ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಎಚ್.ವಿಶ್ವನಾಥ್ ನೇಮಕ: ಲೋಕಲ್ ಚುನಾವಣೆ ಮೈತ್ರಿಗೆ ಎಚ್‍ಡಿಡಿ ಟ್ವಿಸ್ಟ್

Public TV
2 Min Read
HD Deve Gowda HV Viswanath HDK

ಬೆಂಗಳೂರು: ಮಾಜಿ ಸಚಿವ ಎಚ್.ವಿಶ್ವನಾಥ್ ಅವರನ್ನು ಸರ್ವಾನುಮತದಿಂದ ಜೆಡಿಎಸ್ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದೇವೆ ಎಂದು ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಪಕ್ಷದ ಕಚೇರಿಯಾದ ಜೆಪಿ ಭವನದಲ್ಲಿ ಜೆಡಿಎಸ್ ಬಾವುಟವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ವಿಶ್ವನಾಥ್ ಅವರಿಗೆ ಹಸ್ತಾಂತರಿಸಿ, ಅಧಿಕಾರ ಒಪ್ಪಿಸಿದರು.

ಸುದ್ದಿಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಒಬ್ಬರೇ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುವುದು ಕಷ್ಟ. ಒಂದೂವರೆ ತಿಂಗಳ ಹಿಂದೆಯೇ ಕುಮಾರಸ್ವಾಮಿಯೂ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಬೇರೆಯವರಿಗೆ ವಹಿಸುವಂತೆ ಕೇಳಿದ್ದರು ಎಂದು ಹೇಳಿದರು.

HD Deve Gowda

ಹಿಂದೆ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಎಂ.ಪಿ.ಪ್ರಕಾಶ್ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಒಬ್ಬ ವ್ಯಕ್ತಿಗೆ ಒಂದೇ ಸ್ಥಾನ ಎನ್ನುವ ಉದ್ದೇಶದಿಂದ ರಾಜ್ಯಾಧ್ಯಕ್ಷ ಜವಾಬ್ದಾರಿಯನ್ನು ಎಚ್.ವಿಶ್ವನಾಥ್ ಅವರಿಗೆ ವಹಿಸಲಾಗಿದೆ ಎಂದರು.

ಚುನಾವಣೆ ಮೈತ್ರಿಗೆ ಟ್ವಿಸ್ಟ್:
ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕಷ್ಟ. ಕಾಂಗ್ರೆಸ್ ಜೊತೆಗೆ ನಮಗೆ ಒಡಂಬಡಿಕೆ ಇದೆ. ಆದರೆ ಸ್ಥಾನಗಳ ಸಂಚಿಕೆಯಲ್ಲಿ ಅವರಿಗೂ ಕಷ್ಟವಾಗುತ್ತದೆ. ಕಾಂಗ್ರೆಸ್ ನಾಯಕರು ಚರ್ಚೆ ಮಾಡಿದ್ದಾರೆ. ಅದರಲ್ಲಿ ಯಾವುದೇ ದೋಷವಿಲ್ಲ. ನಮ್ಮ ಪಕ್ಷವು ಪ್ರತ್ಯೇಕವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಿಸಲಿದೆ. ಚುನಾವಣೆಯಲ್ಲಿ ದೋಸ್ತಿ ಪಕ್ಷಗಳ ಮಧ್ಯೆ ತಿಕ್ಕಾಟ ಇರುವುದಿಲ್ಲ ಎಂದು ಟ್ವಿಸ್ಟ್ ನೀಡಿದ್ದಾರೆ.

ಯುವಕರಿಗೆ ಪಕ್ಷದಲ್ಲಿ ಮಣೆ:
ಪಕ್ಷದ ಸಂಘಟನೆ ಉದ್ದೇಶದಿಂದ ಹೊಸದಾಗಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಸಂಪೂರ್ಣವಾಗಿ ಯುವಕರಿಗೆ ಅವಕಾಶ ಕಲ್ಪಿಸಲಾಗುತ್ತದೆ. ಜೊತೆಗೆ ಹಿಂದುಳಿದವರು, ಮುಸ್ಲಿಂ ಸೇರಿದಂತೆ ಇತರರಿಗೂ ಸ್ಥಾನ, ಜವಾಬ್ದಾರಿ ನೀಡಲಾಗುತ್ತದೆ. ಪಕ್ಷದ ಹಿರಿಯರನ್ನು ನಾವು ಕಡೆಗಣಿಸುತ್ತಿಲ್ಲ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡೆ ಮುಂದುವರಿಯುತ್ತೇವೆ. ಮುಂದಿನ 10 ದಿನಗಳಲ್ಲಿ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದರು.

HD Deve Gowda Meeting

ರಾಷ್ಟ್ರೀಯ ಪಕ್ಷವೊಂದು ಸಾಲಮನ್ನಾ ವಿಚಾರದಲ್ಲಿ ಬೇರೆ ಅರ್ಥ ಕಲ್ಪಿಸಿ, ಗೊಂದಲ ಸೃಷ್ಟಿಸುತ್ತಿದೆ ಎಂದು ಬಿಜೆಪಿ ವಿರುದ್ಧ ದೂರಿದ ಅವರು, ಕುಮಾರಸ್ವಾಮಿ ಬಜೆಟ್ ಮೂರು ಜಿಲ್ಲೆಗೆ ಸೀಮಿತವಾಗಿಲ್ಲ. ಇಂತಹ ಆರೋಪ ತೊಡೆಯಲು ಕಿರುಹೊತ್ತಿಗೆ ಬಿಡುಗಡೆ ಮಾಡಲಾಗುತ್ತದೆ. ಅದನ್ನು ರಾಜ್ಯದ ಮನೆ ಮನೆಗಳಿಗೆ ಹಂಚಿ ಸತ್ಯವನ್ನು ಸಾಬೀತು ಮಾಡುತ್ತೇವೆ ಎಂದು ತಿರುಗೇಟು ನೀಡಿದರು.

ವಿಧಾನಸಭೆ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ 5 ವರ್ಷ, ನಾನು ಒಂದು ವರ್ಷ ಹಾಗೂ ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿ ಆಗಿದ್ದೇವೆ. ಯಾರು ಉತ್ತರ ಕರ್ನಾಟಕಕ್ಕೆ ಹೆಚ್ಚು ಕೊಡುಗೆ ನೀಡಿದ್ದಾರೆಂದು ವಿಧಾನಸಭೆಯಲ್ಲಿ ಚರ್ಚೆಯಾಗಲಿ ಎಂದು ಸವಾಲು ಹಾಕಿದರು.

Share This Article
Leave a Comment

Leave a Reply

Your email address will not be published. Required fields are marked *