Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | `ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?

Districts

`ಕೈ’ ಬಿಟ್ಟ ಹಳ್ಳಿ ಹಕ್ಕಿ! – ಸಿಂಹಗೆ ಎದುರಾಗ್ತಾರಾ ಬ್ರಿಜೇಶ್?

Public TV
Last updated: July 5, 2017 4:09 pm
Public TV
Share
3 Min Read
pratap simha brijesh kalappa
SHARE

ಕೆ.ಪಿ.ನಾಗರಾಜ್
ಮೈಸೂರು: ಪತ್ರಕರ್ತ ಕಂ ಸಂಸದ ಆಗಿರೋ ಪ್ರತಾಪ್ ಸಿಂಹಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ವಕೀಲ ಕಂ ರಾಜಕಾರಣಿ ಆಗಿರೋ ಬ್ರಿಜೇಶ್ ಕಾಳಪ್ಪ ಎದುರಾಳಿ ಆಗುತ್ತಾರಾ..?. ಇಂಥದ್ದೊಂದು ಪ್ರಶ್ನೆ ಈಗ ಮೈಸೂರು – ಕೊಡಗು ಭಾಗದಲ್ಲಿ ಹುಟ್ಟಿಕೊಂಡಿದೆ. ಯಾವಾಗ ಮಾಜಿ ಸಂಸದ ಎಚ್. ವಿಶ್ವನಾಥ್ ಕಾಂಗ್ರೆಸ್ ತೊರೆದು ಜೆಡಿಎಸ್ ಮನೆ ಸೇರಿದ್ರೋ ಅಲ್ಲಿಗೆ ಕಾಂಗ್ರೆಸ್‍ನಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಯೋರು ಯಾರು ಎಂಬ ಚರ್ಚೆ ಶುರುವಾಗಿದೆ. ಆರಂಭಿಕ ಚರ್ಚೆಯಲ್ಲಿ ಕಾಂಗ್ರೆಸ್ ಪಾಳಯದಿಂದ ಕೇಳಿ ಬರುತ್ತಿರುವ ಮೊದಲ ಹೆಸರೇ ಬ್ರಿಜೇಶ್ ಕಾಳಪ್ಪ..!

ಕೊಡಗು ಮೂಲದ ಬ್ರಿಜೇಶ್ ಕಾಳಪ್ಪ, ಸುಪ್ರೀಂಕೋರ್ಟ್‍ನಲ್ಲಿ ವಕೀಲರು. ಕಾಂಗ್ರೆಸ್ ಜೊತೆ ಬಹು ವರ್ಷದ ಸಾಂಗತ್ಯ ಬೆಳೆಸಿಕೊಂಡಿರೋ ಬ್ರಿಜೇಶ್, ಸಿಎಂ ಸಿದ್ದರಾಮಯ್ಯ ಅವರ ಆಪ್ತರು ಕೂಡ. ಸುಪ್ರೀಂ ಕೋರ್ಟ್‍ನಲ್ಲಿ ರಾಜ್ಯದ ನದಿ ನೀರಿನ ವಿವಾದ ಕೇಸ್ ಗಳ ವಕೀಲರ ಟೀಂನಲ್ಲಿ ಸಕ್ರಿಯರಾಗಿದ್ದು ಕೊಂಡೇ ಎಐಸಿಸಿಯ ಮಾಧ್ಯಮ ವಕ್ತಾರರಾಗಿದ್ದಾರೆ. ಕಾಂಗ್ರೆಸ್ ಎಷ್ಟೇ ಇರುಸು ಮುರಿಸಿನ ಸ್ಥಿತಿಯಲ್ಲಿದ್ದರೂ ಪಕ್ಷವನ್ನು ಮಾಧ್ಯಮಗಳಲ್ಲಿ ಸಮರ್ಥಿಸುತ್ತಾ ಹೈಕಮಾಂಡ್ ಕಣ್ಣಿಗೂ ಹತ್ತಿರವಾಗಿದ್ದಾರೆ.

brijesh kalappa

ಯಾವಾಗ, ಕಳೆದ ಲೋಕಸಭಾ ಚುನಾವಣೆಯಲ್ಲಿ ಎಚ್.ವಿಶ್ವನಾಥ್, ಪ್ರತಾಪ್ ಸಿಂಹ ಎದುರು ಸೋತರೋ ಅವತ್ತಿನಿಂದಲೇ ಬ್ರಿಜೇಶ್ ಕಾಳಪ್ಪ, ತಮ್ಮ ಒಂದು ಕಣ್ಣನ್ನು ಮೈಸೂರು ಲೋಕಸಭಾ ಕ್ಷೇತ್ರದ ಮೇಲೆ ಇಟ್ಟಿದ್ದರು. ಬ್ಯಾಕ್ ಟು ಬ್ಯಾಕ್ ಮೈಸೂರಿಗೆ ಬರುತ್ತಾ ಇಲ್ಲಿನ ಕಾರ್ಯಕರ್ತರ ಜೊತೆ ಸ್ನೇಹ ಬೆಳೆಸಿಕೊಂಡು ಮಾಧ್ಯಮದಲ್ಲೂ ಕಾಣಿಸಿಕೊಳ್ಳೋಕೆ ಶುರು ಮಾಡಿದ್ದರು. ಈಗ, ವಿಶ್ವನಾಥ್ ಅವರೇ ಪಕ್ಷದಿಂದ ಹೊರ ಹೋಗಿರೋ ಕಾರಣ ಬ್ರಿಜೇಶ್ ಕಾಳಪ್ಪ ಹಾದಿ ಸುಲಭವಾದಂತೆ ಕಾಣುತ್ತಿದೆ.

60 ವರ್ಷಗಳ ಹಿಂದೆ ಕೊಡಗು ಮೂಲದ ಸಿ.ಎಂ. ಪೊನ್ನಚ್ಚ ಅವರಿಗೆ ಕಾಂಗ್ರೆಸ್ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತ್ತು. ಆನಂತರ, ಕೊಡಗು ಮೂಲದವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿಲ್ಲ. 2009ರ ಚುನಾವಣೆಯಲ್ಲೇ ಬ್ರಿಜೇಶ್ ಕಾಳಪ್ಪ ಕ್ಷೇತ್ರದ ಟಿಕೆಟ್ ಕೇಳಿದ್ದರು. ಆದರೆ, 2008ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದ ಎಚ್. ವಿಶ್ವನಾಥ್ ಅವರು 2009ರ ಲೋಕಸಭಾ ಚುನಾವಣೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಇದರಿಂದ, ಒಂದು ಹಂತದಲ್ಲಿ ಬ್ರಿಜೇಶ್ ಕ್ಷೇತ್ರದ ಆಸೆಯೇ ಬಿಟ್ಟು ರಾಜ್ಯಸಭಾ ಸ್ಥಾನದ ಕಡೆ ಕಣ್ಣಿಟ್ಟು ಕುಳಿತಿದ್ದರು. ಈಗ, ಯಾರು ಅವರ ಟಿಕೆಟ್‍ಗೆ ಬಲವಾದ ಅಡ್ಡಿಯಾಗಿದ್ದರೋ ಅವರೇ ಪಕ್ಷ ತೊರೆದಿರೋ ಕಾರಣ ಮತ್ತೆ ಅಖಾಡ ಪ್ರವೇಶಕ್ಕೆ ಮುಂದಾಗಿದ್ದಾರೆ.

ಹೈಕಮಾಂಡ್ ಗೂ ಹತ್ತಿರ ಹತ್ತಿರ: ಕಾಂಗ್ರೆಸ್ ಹೈಕಮಾಂಡ್ ಜೊತೆ ಅದರಲ್ಲೂ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ಹಾಗೂ ಸಿಎಂ ಸಿದ್ದರಾಮಯ್ಯ ಮತ್ತು ಹಲವು ಕಾಂಗ್ರೆಸ್‍ನ ಘಟಾನುಘಟಿ ನಾಯಕರ ಜೊತೆ ನಿಕಟ ಸಂಪರ್ಕ ಹೊಂದಿರುವ ಬ್ರಿಜೇಶ್ ಕಾಳಪ್ಪ, ಲೋಕಸಭಾ ಕ್ಷೇತ್ರದ ಟಿಕೆಟ್ ಸುಲಭವಾಗಿಯೇ ಗಿಟ್ಟಿಸುತ್ತಾರೆ ಅನ್ನೋ ಮಾತು ಕಾಂಗ್ರೆಸ್ ವಲಯದಲ್ಲಿದೆ. ಅಲ್ಲದೆ, ಲೋಕಸಭಾ ಕ್ಷೇತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಯಾರು ಕೂಡಾ ಇದುವರೆಗೂ ಕ್ಷೇತ್ರದಲ್ಲಿ ಓಡಾಡದೆ ಇರೋದು ಕೂಡ ಬ್ರಿಜೇಶ್ ಕಾಳಪ್ಪಗೆ ಪ್ಲಸ್ ಪಾಯಿಂಟ್ ಆದಂತೆ ಕಾಣುತ್ತಿದೆ.

ಈ ಎಲ್ಲಾ ಲೆಕ್ಕಚಾರ ಸರಿಯಾದರೆ ಪ್ರತಾಪ್ ಸಿಂಹಗೆ ಬ್ರಿಜೇಶ್ ಕಾಳಪ್ಪ ಎದುರಾಳಿ ಆಗೋದು ನಿಶ್ಚಿತ. ಟಿವಿ ಡಿಬೇಟ್ ಗಳಲ್ಲಿ ಪರಸ್ಪರ ಮುಖಾಮುಖಿಯಾಗಿ ನಾನೋ ನೀನೋ ಎಂಬಂತೆ ವಾದಿಸುವ ಈ ಇಬ್ಬರು ಚುನಾವಣಾ ಅಖಾಡದಲ್ಲಿ ಮುಖಾಮುಖಿಯಾದರೆ ಅದರ ಖದರ್ ಇನ್ನೂ ಹೆಚ್ಚಾಗುತ್ತೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರ ಗೆಲುವಿಗೆ ದೊಡ್ಡ ಕೊಡುಗೆ ಕೊಟ್ಟಿದ್ದು ಕೊಡಗು. ಅದೇ ಕೊಡಗು ಮೂಲದ ಬ್ರಿಜೇಶ್ ಕಾಳಪ್ಪ, ಅಖಾಡ ಪ್ರವೇಶ ಮಾಡಿದರೆ ಅಲ್ಲಿನ ಮತದಾರನ ಪ್ರೀತಿ ಯಾರ ಮೇಲೆ ಇರುತ್ತೆ ಅನ್ನೋ ಕೂತುಹಲ ಕೂಡಾ ಇರುತ್ತೆ.

ಇದರ ಜೊತೆಗೆ ಜೆಡಿಎಸ್ ಯಾರಿಗೆ ಪಟ್ಟ ಕಟ್ಟುತ್ತೆ ಅನ್ನೋದು ಕೂಡ ಮುಖ್ಯ. ಎಚ್. ವಿಶ್ವನಾಥ್ ಅವರನ್ನು ತೆಕ್ಕೆಗೆ ತೆಗೆದುಕೊಂಡಿರೋ ಜೆಡಿಎಸ್ ಸದ್ಯಕ್ಕೆ ವಿಧಾನಸಭಾ ಚುನಾವಣೆಗೆ ಮಾತ್ರ ರಣತಂತ್ರ ಸಿದ್ಧ ಮಾಡುತ್ತಿದೆ. ಹೀಗಾಗಿ, ಲೋಕಸಭಾ ಚುನಾವಣೆಯ ಅಭ್ಯರ್ಥಿ ಬಗ್ಗೆ ಇಲ್ಲಿ ಇನ್ನೂ ಎಳೆಯಷ್ಟು ಚರ್ಚೆ ಕೂಡಾ ಶುರುವಾಗಿಲ್ಲ. ಎಚ್. ವಿಶ್ವನಾಥ್ ಪಕ್ಷ ಬಿಟ್ಟ ಕಾರಣ ಕಾಂಗ್ರೆಸ್ ನಲ್ಲಿ ಖಾಲಿಯಾದ ಲೋಕಸಭಾ ಚುನಾವಣಾ ಅಭ್ಯರ್ಥಿ ಸೀಟಿಗೆ ಚರ್ಚೆ ಶುರುವಾಗಿ ಚುನಾವಣೆಗೆ ಇನ್ನೂ ಎರಡು ವರ್ಷ ಮುಂಚೆಯೇ ಲೆಕ್ಕಚಾರಗಳು ಆರಂಭವಾಗಿಬಿಟ್ಟಿವೆ. ಇವತ್ತು ಇರೋ ರಾಜಕಾರಣ ನಾಳೆ ಇರಲ್ಲ. ಅಂತಹದರಲ್ಲಿ ಇದು ಇನ್ನೂ ಎರಡು ವರ್ಷದ ನಂತರದ ಮಾತು. ಅಷ್ಟರಲ್ಲಿ ಇನ್ನೂ ಯಾರ್ಯಾರು ಯಾವ ಯಾವ ಪಕ್ಷ ಸೇರುತ್ತಾರೋ, ಯಾರ್ಯಾರೂ ಆಕಾಂಕ್ಷಿಗಳಾಗಿ ಹುಟ್ಟಿಕೊಳ್ಳುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕೆ ಮಾತ್ರ ದೂರದ ದೆಹಲಿಯಲ್ಲಿ ಕಪ್ಪು ಕೋಟು ಹಾಕಿ ಕುಳಿತಿರೋ ಬ್ರಿಜೇಶ್ ಕಾಳಪ್ಪ ಮಾತ್ರ ಮೈಸೂರು – ಕೊಡಗಿನ ಮೇಲೆ ಪ್ರೀತಿ ಹೆಚ್ಚಿಸಿಕೊಂಡಿದ್ದಾರೆ.

modi pratap

TAGGED:bjpbrijesh kalappacongressmysurupratap simhaVishwanathಎಚ್ ವಿಶ್ವನಾಥ್ಕಾಂಗ್ರೆಸ್ಜೆಡಿಎಸ್ಪ್ರತಾಪ್ ಸಿಂಹಬಿಜೆಪಿಬ್ರಿಜೇಶ್ ಕಾಳಪ್ಪ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Kolara 3
Districts

ಕೋಲಾರದಲ್ಲಿ ಶೋಭಯಾತ್ರೆ – ಇಂದಿನಿಂದ 7 ದಿನ ಶ್ರೀ ಕಾಲರುದ್ರ ಮಹಾಯಜ್ಞ

Public TV
By Public TV
5 minutes ago
Gurugram Thar Accident Kills Garndfather and grandsons
Crime

ನಡೆದುಕೊಂಡು ಹೋಗುತ್ತಿದ್ದವರಿಗೆ ಥಾರ್ ಡಿಕ್ಕಿ – ಅಜ್ಜ, ಇಬ್ಬರು ಮೊಮ್ಮಕ್ಕಳು ದುರ್ಮರಣ

Public TV
By Public TV
25 minutes ago
indian LPG Tankers
Latest

ಹಾರ್ಮುಜ್‌ ದಾಟಲು ಗ್ರೀನ್‌ ಸಿಗ್ನಲ್‌ – ಭಾರತಕ್ಕೆ ಬಂತು LPG ಟ್ಯಾಂಕರ್‌, ಪೈನ್‌ ಗ್ಯಾಸ್‌ ಹೊತ್ತ ಮತ್ತೆರಡು ಹಡಗು

Public TV
By Public TV
36 minutes ago
Gadag Youth Suspected Death
Crime

ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ – ಕೊಲೆ ಮಾಡಿ ಸುಟ್ಟು ಬಿಸಾಕಿರುವ ಶಂಕೆ

Public TV
By Public TV
1 hour ago
Auto LPG 2
Districts

ವಾರದಲ್ಲಿ ಆಟೋ LPG ದರ 30 ರಿಂದ 40 ರೂ. ಏರಿಕೆ – ಕಲಬುರಗಿಯಲ್ಲಿ ಚಾಲಕರ ಆಕ್ರೋಶ

Public TV
By Public TV
2 hours ago
No King Protest
Latest

80 ಲಕ್ಷ ಜನರಿಂದ ʻNo Kingsʼ ಚಳವಳಿ – ಅಮೆರಿಕದಲ್ಲಿ ಟ್ರಂಪ್‌ ವಿರುದ್ಧವೇ ಭುಗಿಲೆದ್ದ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?