಿನಿ ತಡಿ ಅಂತ ಹೇಳಿದ್ದೀನಲ್ಲಣ್ಣ. ಅಷ್ಟರಲ್ಲಿ ನನ್ನ ಕರೆಯದೆ ಸಭೆ ಮಾಡಿದ್ದೀರಾ?
ರೇವಣ್ಣ: ನನಗೆ ಇರೋದು ಇನ್ನಾ 39 ದಿನ. ನಿನ್ನ ಹತ್ರಲೇ ಬರ್ತರೆ, ನಿಂದೆ ವೈರ್‌ಲೆಸ್ ಆಗ್ತಾರೆ.
ಕೆಎಂಶಿ: ಯಾವುದಾದರೂ ವೈರ್‌ಲೆಸ್ ಹಾಕಲಿ. ಅವರಂಗೆ ನನಗೆ ಎಡಿಟ್ ಮಾಡಲು ಆಗಲ್ಲ.
ರೇವಣ್ಣ: ನಾನು ಅವತ್ತಿಂದ ಹೇಳಿಲ್ವಾ? ಕುಮಾರಣ್ಣ, ನಾನು ಗೆಲ್ಲಿಸಿಕೊಂಡು ಬರ್ತಿವಿ ಅಂತಾ?
ಕೆಎಂಶಿ: ರೇವಣ್ಣ ಹತ್ರ ಹೋಗು ಡಿಸಿಸಿ ಬ್ಯಾಂಕ್ ವಿಚಾರಕ್ಕೆ ಅಂತ ಹೇಳಿದ್ದೀನಿ. ಎರಡು ವರ್ಷದ ಹಿಂದೇನೇ ಅವನ್ಯಾವನೋ ಬರ್ತನೆ. ಕಾಂಗ್ರೆಸ್‌ನಲ್ಲಿ ನಿಂತರೆ ನಾನು ಗೆಲ್ತೀನಿ ಅಂತಾ ಹೇಳಿದ್ದೀನಿ. ಎರಡು ವರ್ಷ ಆಗಿದೆ.
ರೇವಣ್ಣ: ಅದು ನನಗೆ ಗೊತ್ತಿಲ್ಲ.
ಕೆಎಂಶಿ: ಈ ಮಾತ್ರೆ ಅನ್ನೋನು ಬಂದಿದ್ದನಲ್ಲಾ?
ರೇವಣ್ಣ: ಸ್ವಲ್ಪ ತಾಳ್ಮೆಯಿಂದ ಕೇಳ್ಕಳೋ. ನನ್ನ ನಿನ್ನ ಸಂಬಂಧ ಹದಿನೆಂಟು ವರ್ಷದ್ದು. ಶಿವಲಿಂಗೇಗೌಡಗೆ ತೊಂದರೆ ಆಗಬಾರದು ಅಂತಾ ನನ್ನ ಭಾವನೆ ಇದೆ. ಅದರ ಮೇಲೆ ನಿನ್ನಿಷ್ಟ. ಅವತ್ತು ನೀನು ಏನು ಹೇಳ್ದೆ. ಯಾವುದೇ ಕಾರಣಕ್ಕೂ ನಾನು ಅವನ ಎದುರು ಸೋಲುವುದಾರೆ ನಿಲ್ಲಲ್ಲ. ಯಾವನಾದ್ರು ನಿಲ್ಸಣ ಅಂದೆ.
ಕೆಎಂಶಿ: ನಾನು ಈಗಲೂ ನಿಲ್ತೀನಿ ಅಂತ ಎಲ್ಲಿ ಹೇಳಿದ್ದೀನಿ ಹೇಳಿ?
ರೇವಣ್ಣ: ನೋಡಯ್ಯ ನಿನ್ನ ಹಣೇಲಿ ಬರೆದಿರೋದು ಯಾರು ತಪ್ಸಕೆ ಆಗಲ್ಲ.
ಕೆಎಂಶಿ: ನನ್ನ ಹಣೆಗಿಣೆ ಪರೀಕ್ಷೆ ಇಲ್ಲೆ ಜನರ ಎದುರೇ ಮಾಡ್ತೀನಿ. ಜನರೇ ನನ್ನ ಹಣೆ ಪರೀಕ್ಷೆ ಮಾಡೋರು. ನಾನು ಐವತ್ತು ಸಾವಿರದಲ್ಲಿ ಗೆಲ್ತೀನಿ ಅಂತಾ ಈಗ ಹೇಳಿದ್ದಲ್ಲ. ಎರಡು ವರ್ಷ ಆಯಿತೆ. ಅವನ್ಯಾವನೋ ಚೀಟ್ ಮಾಡ್ಕಂಡು ಇಟ್ಕಂಡು ಈಗ ಹಾಕವ್ನೆ. ಯಡಿಯೂರಪ್ಪನ ಸಿ.ಡಿ ಮಾಡಿ ಬಂದವನು ಇಲ್ಲೂ ಮಾಡ್ತವ್ನೆ ಸಿ.ಡಿ.
ಕೆಎಂಶಿ: ಡಿಸಿಸಿ ಬ್ಯಾಂಕ್ ನಮ್ಮ ಹತ್ರ ಇಲ್ಲ. ರೇವಣ್ಣ ಅವರದ್ದು ಅವರ ಹತ್ರ ಹೋಗು ಅಂದಿದ್ದೀನಿ. ಆ ನನ್ಮಗ ರೇವಣ್ಣ ಹತ್ರಕ್ಕೆ ಹೋಗು ಅಂತಾ ಹೇಳಿದ್ನಾ. ಎಡಿಟ್ ಮಾಡಿ ಹಾಕವ್ನೆ.
ರೇವಣ್ಣ: ಲೋನ್‌ಗೂ ನನಗೂ ಸಂಬಂಧವಿಲ್ಲ.
ಕೆಎಂಶಿ: ನನ್ನ ಜೀವಮಾನ ಇರೋವರೆಗೂ ನಿಮ್ಮನ್ನೆಲ್ಲ ಏಕವಚನದಲ್ಲಿ ಮಾತನಾಡಲ್ಲ. ಅಂತಹ ಥರ್ಡ್ ಕ್ಲಾಸ್ ಅಲ್ಲ ನಾನು. ಅವನು ಇಂತಹವು ಎಡಿಟ್ ಮಾಡಿ ಐವತ್ತು ಸಿ.ಡಿ, ವ್ಯಾಟ್ಸಪ್ ಬಿಟ್ಟ ನನ್ನ ಮೇಲೆ ನಾನು ಮಾತಾಡಿದಂಗೆ ಮಿಮಿಕ್ರಿ ಮಾಡ್ತಾನೆ. ನಾನು ಮಾತಾಡಿದಂಗೆ ಮಾತಾಡುಸ್ತಾನೆ. ಏನು ಮಾಡೋಣ ಅಂಥವು ಏಸು ಎಟ್ಕಂಡವ್ನೋ ಇನ್ನುವೇ ಯಾವಾಗ ಯಾವಾಗ ಬಿಡಕೆ.
ರೇವಣ್ಣ: ನಾನು ಹೇಳೋದು ಸುಮ್ನೆ. ಯಾವನೋ, ಯಾವನೋ ಹೇಳ್ತನೆ ಅಂತಾ ಕೇಳೋದು ಬೇಡ ಕಣೋ.
ಕೆಎಂಶಿ: ನಾನು ಯಾರ ಮಾತು ಕೇಳಿಲ್ಲ.
ರೇವಣ್ಣ: ಮತ್ತೆ ಏನ್ ಮಾಡಣ ನಾನು.
ಕೆಎಂಶಿ: ಒಂದು ಗುಂಪು ರಾಜಿ ಆಗಬೇಕು.
ರೇವಣ್ಣ: ನೀನು ಏನು ಹೇಳ್ತಿಯಾ ಕೇಳ್ತಿನಿ, ನನಗೇನು.
ಕೆಎಂಶಿ: ಆ ಗುಂಪು ರಾಜಿಯಾಗೋವರೆಗೆ, ನಾಳಿಕ್ಕೆ ಅರಸೀಕೆರೆ ತುಂಬಾ ಬಾವುಟ ಕಟ್ಟವ್ರೆ ಈಗೇನ್ ಮಾಡ್ತಿರಾ ಮಾಡಿ.
ರೇವಣ್ಣ: ಅರಸೀಕೆರೆ ತುಂಬಾ ಬಾವುಟ ಕಟ್ಟಿದ್ರೆ, ನಾನು ಮೊನ್ನೆನೇ ಹೇಳಿ ಬಂದಿಲ್ವಾ.
ಕೆಎಂಶಿ: ನೀವು ಹೇಳ ಬಂದವ್ರು, ಅಟ್‌ಲಿಸ್ಟ್ ಹದಿನೈದು ದಿನದೊಳಗೆ ಒಂದು ಸಭೆ ಮಾಡಬೇಕು. ಮಾಡದಿದ್ದರೆ ಮಾಡು ಇಲ್ಲ ಅಂದಿದ್ರೆ ಬೇರೆ ದಾರಿ ಮಾಡ್ಕತಿವಿ ಅಂತ ಹೇಳಿದ್ರೆ ನಾನು ಒಪ್ಕತಿದ್ದೆ.
ರೇವಣ್ಣ: ನಾಳೆ ಸಭೆ ರದ್ದು ಮಾಡನೇನಯ್ಯ.
ಕೆಎಂಶಿ: ಅದೆಂಗೆ ಸಭೆ ರದ್ದು ಮಾಡಲು ಆಗುತ್ತೆ?
ರೇವಣ್ಣ: ಇವತ್ತು ಹೇಳು, ಸಭೆ ರದ್ದು ಮಾಡಿ ಇನ್ನೂ ಹದಿನೈದು ದಿನದಲ್ಲಿ ಶಿವಲಿಂಗೇಗೌಡರೇ ಸಭೆ ಕರಿತರೆ ಅಂತ ಹೇಳಿ ಬಿಡ್ಲೇನಯ್ಯ.
ಕೆಎಂಶಿ: ಇಲ್ಲಾ, ಅವೆಲ್ಲಾ ಆಗಲ್ಲ ಈಗ. ಬಂದು ಮಾಡ್ಕಂಡು ಹೋಗಿ. ನಾಳೆ ನಮ್ಮ ಮನೇಲಿ ಮದುವೆ. ಅದುನ್ನು ಗೊತ್ತಿಲ್ಲದಂಗೆ ಅವನು ಲೋಫರ್ ನನ್ಮಕ್ಕಳು ನಿಮಗೆ ಡೇಟ್ ಮಿಸ್ ಮಾಡಿ ಹೇಳಿದ್ದಾರೆ. ನಮ್ಮ ಸ್ವಂತ ಬಾಮೈದನ ಮದುವೆ.
ರೇವಣ್ಣ: ನಾಳೆ ಸಭೆಲಿ ಏನು ಹೇಳಬೇಕು ಹೇಳಪ್ಪ.
ಕೆಎಂಶಿ: ಏನಾದ್ರು ಹೇಳಿ. ಅವರ ಮನೇಲಿ ಮದುವೆ ಇದೆ, ಬರಕ್ಕಿಲ್ಲ ಅಂತ ಹೇಳಿ.
ರೇವಣ್ಣ: ಅವರು ಬರಕ್ಕಾಗಲ್ಲ ಅವರು ಇಲ್ಲೇ ಇರ್ತಾರೆ ಅಂಥ ಹೇಳ್ಲಾ?
ಕೆಎಂಶಿ: ಇರ್ತೀನಿ ಅಂತಾ ಪದ ಬೇಡ. ನಾನು ಇರ್ತೀನಿ, ಹೋಗ್ತೀನಿ ಅನ್ನೋದನ್ನ ನಿಮ್ಮ ಮನೆಗೆ ಬಂದು ಹೇಳ್ತೀನಿ. ದೊಡ್ಡವರಿಗೆ ಹೇಳ್ದಲೇ ನಾನು ಎಲ್ಲೂ ಹೋಗಲ್ಲ. ಎಲ್ಲಿಗೂ ಬರಲ್ಲ. ನನ್ನ ಜಡ್ಜ್ಮೆಂಟ್, ಅಸೆಸ್‌ಮೆಂಟ್ ಇದಿಯಲ್ಲಾ ಅದು ಯಾವತ್ತು ಸುಳ್ಳು ಆಗಲ್ಲ. ಈಗ ಏನಿಲ್ಲ ಕುರುಬರವೆಲ್ಲಾ 75% ಅವನಿಗೆ ಹೋಗ್ತವೆ. ನಮ್ಮ ಒಕ್ಕಲಿಗರವು ಅವನ್ಯಾರೋ ಅಶೋಕ ಅನ್ನವನಿಗೆ ಹೋಗ್ತಾವೆ. ಈ ಒಕ್ಕಲಿಗರವು 50%, 60% ಹೋಗ್ತವೆ. ಇಲ್ಲಿ ಕಾಂಗ್ರೆಸ್ ಬಂದ್ರು ಗೆಲ್ಲಕೆ ಏನು ಆಗಲ್ಲ. ನಾವೇನು ಅಷ್ಟು ದಡ್ಡರಲ್ಲ ರಾಜಕಾರಣದಲ್ಲಿ ಯಾವೋ ಗೊತ್ತಿಲ್ಲದವು ನಾಯಿ, ನರಿ, ಊರು ಗೊತ್ತಿಲ್ಲದವು ಬಂದು ಹೇಳ್ತಾರೆ ಅಂತ ಕೇಳಕೆ ಹೋಗ್ಬೇಡಿ.
ರೇವಣ್ಣ: ಲೇ ದೇವ್ರಾಣೆ, ನನ್ನ ತಂದೆ ಮೇಲೆ ಆಣೆ ಮಾಡಿ ಹೇಳ್ತೀನಿ. ನಾನು ನಿನಗೆ ಬಿಡಬೇಕು ಅಂತಿಲ್ಲ. ನಿನ್ನೆನೂ ಟ್ರೈ ಮಾಡ್ದೆ, ನೀನು ಮೀಟಿಂಗ್‌ನಲ್ಲಿದ್ದೆ.
ಕೆಎಂಶಿ: ನಾನು ನಿನ್ನೆ ಎಸ್ಟಿಮೇಟ್ ಕಮಿಟಿ ಮೀಟಿಂಗ್ ಇತ್ತಲ್ಲ, ಅಲ್ಲಿಗೆ ಹೋಗಿದ್ದೆ.
ರೇವಣ್ಣ: ಶಿವಲಿಂಗಣ್ಣ ನನ್ನ ಜೊತೆ ಗೆಲ್ಲಿಸಿಕೊಳ್ಳಬೇಕು ಅಂತ ಅಷ್ಟೇ ಕಣೋ.
ಕೆಎಂಶಿ: ಗೆಲ್ಲಿಸಿಕೊಳ್ಳಲು ಎಲ್ಲಾ ಕ್ಷೇತ್ರದಂತಲ್ಲಾ ಇದು.
ರೇವಣ್ಣ: ನಾನು ನಿನ್ನ ಬಿಟ್ಟಿರಕೆ ಆಗಲ್ಲ ಕಣೋ ದಯಮಾಡಿ. ನೀನು ಏನಾದ್ರು ಅನ್ಕೋ ನಿನ್ನ ಬಿಟ್ಟಿರಲು ನನಗೆ ಆಗಲ್ಲ ಕಣೋ ದಯಮಾಡಿ. ನನ್ ಮಾತು ಕೇಳೋ ಆ ಜವರೇಗೌಡ ಅವರೆಲ್ಲ ಆಡಿಕೊಳ್ಳಂಗೆ ಆಗುತ್ತೆ ಕಣೋ ಶಿವಲಿಂಗಣ್ಣ.
ಕೆಎಂಶಿ: ಜವರೇಗೌಡರು ಬೆನ್ನೆಲುಬು ಇಲ್ಲದ ರಾಜಕಾರಣಿ.
ರೇವಣ್ಣ: ಯಾರು ಏನೇನ್ ಮಾಡಿದರೆ ಅಂತಾ ಎಲ್ಲಾ ನಿನಗೆ ಗೊತ್ತಿದೆಯಲ್ಲೋ ಶಿವಲಿಂಗಣ್ಣ.
ಕೆಎಂಶಿ: ಎಲ್ಲಾ ನನಗೆ ಗೊತ್ತಿದೆ. ಗೊತ್ತಿರೋದಕ್ಕೆ ಎಲ್ಲರಿಗೂ ಒಂದೇ ಉತ್ತರ ನಂದು.
ರೇವಣ್ಣ: ನಾನು ಹೇಳದು ನಿನ್ನ ಒಳ್ಳೆಯದಕ್ಕೋಸ್ಕರ. ನೀನೇ ಮಂತ್ರಿಯಾಗಯ್ಯ ಅಲ್ಲೇ ಘೋಷಣೆ ಮಾಡ್ತಿನಿ.
ಕೆಎಂಶಿ: ಇನ್ನೂಂದು ನಾಲ್ಕೈದು ದಿನ ಕಾಯ್ದಿದ್ರೆ ಏನಾಗೋದು. ಮಂತ್ರಿ ತಗೊಂಡು ತಿಪ್ಪೆಗುಂಡಿಗೆ ಎಸಿರಿ ಯಾವ ನನ್ಮಗನಿಗೆ ಬೇಕು.
ರೇವಣ್ಣ: ನನಗೆ ಯಾವನಿಗೆ ಮಂತ್ರಿ ಬೇಕಾಗಿದೆ.
ಕೆಎಂಶಿ: ನಾವೇನ್ ಅಂತಹ ಥರ್ಡ್ ಕ್ಲಾಸ್ ನನ್ಮಕ್ಕಳಲ್ಲ. ಮಂತ್ರಿಗೆ ಅದಕ್ಕೆ ಇದಕ್ಕೆ ಆಸೆ ಪಡೋಕೆ.
ರೇವಣ್ಣ: ಇನ್ನೂ ಒಂದು ಅರ್ಧಗಂಟೆ ಕುಮಾರಣ್ಣನ ಹತ್ರ ಮಾತಾಡಿ ನಿನ್ನ ಹತ್ರ ಮಾತಾಡ್ತಿನಿ ತಡಿ.
ಕೆಎಂಶಿ: ಆಯ್ತು ಮಾತಾಡಣ. ಇದನ್ನೂ ಓದಿ: ಬಿಡಿಎದಿಂದ ಕರಗ ಮಂಟಪ ಅಭಿವೃದ್ಧಿಗೆ 6 ಕೋಟಿ ರೂ.: ಎಸ್.ಆರ್ ವಿಶ್ವನಾಥ್

TAGGED:Audio Viralelectionh d revannahassanK.M.Shivalinge Gowdaಆಡಿಯೋ ವೈರಲ್ಕೆ.ಎಂ.ಶಿವಲಿಂಗೇಗೌಡಚುನಾವಣೆಹಾಸನಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Heat Weather
Bagalkot

Heat Wave Alert | ನೆತ್ತಿ ಸುಡುವ ಸೂರ್ಯ – ಕಾದು ಕೆಂಡವಾದ ಕರುನಾಡು!

Public TV
By Public TV
33 seconds ago
JOB CUTS TECHIE UNEMPLOYMENT 1
Latest

Global Tech Layoffs| ಮೊದಲ 4 ತಿಂಗಳಿನಲ್ಲಿ 80 ಸಾವಿರ ಮಂದಿಗೆ ಗೇಟ್‌ಪಾಸ್‌

Public TV
By Public TV
21 minutes ago
4 Arrests 3 States Online Radicalisation Delhi Cops Bust Terror Module
Latest

ಯುವಕರ ಮೈಂಡ್‌ವಾಶ್‌ ಮಾಡಿ ಭಯೋತ್ಪಾದನೆಗೆ ಸೆಳೆಯಲು ಯತ್ನ – ನಾಲ್ವರು ಉಗ್ರರು ಅರೆಸ್ಟ್‌

Public TV
By Public TV
29 minutes ago
Priyanka Gandhi
Latest

ಇಂದು ನನ್ನ ಗಂಡನ ಹುಟ್ಟುಹಬ್ಬ, ಪ್ರಶ್ನೆ ಸ್ವಲ್ಪ ಚಿಕ್ಕದಾಗಿ ಕೇಳಿ: ಪ್ರಿಯಾಂಕಾ ಗಾಂಧಿ ಹಾಸ್ಯ

Public TV
By Public TV
1 hour ago
heatwave
Kalaburagi

ಕಲಬುರಗಿಯಲ್ಲಿ ನಿತ್ಯ 44 ರಿಂದ 45 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
1 hour ago
prisoner who escaped from sakleshpur jail 1 arrested in goa
Districts

15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ಪರಾರಿಯಾಗಿದ್ದ ವಿಚಾರಣಾಧಿನ ಕೈದಿ ಗೋವಾದಲ್ಲಿ ಅಂದರ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?