ಗದಗ: ಜಿಲ್ಲೆ ಸಿದ್ದರಾಮೇಶ್ವರ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಸಚಿವ ಹೆಚ್.ಕೆ ಪಾಟೀಲ್ (H K Patil) ಅವರು ಸ್ವತಃ ತಮ್ಮ ಕಾರಿನಲ್ಲಿ ಸ್ಕೂಲ್ಗೆ ಸೇರಿಸಿ ಆತ್ಮಸ್ಥೈರ್ಯ ತುಂಬಿದರು.
ಸುಮಾರು 7 ಮಕ್ಕಳು ಶಾಲೆ ತೊರೆದು ಮನೆಯಲ್ಲಿದ್ದರು. ಆ ಮಕ್ಕಳ ಮನೆಗಳಿಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್ ಭೇಟಿ ನೀಡುವ ಮೂಲಕ ಜಿಲ್ಲೆಯಾದ್ಯಂತ ಶಾಲೆ ಬಿಟ್ಟ ಮಕ್ಕಳಿಗಾಗಿ `ಭವ್ಯ ಭವಿಷ್ಯದ ನಾಳೆಗೆ ಬನ್ನಿ ಬನ್ನಿ ಶಾಲೆಗೆ’ ಅಭಿಯಾನಕ್ಕೆ ವಿಭಿನ್ನವಾಗಿ ಚಾಲನೆ ನೀಡಿದರು. ಇದನ್ನೂ ಓದಿ: ಜೂ.3ರಂದು ಅಯೋಧ್ಯಾ ರಾಮಮಂದಿರದ ಸ್ವರ್ಣಗೋಪುರ ಉದ್ಘಾಟನೆ
ಬಳಿಕ ಸಚಿವರು, ಅಧಿಕಾರಿಗಳು ಸೇರಿ ಹೆತ್ತವರ ಬಳಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಮನವೊಲಿಸಿದರು. ಶಾಲೆ ತೊರೆದ ಮಕ್ಕಳಿಗೆ ಗುಲಾಬಿ ಹೂ ನೀಡಿ, ಅವರನ್ನು ತಮ್ಮ ಕಾರಿನಲ್ಲಿ ನಗರದ ಸಿಧ್ಧಲಿಂಗ ನಗರದ ಸರ್ಕಾರಿ ಪ್ರೌಢಶಾಲೆಗೆ ಸೇರಿಸಿದರು. ಶಾಲೆಯಲ್ಲಿ ಸಮವಸ್ತ್ರ, ಪಠ್ಯಪುಸ್ತಕ, ಹೂವು ನೀಡಿ ಮಕ್ಕಳನ್ನು ಮರಳಿ ಶಾಲೆಗೆ ಸ್ವಾಗತಿಸಿದರು. ನಂತರ ಪ್ರತಿಜ್ಞಾವಿಧಿ ಬೋಧಿಸಿದರು. ಇದನ್ನೂ ಓದಿ: ಪ್ರತಿ ಬಾರಿ ಕಪ್ ನಮ್ದೆ ಅಂತಿದ್ವಿ, ಈ ಸಲ ಆದ್ರೂ ಕಪ್ ನಮ್ಮದಾಗಲಿ: ಎಂ.ಸಿ ಸುಧಾಕರ್
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ, ಡಿಡಿಪಿಐ ಆರ್.ಎಸ್ ಬುರಡಿ, ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಿ ಅಸೂಟಿ ಸೇರಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.