Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Districts

ಉಪಚುನಾವಣೆ ಮೂಲಕ ಬಿಜೆಪಿಯವರಿಗೆ ಜನ ಮಂಗಳಾರತಿ ಮಾಡಿದ್ದಾರೆ- ಹೆಚ್.ಕೆ ಪಾಟೀಲ್

Public TV
Last updated: November 23, 2024 6:15 pm
Public TV
Share
3 Min Read
H K Patil
SHARE

-ಜಾಗೃತ ಮತದಾರ ಬಿಜೆಪಿಗೆ ತಕ್ಕ ಕಪಾಳಮೋಕ್ಷ ಮಾಡಿದ್ದಾರೆ

ಗದಗ: ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಬಿಜೆಪಿಯವರಿಗೆ ಜನ ಮಂಗಳಾರತಿ ಮಾಡಿದ್ದಾರೆ. ಜಾಗೃತ ಮತದಾರ ಬಿಜೆಪಿಗೆ ತಕ್ಕ ಕಪಾಳಮೋಕ್ಷವನ್ನು ಈ ಉಪಚುನಾವಣೆ ಮೂಲಕ ಮಾಡಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ ಪಾಟೀಲ್ (H K Patil) ಹೇಳಿದ್ದಾರೆ.

ಇಂದು (ಶನಿವಾರ) ನಗರದ ಕಾಟನ್ ಸೇಲ್ ಸೊಸೈಟಿ ಆವರಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಚುನಾವಣೆ ಫಲಿತಾಂಶ ಬಹಳ ಮಹತ್ವದ್ದಾಗಿತ್ತು. ಕಳೆದ ಮೂರು ತಿಂಗಳಿಂದ ನಡೆದ ಹಲವಾರು ರಾಜಕೀಯ ಬೆಳವಣಿಗೆಗೆ ಉತ್ತರ ಕೊಡಬೇಕಾಗಿತ್ತು. ಆ ಉತ್ತರವನ್ನು ಜನ ಸಮರ್ಪಕವಾಗಿ ಕೊಟ್ಟಿದ್ದಾರೆ. ಬಿಜೆಪಿಯವರ ಮುಖಕ್ಕೆ ಮಂಗಳಾರತಿ ಮಾಡಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆ, ರಾಜ್ಯದಲ್ಲಿ ಸುಳ್ಳು ಪ್ರಚಾರ ನಡೆದವು. ನಮ್ಮ ಸಮಾಜವನ್ನು ಒಡೆಯುವ ದೊಡ್ಡ ಹುನ್ನಾರ, ಕುಕೃತ್ಯ ಮಾಡುವ ಎಲ್ಲಾ ರೀತಿಯ ರಾಜಕೀಯ ನಿಲುವು ಹಾಗೂ ದಾಳ ಬಳಸುವ ಕೆಲಸ ಬಿಜೆಪಿ ಮಾಡಿತು ಎಂದು ಹರಿಹಾಯ್ದರು. ಇದನ್ನೂ ಓದಿ: ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದಿದೆ: ಮಹಾರಾಷ್ಟ್ರದಲ್ಲಿ ಮಹಾಯುತಿ ಗೆಲುವಿಗೆ ಮೋದಿ ಕೃತಜ್ಞತೆ

ವಕ್ಫ್ (Waqf) ಹೆಸರಲ್ಲಿ ಸಮಾಜ ಒಡೆಯುವ ಪ್ರಯತ್ನ ಮಾಡಿದರು. ಗ್ಯಾರಂಟಿ ನಿಲ್ಲುಸುತ್ತೇವೆ ಎಂದು ಪ್ರಧಾನಿಯಿಂದ ಸುಳ್ಳು ಹೇಳಿಸಿದರು. ಜನರ ಮನಸ್ಸಿನಲ್ಲಿ ಗೊಂದಲ ಹುಟ್ಟಿಸುವ ಪ್ರಯತ್ನ ಮಾಡಿದರು. ಸಿಎಂ ಅವರನ್ನು ತೇಜೋವಧೆ ಮಾಡುವ ಮೂಲಕ ಸರ್ಕಾರ ಉಳಿಯುವುದಿಲ್ಲ. ಸರ್ಕಾರ ಅಭದ್ರವಾಯಿತು, ಸರ್ಕಾರ ಬದಲಾಗುತ್ತೆ, ಸರ್ಕಾರದ ಭದ್ರತೆ ಬಗ್ಗೆ ಶಂಕೆ ಮೂಡಿಸಿ ಲಾಭ ಪಡೆಯುವ ಪ್ರಯತ್ನ ಬಿಜೆಪಿಗರು ಮಾಡಿದ್ರು. ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳಿದರು. ಜಾಗೃತ ಮತದಾರ ಬಿಜೆಪಿಗೆ ತಕ್ಕ ಕಪಾಳಮೋಕ್ಷವನ್ನು ಚುನಾವಣೆ ಮೂಲಕ ಮಾಡಿದ್ದಾರೆ. ಜಾಗೃತ ಮತದಾರರಿಗೆ ಪಕ್ಷದ ಪರವಾಗಿ, ವೈಯಕ್ತಿಕವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ರಾಜ್ಯದ ಮೂರು ಕ್ಷೇತ್ರದ ಮತದಾರರಿಗೆ ಸಚಿವರು ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ರಾಹುಲ್ ದಾಖಲೆ ಬ್ರೇಕ್ – ಪ್ರಿಯಾಂಕಾಗೆ 4 ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು

ಇನ್ನಾದರೂ ಬಿಜೆಪಿ (BJP) ಅರ್ಥೈಸಿಕೊಳ್ಳಬೇಕು, ಸುಳ್ಳುಗಳು ಬಹಳ ದಿನ ನಡೆಯುವುದಿಲ್ಲ. ಈ ಚುನಾವಣೆ ಸುಳ್ಳುಗಳನ್ನು ಸೋಲಿಸಿ, ಸಮಾಜ ಒಡೆಯುವ ಆ ಕೆಟ್ಟ ಶಕ್ತಿಗಳಿಗೆ ತಕ್ಕ ಶಾಸ್ತಿ ಮಾಡಿದೆ. ತೇಜೋವಧೆ ಮೂಲಕ ರಾಜಕಾರಣ ಮಾಡುತ್ತೇವೆ ಎನ್ನುವ ಪ್ರಯತ್ನಕ್ಕೆ ಸಮಾಜ ತಿರಸ್ಕಾರ ಭಾವನೆ ತೋರಿಸಿದೆ. ಈ ಚುನಾವಣೆಯಲ್ಲಿ ಕೆಟ್ಟ ಭಾಷೆ, ಕೆಟ್ಟ ಸಂಸ್ಕೃತಿ, ಕೆಟ್ಟ ರಾಜಕೀಯ ನಿಲುವುಗಳು, ಸತ್ಯಕ್ಕೆ ದೂರವಾದ ನಿಲುವುಗಳನ್ನು ಇಟ್ಟುಕೊಂಡು ಏನಾದ್ರೂ ಮಾಡಿ ಗೆಲುವು ಪಡೆಯುವ ಪ್ರಯತ್ನ ಮಾಡುತ್ತಿದ್ದರು. ಅವರಿಗೆ ಅಪಜಯ, ಸೋಲು ಆಗಿದೆ. ಇನ್ನಾದರೂ ಮನಗಂಡು ಉತ್ತಮ ರೀತಿಯ ರಾಜಕಾರಣ, ಸುಸಂಸ್ಕೃತ ರಾಜಕಾರಣ ಮಾಡಬೇಕು ಎಂದು ಅಪೇಕ್ಷೆ ಮಾಡುತ್ತೇವೆ. ಈ ಗೆಲುವು ಕೇವಲ ಬಿಜೆಪಿಯನ್ನು ಸೋಲಿಸಿಲ್ಲ. ಸುಳ್ಳು ಹೇಳುವ ಪ್ರವೃತ್ತಿಯ ಮೋದಿ, ಅಮಿತ್ ಶಾ ಅವರನ್ನು ಸೋಲಿಸಿದೆ. ಚುನಾವಣೆ ಪರಿಣಾಮ ಮತ್ತೆ ಸಿದ್ದರಾಮಯ್ಯ ನಾಯಕತ್ವ ಗಟ್ಟಿಗೊಳಿಸಿದೆ ಎಂದರು. ಇದನ್ನೂ ಓದಿ: ಮಂಗಳೂರು | ಎದುರಾಳಿ ವಿರುದ್ಧ ಸಂಚು ಮಾಡ್ತಿದ್ದಾಗ್ಲೇ ನಟೋರಿಯಸ್ ರೌಡಿಶೀಟರ್ ಅರೆಸ್ಟ್!

ಸಿದ್ದರಾಮಯ್ಯನವರನ್ನು (Siddaramaiah) ಏನಾದರೂ ಮಾಡಿ, ಅಶಕ್ತರನ್ನಾಗಿ ಮಾಡುವ ನಿಮ್ಮ ಕುತಂತ್ರ ನಡೆಯದಂತಾಯಿತು. ಜನತಾ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ಅವರು ಮತ್ತೆ ಹೀರೊ ಆಗಿ, ನಾಯಕನಾಗಿ ಹೊರಹೊಮ್ಮಿದ್ದಾರೆ. ನಮ್ಮ ಗ್ಯಾರಂಟಿಗಳ ಕ್ರಾಂತಿಕಾರಕ ದೊಡ್ಡ ಜಯ ಇದಾಗಿದೆ. ಇನ್ನು ಮಹಾರಾಷ್ಟ್ರದ ಚುನಾವಣೆ ಬಗ್ಗೆ ಮಾತನಾಡಿ, ಮಹಾರಾಷ್ಟ್ರದಲ್ಲಿ ಆದ ಪರಿಣಾಮ ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ. ಆ ಪರಿಣಾಮಗಳ ಬಗ್ಗೆನೇ ಅನುಮಾನಾಸ್ಪದದಲ್ಲಿದ್ದೇವೆ. ಚುನಾವಣೆ ಪ್ರಕ್ರಿಯೆ, ಎಣಿಕೆಯಲ್ಲಿ ಏನಾಗಿದೆ ಎಂಬುದರ ಬಗ್ಗೆ ಅನುಮಾನ ಬಂದಿದೆ. ರಾಜಕೀಯ ಮಹತ್ವದ ನಾಯಕರು ಅನುಮಾನದ ಬಗ್ಗೆ ಅಭಿಪ್ರಾಯ ಪಡಲು ಪ್ರಾರಂಭ ಮಾಡಿದ್ದಾರೆ. ಸ್ವಲ್ಪ ಕಾದು ನೋಡಬೇಕು, ಅವಲೋಕನ ಮಾಡುತ್ತೇವೆ. ಇದು ಅವಲೋಕನ ಮಾಡಲೇಬೇಕಾದ ಪ್ರಸಂಗ ಎಂದು ಹೇಳಿದರು. ಈ ವೇಳೆ ಕಾಂಗ್ರೆಸ್ ಜಿಲ್ಲಾ ಮುಖಂಡರಾದ ಬಿ.ಬಿ ಅಸೂಟಿ, ಅಶೋಕ ಮಂದಾಲಿ, ಬಸವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ? ಆರ್‌ಎಸ್‌ಎಸ್‌ ಏನೇನು ಕಾರ್ಯತಂತ್ರ ಮಾಡಿತ್ತು?

TAGGED:bjpby electioncongressGadagah k patilsiddaramaiahಉಪಚುನಾವಣೆಕಾಂಗ್ರೆಸ್ಗದಗಬಿಜೆಪಿಸಿದ್ದರಾಮಯ್ಯಹೆಚ್.ಕೆ ಪಾಟೀಲ್
Share This Article
Facebook Whatsapp Whatsapp Telegram

Cinema Updates

Chaitra Kundapura Husband 1
Exclusive: ಕೊನೆಗೂ ಭಾವಿ ಪತಿಯನ್ನು ಪರಿಚಯಿಸಿದ ಚೈತ್ರಾ‌ ಕುಂದಾಪುರ
3 hours ago
daali dhananjay
ಆಪರೇಷನ್ ಸಿಂಧೂರ: ಭಯೋತ್ಪಾದಕರಿಗೆ ಭಾರತ ಒಳ್ಳೆಯ ಉತ್ತರವನ್ನೇ ಕೊಟ್ಟಿದೆ- ಡಾಲಿ
5 hours ago
amrutha prem
ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿಗೆ ಬೇಡಿಕೆ- ನಟಿಗೆ ಬಿಗ್ ಚಾನ್ಸ್
6 hours ago
chaithra kundapura 1
12 ವರ್ಷಗಳ ಪ್ರೀತಿ- ಮೇ 9ರಂದು ಚೈತ್ರಾ ಕುಂದಾಪುರ ಮದುವೆ
6 hours ago

You Might Also Like

F 16 supersonic fighter jet
Latest

ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

Public TV
By Public TV
16 minutes ago
Pakistan Attack
Latest

ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

Public TV
By Public TV
28 minutes ago
srinagar airport
Latest

ಪಾಕ್‌ ಕ್ಷಿಪಣಿ ದಾಳಿ ಬೆನ್ನಲ್ಲೇ ಭಾರತದ 24 ಏರ್‌ಪೋರ್ಟ್‌ಗಳು ಬಂದ್‌

Public TV
By Public TV
30 minutes ago
Shehbaz Sharif
Latest

ಪಾಕ್‌ ಪ್ರಧಾನಿ ಮನೆ ಬಳಿಯೇ ದಾಳಿ

Public TV
By Public TV
55 minutes ago
Pakistan Attack
Latest

ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ

Public TV
By Public TV
2 hours ago
india attacks lahore
Latest

ಲಾಹೋರ್‌ ಮೇಲೆ ಭಾರತ ಮಿಸೈಲ್‌ ಸುರಿಮಳೆ – ತತ್ತರಿಸಿದ ಪಾಕ್‌ ಜನ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?