ಮೈಸೂರು: ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement 2
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಲಾ ಪ್ರಾಕ್ಟೀಸ್ ಮಾಡಿದ್ದೇವೆ. ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡುತ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಅಂತಾನೆ. ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ. 2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾನು ಸೋಲುತ್ತಿರಲಿಲ್ಲ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದೀರಾ, ನಿಮಗೆ ನಾಚಿಕೆ ಆಗುವುದಿಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಭ್ರಷ್ಟಾಚಾರ – ಭಾರತ ಮೂಲದ ಗುಪ್ತಾ ಬ್ರದರ್ಸ್ ಯುಎಇನಲ್ಲಿ ಬಂಧನ
- Advertisement 3
- Advertisement 4
ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್ಎಸ್ಎಸ್ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿ ಅಂತಾ ಹೇಳಬೇಕು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ನೆಲೆಸಿದ್ದ ಉಗ್ರ, ಹಿಂದೂಗಳ ಹತ್ಯೆ ಮಾಡುತ್ತಿದ್ದ ಸಂಘಟನೆಯ ಕಮಾಂಡೋ ಆಗಿದ್ದ
ಇದೇ ವೇಳೆ, 25 ಲಕ್ಷ ಮುಸ್ಲಿಂ ಕುಟುಂಬಗಳು ಬದುಕುತ್ತಿವೆ. ಹೆಚ್ಚು ಕಡಿಮೆ ಆದರೆ ಅವರು ಬದುಕುವುದಕ್ಕೆ ಆಗುತ್ತಾ ಎಂದು ಕಳವಳ ವ್ಯಕ್ತಪಡಿಸಿದರು.