ಕಚೇರಿಯಲ್ಲಿ ಅತ್ಯಂತ ಕೆಟ್ಟ ದಿನಗಳನ್ನು ಎದುರಿಸಿದೆ- ರಾಜಕಾರಣಿಗಳ ವಿರುದ್ಧ ಐಎಎಸ್ ಅಧಿಕಾರಿ ಅಸಮಾಧಾನ

Public TV
1 Min Read
GLB Subodh Yadav

ಕಲಬುರಗಿ: ಕಚೇರಿಯಲ್ಲಿ ಇಂದು ಅತ್ಯಂತ ಕೆಟ್ಟ ದಿನಗಳನ್ನು ಎದುರಿಸಿದೆ ಅಂತಾ ವ್ಯವಸ್ಥೆಯ ವಿರುದ್ಧ ಪ್ರಾದೇಶಿಕ ಆಯುಕ್ತರೊಬ್ಬರು ಟ್ವಿಟ್ಟರ್ ಮೂಲಕ ವ್ಯಕ್ತಪಡಿಸಿದ್ದಾರೆ.

ಹೈದ್ರಾಬಾದ್ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ಖಡಕ್ ಐಎಎಸ್ ಅಧಿಕಾರಿ ಸುಬೋಧ್ ಯಾದವ್ ಅವರನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರಾಗಿ ಸರ್ಕಾರ ನೇಮಿಸಿದೆ. ಆದರೆ ಸುಭೋದ್ ಯಾದವ್ ಅವರು ಇದೇ ತಿಂಗಳ 15ರಂದು ಮಾಡಿರುವ ಟ್ವೀಟ್ ಭಾರೀ ಚರ್ಚೆಗೆ ಕಾರಣವಾಗಿದೆ. ಸ್ವತಂತ್ರವಾಗಿ ಕೆಲಸ ಮಾಡಲು ಸ್ಥಳೀಯ ರಾಜಕಾರಣಿಗಳು ಬಿಡುತ್ತಿಲ್ಲವೇ ಎಂಬ ಪ್ರಶ್ನೆ ಇದೀಗ ಮೂಡಿದೆ.

ಟ್ವೀಟ್‍ನಲ್ಲಿ ಏನಿದೆ?:
ಕಚೇರಿಯಲ್ಲಿ ಇಂದು ಅತ್ಯಂತ ಕೆಟ್ಟ ದಿನ ಎದುರಿಸಿದೆ. ಕೆಲವು ಸಲ ನೀವು ಏನೇ ಮಾಡಿದರೂ ಅದು ಗಣನೆಗೆ ಬರುವುದಿಲ್ಲ. ಕೆಲ ಅನಗತ್ಯ ವಿಚಾರಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಹೋಗಲಿ ಬಿಡಿ ಅದೇ ಜೀವನ, ಸದಾ ಸಿಹಿಯಾಗಿರುವುದಿಲ್ಲ ಎಂದು ಬರೆದು ಸುಬೋಧ್ ಯಾದವ್ ಟ್ವಿಟ್ ಮಾಡಿದ್ದಾರೆ.

ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಡೆದ ಬಹುಕೋಟಿ ಹಗರಣವನ್ನು ಬಯಲಿಗೆ ತರಲು ಸುಭೋದ ಯಾದವ ಪ್ಲಾನ್ ಮಾಡಿದ್ದರು. ಆದರೆ ಇದನ್ನು ತಡೆಯಲು ಕೆಲ ರಾಜಕಾರಣಿಗಳು ಒತ್ತಡ ಹೇರಿದ್ದಾರೆ. ಇದರಿಂದ ಮನನೊಂದ ಸುಬೋಧ್ ಯಾದವ್ ಟ್ವಿಟ್ಟರ್ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

GLB Mahanagar palike

Share This Article
Leave a Comment

Leave a Reply

Your email address will not be published. Required fields are marked *