Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru Rural

ಪ್ರತಿನಿತ್ಯ ಬೆಂಗಳೂರು ಟು ಹೊಳೆನರಸೀಪುರ- ಹೆಚ್‍ಡಿ ರೇವಣ್ಣ ಜರ್ನಿಯ ಹಿಂದಿದೆ ರಹಸ್ಯ!

Public TV
Last updated: July 4, 2018 6:54 pm
Public TV
Share
2 Min Read
hd revanna
SHARE

ಬೆಂಗಳೂರು: ಬೆಂಗಳೂರಲ್ಲಿ ಮನೆ ಇದ್ರೂ ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣನವರು ಪ್ರತಿನಿತ್ಯ ಹೊಳೆನರಸೀಪುರಕ್ಕೆ ಹೋಗಿ ಬರುತ್ತಿರುವುದು ಈಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನಿಂದ ಹೊಳೆನರಸೀಪುರ ಸುಮಾರು 170 ಕಿಮೀ ದೂರವಿದೆ. ಆದರೂ ಪ್ರತಿದಿನ ರಾತ್ರಿಯಾಗುತ್ತಿದ್ದಂತೆಯೇ ಹೊಳೆನರಸೀಪುರಕ್ಕೆ ಹೋಗುವ ರೇವಣ್ಣ ಬೆಳಗಾಗುವಷ್ಟರಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಪುನಃ ಬೆಂಗಳೂರಿಗೆ ಹಿಂದಿರುಗುತ್ತಿರುವುದು ಈಗ ಎಲ್ಲರ ಗಮನ ಸೆಳೆದಿದೆ.

ಸಚಿವ ರೇವಣ್ಣರವರು ಜ್ಯೋತಿಷ್ಯವನ್ನು ಅತಿಯಾಗಿ ನಂಬುತ್ತಾರೆ. ಹಾಗಾಗಿ ಜ್ಯೋತಿಷಿಯೊಬ್ಬರು ಅವರಿಗೆ ಸರ್ಕಾರಿ ಬಂಗಲೆ ಸಿಗುವವರೆಗೂ ಹೊಳೆನರಸೀಪುರದಲ್ಲೇ ಉಳಿದುಕೊಳ್ಳದಂತೆ ಸಲಹೆ ನೀಡಿದ್ದಾರೆ. ಹೀಗಾಗಿ ರೇವಣ್ಣ ಪ್ರತಿನಿತ್ಯ 170 ಕಿ.ಮೀ ಸಂಚರಿಸುತ್ತಿದ್ದಾರೆ ಎನ್ನಲಾಗಿದೆ.

REVANNA AND PRAJWAL 5

ಈ ಮಾತನ್ನು ಅಲ್ಲಗಳೆದಿರುವ ರೇವಣ್ಣರ ಆಪ್ತ ಬಳಗ ಜನರ ಕಷ್ಟ ಕಾರ್ಪಣ್ಯಗಳನ್ನು ಕೇಳಲು ಹಾಗೂ ಜನರ ಅಹವಾಲು ಸ್ವೀಕರಿಸಲು ರೇವಣ್ಣ ಹೀಗೆ ಬೆಂಗಳೂರಿಂದ ಹೊಳೆನರಸೀಪುರಕ್ಕೆ ಬರುತ್ತಾರೆ ಎಂದು ಹೇಳಿದ್ದಾರೆ.

ಈಗಾಗಲೇ ಸಚಿವ ರೇವಣ್ಣ ಕೋರಿಕೆಯಂತೆ ಅವರಿಗೆ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ಇರುವ, ಎಚ್ ಸಿ ಮಹದೇವಪ್ಪನವರು ವಾಸವಾಗಿದ್ದ ವಸತಿಗೃಹವನ್ನು ನೀಡಲಾಗಿದೆ. ಆದರೆ ಅವರು ಮನೆ ಖಾಲಿ ಮಾಡುವವರೆಗೆ ಬೆಂಗಳೂರಿನ ಅವರ ಮನೆಯಲ್ಲಿಯೇ ವಾಸ ಮಾಡಬಹುದು. ಆದರೆ ರೇವಣ್ಣ ಮಾತ್ರ ಪ್ರತಿನಿತ್ಯ ಕಾಲಿಗೆ ಚಕ್ರ ಕಟ್ಟಿಕೊಂಡಂತೆ ಪ್ರಯಾಣ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ರಾತ್ರಿ ಎಷ್ಟೇ ಹೊತ್ತಾದರೂ ರೇವಣ್ಣ ಹೊಳೆನರಸೀಪುರಕ್ಕೆ ತಪ್ಪದೇ ಹೋಗುತ್ತಾರೆ. ಬೆಳಗಿನ ಜಾವ 6 ಗಂಟೆಗೆ ಎದ್ದು ಸಾರ್ವಜನಿಕರ ಅಹವಾಲುಗಳನ್ನು ಕೇಳಲು ತಯಾರಾಗುತ್ತಾರೆ. ಹೊಳೆನರಸೀಪುರ ಕ್ಷೇತ್ರ ಮಾತ್ರವಲ್ಲದೇ ಹಾಸನ ಜಿಲ್ಲೆಯ ಮೂಲೆ ಮೂಲೆ ಗಳಿಂದಲೂ ಸಾವಿರಾರು ಜನ ಅವರ ಮನೆಗೆ ಬರುತ್ತಾರೆ. ಅವರೆಲ್ಲರ ಅಹವಾಲು ಸ್ವೀಕರಿಸಿದ ನಂತರವೇ ರೇವಣ್ಣ ಮತ್ತೆ ಬೆಂಗಳೂರಿಗೆ ಮರಳುತ್ತಾರೆ. ಕ್ಷೇತ್ರದ ಎಲ್ಲ ಜನತೆಯ ಅಹವಾಲು ಕೇಳಬೇಕೆಂಬುದೇ ಈ ಪ್ರಯಾಣಕ್ಕೆ ಪ್ರಬಲ ಕಾರಣ ಎಂದು ರೇವಣ್ಣನವರ ಆಪ್ತ ಮೂಲಗಳು ತಿಳಿಸಿವೆ. ಇದನ್ನು ಓದಿ: ಸೀಟ್ ವಾಸ್ತುಪ್ರಕಾರ ಸರಿಯಾಗಿದೆ, ಮುಂದೆ ಬನ್ನಿ: ನಗೆಗಡಲಲ್ಲಿ ತೇಲಿಸಿದ ಸ್ಪೀಕರ್

ಇದೇ ಮೊದಲಲ್ಲ:
ಈ ಹಿಂದೆ ಬಿಜೆಪಿ-ಜೆಡಿಎಸ್ 20-20 ಸರ್ಕಾರ ಇದ್ದಾಗಲೂ ಸಹ ಸಚಿವರಾಗಿದ್ದ ರೇವಣ್ಣ ಹಾಸನದಿಂದ ಬೆಂಗಳೂರಿಗೆ ಹೋಗಿ ಪುನಃ ಮಧ್ಯಾಹ್ನ ಹಾಸನಕ್ಕೆ ವಾಪಸಾಗುತ್ತಿದ್ದರು. ಮತ್ತೆ ಸಂಜೆ ವೇಳೆಗೆ ಬೆಂಗಳೂರಿಗೆ ತೆರಳುತ್ತಿದ್ದ ರೇವಣ್ಣ, ರಾತ್ರಿ ವೇಳೆಗೆ ಮತ್ತೆ ಹಾಸನಕ್ಕೆ ಬಂದು ವಾಸ್ತವ್ಯ ಹೂಡುತ್ತಿದ್ದರು. ಆದರೆ ಇದೀಗ ಎಲ್ಲವೂ ಉಲ್ಟಾಹೊಡೆದಂತೆ ಕಾಣುತ್ತಿದೆ. ಒಂದು ವೇಳೆ ಜ್ಯೋತಿಷಿಗಳ ಮಾತೇ ರೇವಣ್ಣ ಪ್ರವಾಸಕ್ಕೆ ಕಾರಣ ಎಂದಾದಲ್ಲಿ ಮಹದೇವಪ್ಪನವರು ಸರ್ಕಾರಿ ವಸತಿ ಗೃಹ ಖಾಲಿ ಮಾಡುವವರೆಗೂ ರೇವಣ್ಣನವರು ಪ್ರತಿದಿನ ಪ್ರಯಾಣ ಮಾಡುವುದು ತಪ್ಪುವುದಿಲ್ಲ ಎನ್ನಲಾಗುತ್ತಿದೆ.

 

TAGGED:bengaluruhassanHD RevannaPublic TVಎಚ್ ಡಿ ರೇವಣ್ಣಪಬ್ಲಿಕ್ ಟಿವಿಬೆಂಗಳೂರುಹಾಸನ
Share This Article
Facebook Whatsapp Whatsapp Telegram

You Might Also Like

WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
8 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
14 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
33 minutes ago
Mangaluru Rain
Dakshina Kannada

ಮಂಗಳೂರಿನಲ್ಲಿ ಭಾರೀ ಮಳೆ – ಪಂಪ್‌ವೆಲ್ ಸರ್ಕಲ್ ಮತ್ತೆ ಮುಳುಗಡೆ

Public TV
By Public TV
47 minutes ago
ED 1
Bengaluru City

Exclusive | ವಾಲ್ಮೀಕಿ ಹಗರಣ: ಬಳ್ಳಾರಿ ಚುನಾವಣೆಗೆ 27 ಕೋಟಿ ಬಳಕೆಯಾಗಿದ್ದು ಹೇಗೆ? – 87 ಕೋಟಿ ಎಲ್ಲೆಲ್ಲಿ ಹಂಚಿಕೆಯಾಯ್ತು?

Public TV
By Public TV
51 minutes ago
Siddaramaiah 4
Districts

ನಮ್ಮ ನಿರೀಕ್ಷೆಗಳಿಗೆ ವಿರುದ್ಧವಾಗಿ ಕೆಲವು ಘಟನೆಗಳು ನಡೆಯುತ್ತವೆ – ಕಾಲ್ತುಳಿತ ಪ್ರಕರಣಕ್ಕೆ ಸಿಎಂ ಬೇಸರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?