Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ನಾನ್ಯಾಕೆ ಕಾಂಗ್ರೆಸ್ ಬಿಟ್ಟೆ ಅಂತ ಸಿದ್ದರಾಮಯ್ಯನವರನ್ನೇ ಕೇಳಿ: ಎಚ್.ವಿಶ್ವನಾಥ್

Public TV
Last updated: April 4, 2019 3:25 pm
Public TV
Share
2 Min Read
Siddu H.Vishwanath
SHARE

– ಸಿದ್ದರಾಮಯ್ಯ ನಾನು ಕಣ್ಣಿನಲ್ಲೇ ಮಾತನಾಡುತ್ತೇವೆ

ಬೆಂಗಳೂರು: ನಾನ್ಯಾಕೆ ಕಾಂಗ್ರೆಸ್ ಬಿಟ್ಟೆ ಅಂತ ಮಾಜಿ ಸಿಎಂ ಸಿದ್ದರಾಮಯ್ಯನವರನ್ನೇ ಕೇಳಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಹೇಳಿದ್ದಾರೆ.

ನಗರದ ಪ್ರೆಸ್‍ಕ್ಲಬ್‍ನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಗ್ರಹಚಾರಕ್ಕೆ ಅವತ್ತು ಕಾಂಗ್ರೆಸ್ ಹೈಕಮಾಂಡ್ ವೀಕ್ ಆಗಿತ್ತು. ಏನು ಮಾಡೋದು ಹೇಳಿ? ಆದರೆ ಈಗ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಒಬ್ಬ ಪ್ರಬುದ್ಧ ನಾಯಕರಾಗಿದ್ದಾರೆ. ಹೀಗಾಗಿ ಅವರನ್ನು ನಾವು ಒಪ್ಪಿಕೊಂಡಿದ್ದೇವೆ ಎಂದರು.

rahul gandhi

ಸಮನ್ವಯ ಸಮಿತಿಯಲ್ಲಿ ಸ್ಥಾನ ಪಡೆಯದ ವಿಚಾರವಾಗಿ ಮಾತನಾಡಿದ ಅವರು, ಸಮಿತಿಯಲ್ಲಿ ಎರಡು ಪಕ್ಷಗಳಿವೆ. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ನಾನು ಹೊರಗೆ ಇದ್ದೇವೆ. ಬಾಗಿಲನ್ನು ತೆರೆದು ಕೈ ಮುಗಿದು ನಿಂತಿದ್ದೇವೆ. ಈ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ನಾನು ಕಣ್ಣಿನಲ್ಲೇ ಮಾತನಾಡುತ್ತೇವೆ. ಯಾವುದೇ ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ. ಮುಂದೆ ಇಬ್ಬರು ಕುಳಿತು ಮಾತನಾಡುತ್ತೇವೆ. ಅವರನ್ನ ಬೆಳೆಸಿದ್ದು ಒಕ್ಕಲಿಗರು. ಈ ಮೂಲಕ ಅಹಿಂದ ವರ್ಗಕ್ಕೆ ಬೆಂಬಲ ಸಿಕ್ಕಿದೆ. ಇದರಲ್ಲಿ ಅವಮಾನ ಎಲ್ಲಿಂದ ಬರುತ್ತೆ ಎಂದು ತಿಳಿಸಿದರು.

H.Vishwanath

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಯು ಬಿಜೆಪಿಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ. ನಮಗೆ ಯಾವುದೇ ಪ್ರತಿಷ್ಠೆ ಇಲ್ಲ. ಸಿದ್ದರಾಮಯ್ಯ, ಸಿಎಂ ಕುಮಾರಸ್ವಾಮಿ ಅಂತ ಹೇಳಿಕೊಂಡು ಪ್ರತಿಷ್ಠೆ ತೋರಲ್ಲ. ಜನರು ಎಲ್ಲವನ್ನೂ ನಿರ್ಧಾರ ಮಾಡುತ್ತಾರೆ ಎಂದರು.

ಮಂಡ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಬಾವುಟ ಒಟ್ಟಿಗೆ ಪ್ರಚಾರ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ವಿಶ್ವನಾಥ್ ಅವರು, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಬಾವುಟ ಹಿಡಿದರೆ ವೋಟ್ ಬೀಳುತ್ತೆ ಅಂತ ಹೇಳುವುದಕ್ಕೆ ಆಗುತ್ತಾ? ಜನರು ಅದೆಲ್ಲನ್ನು ತೀರ್ಮಾನ ಮಾಡುತ್ತಾರೆ. ಸುಮಲತಾ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಜೆಪಿ ಅವರಿಗೆ ಬೆಂಬಲ ನೀಡಿದೆ ಎಂದರು.

HDD

ಎಚ್.ಡಿ.ದೇವೇಗೌಡರು ಇಡೀ ಭಾರತವನ್ನ ಪ್ರತಿನಿಧಿಸಿದ್ದರು. ಅವರು ಹಾಸನ, ಮಂಡ್ಯ, ತುಮಕೂರು ಅಂತ ಸೀಮಿತ ಆಗಲ್ಲ. ಅವರಿಗೆ ಇಡೀ ಭಾರತವೇ ಕ್ಷೇತ್ರವಾಗಿದ್ದು, ಎಲ್ಲಿ ಸ್ಪರ್ಧಿಸಿದರೂ ಗೆಲ್ಲುತ್ತಾರೆ ಎಂದು ದೇವೇಗೌಡರು ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದನ್ನು ಸಮರ್ಥಿಸಿಕೊಂಡರು.

ದೋಸ್ತಿ ಸರ್ಕಾರದಲ್ಲಿ ಮಂಡ್ಯಕ್ಕೆ ಹೆಚ್ಚು ಅನುದಾನ ಕೊಟ್ಟರೆ ಏನು ತಪ್ಪು? ಬೇರೆ ಜಿಲ್ಲೆಗಳಿಗೂ ಅನುದಾನ ಕೊಟ್ಟಿದ್ದಾರೆ. ರಾಜ್ಯ ಯಾವ ಜಿಲ್ಲೆಗೂ ಅನ್ಯಾಯ ಮಾಡಿಲ್ಲ. ಆದರೆ ಹಾಸನ ಹಾಗೂ ಮಂಡ್ಯಗೆ ಸ್ವಲ್ಪ ಹೆಚ್ಚು ಅನುದಾನ ಕೊಟ್ಟಿರಬಹುದು ಎಂದರು.

ಲೋಕಸಭೆ ಚುನಾವಣೆ ಬಳಿಕವೂ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಇರುತ್ತದೆ. ಈ ಬಗ್ಗೆ ಯಾವುದೇ ಅನುಮಾನ ಬೇಡ. ನಾಳೆ ಏನಾಗುತ್ತೋ ನೋಡೋಣ. ಈಗ ಅದು ಬೇಡ ಎಂದು ತಿಳಿಸಿದರು.

mnd darshan

ರಾಜ್ಯದ ಜನರು ಮಂಡ್ಯದಿಂದ ಬೇಜಾರು ಆಗಿಲ್ಲ. ಆದರೆ ಮಂಡ್ಯ ಬಗ್ಗೆ ತೋರಿಸುತ್ತಿರುವವರ ಬಗ್ಗೆ ಬೇಸರವಾಗಿದ್ದಾರೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಬಿಜೆಪಿ ಸಂಸದ ಸದಾನಂದಗೌಡ, ಬಿ.ಎಸ್.ಯಡಿಯೂರಪ್ಪ ಬಗ್ಗೆಯೂ ಯಾರು ತೋರಿಸುತ್ತಿಲ್ಲ. ಕೇವಲ ಮಂಡ್ಯ, ಮಂಡ್ಯ ಅಂತ ತೋರಿಸುತ್ತಿದ್ದಾರೆ ಎಂದು ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರ ಹಾಕಿದರು.

ನನ್ನ ಮೇಲೆ ಯಾಕೆ ಐಟಿ ದಾಳಿ ಮಾಡುತ್ತಾರೆ. ನನ್ನ ಬಳಿ ಏನಿದೆ? ನಾವು ತಿರುಗಾಡುವವರು. ನನ್ನ ಬಳಿಯೂ ಏನು ಇಲ್ಲ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಬಳಿಯೂ ಏನು ಇಲ್ಲ ಎಂದು ತಿಳಿಸಿದರು.

TAGGED:congressformer CM SiddaramaiahH.D.Deve GowdaJDS H.VishwanathLok Sabha Election 2019mandyaPublic TVಎಚ್ ವಿಶ್ವನಾಥ್ಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಮಂಡ್ಯಮಾಜಿ ಸಿಎಂ ಸಿದ್ದರಾಮಯ್ಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

Crime
Bengaluru City

ಮಗುವಿಗೆ ಜನ್ಮ ನೀಡಿ ರಕ್ತಸ್ರಾವದಿಂದ ಲಿವಿಂಗ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಸಾವು

Public TV
By Public TV
5 hours ago
kannadigas israel and iran return
Bengaluru City

ಇಸ್ರೇಲ್-ಇರಾನ್ ಸಂಘರ್ಷ; 18 ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

Public TV
By Public TV
6 hours ago
Amit Shah in Benagluru
Bengaluru City

ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ – ತಡರಾತ್ರಿ ರೆಬೆಲ್ ನಾಯಕ ಸಭೆ

Public TV
By Public TV
6 hours ago
Chess Divya Deshmukh
Latest

ಚೆಸ್ | ದಿವ್ಯಾ ದೇಶಮುಖ್ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

Public TV
By Public TV
7 hours ago
TIGER
Chamarajanagar

ಹುಲಿ ದಾಳಿಗೆ ಕುರಿಗಾಹಿ ಮಹಿಳೆ ಬಲಿ- 9 ದಿನಕ್ಕೆ ಜಿಲ್ಲೆಯಲ್ಲಿ 2ನೇ ಸಾವು

Public TV
By Public TV
7 hours ago
Ramagara Murder
Court

ವರದಕ್ಷಿಣೆ ಕಿರುಕುಳದಿಂದ ಪತ್ನಿ ಸಾವು ಪ್ರಕರಣ – ಪತಿಗೆ ಜೀವಾವಧಿ ಶಿಕ್ಷೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?