Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಭಿನಂದನ್ ಬಿಡುಗಡೆಗಾಗಿ ಪಾಕಿಗೆ ಎಚ್ಚರಿಕೆ ನೀಡಿದ್ವಿ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಭಿನಂದನ್ ಬಿಡುಗಡೆಗಾಗಿ ಪಾಕಿಗೆ ಎಚ್ಚರಿಕೆ ನೀಡಿದ್ವಿ: ಮೋದಿ

Latest

ಅಭಿನಂದನ್ ಬಿಡುಗಡೆಗಾಗಿ ಪಾಕಿಗೆ ಎಚ್ಚರಿಕೆ ನೀಡಿದ್ವಿ: ಮೋದಿ

Public TV
Last updated: April 21, 2019 7:25 pm
Public TV
Share
2 Min Read
modi 9
SHARE

ಗಾಂಧಿನಗರ: ವಾಯುಸೇನೆಯ ಪೈಲಟ್ ಅಭಿನಂದನ್ ಅವರನ್ನು ಸುರಕ್ಷಿತವಾಗಿ ಬಿಡುಗಡೆ ಮಾಡಬೇಕು. ಒಂದು ವೇಳೆ ಸುರಕ್ಷಿತವಾಗಿ ಒಪ್ಪಿಸದೇ ಇದ್ದಲ್ಲಿ ನಂತರ ನಡೆಯುವ ಪರಿಣಾಮಗಳನ್ನು ಎದುರಿಸಲು ನೀವು ಸಿದ್ಧರಾಗಿರಬೇಕು ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ವಿಚಾರವನ್ನು ಪ್ರಧಾನಿ ಮೋದಿ ಬಹಿರಂಗ ಪಡಿಸಿದ್ದಾರೆ.

ಗುಜರಾತಿನ ಪಠಣ್‍ನಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಪೈಲಟ್ ಪಾಕ್ ವಶದಲ್ಲಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ಸರ್ಕಾರದ ಪ್ರತಿಕ್ರಿಯೆಯನ್ನು ಕೇಳಿತ್ತು. ಈ ವೇಳೆ ಸರ್ಕಾರ ಸುದ್ದಿಗೋಷ್ಠಿ ನಡೆಸಿ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆಯನ್ನು ನೀಡಿತ್ತು ಎಂದು ಮೋದಿ ತಿಳಿಸಿದರು.

“ಒಂದು ವೇಳೆ ನಮ್ಮ ಪೈಲಟ್‍ಗೆ ಏನಾದರೂ ತೊಂದರೆಯಾದಲ್ಲಿ ಆ ನಂತರ ಪರಿಸ್ಥಿತಿ ಹೇಗಿರುತ್ತದೆ ಅಂದರೆ ಇಡೀ ವಿಶ್ವಕ್ಕೆ ಈ ಪರಿಸ್ಥಿತಿಗೆ ಮೋದಿಯೇ ಕಾರಣ ಎಂದು ಹೇಳಬೇಕಾಗುತ್ತದೆ” ಎನ್ನುವ ಕಠಿಣ ಸಂದೇಶವನ್ನು ಪಾಕಿಸ್ತಾನಕ್ಕೆ ರವಾನಿಸಿದ್ದೇವು ಎಂದು ಹೇಳಿದರು.

modi bjp 1 e1555854747541

“ಈಗ ಪರಿಸ್ಥಿತಿ ಏನಾದರೂ ವಿಕೋಪಕ್ಕೆ ಹೋದರೆ 12 ಕ್ಷಿಪಣಿಗಳ ಮೂಲಕ ಮೋದಿ ದಾಳಿ ನಡೆಸಲು ಸಿದ್ಧವಾಗಿದ್ದಾರೆ. ಒಂದು ವೇಳೆ ಎರಡನೇ ದಿನ ಪಾಕಿಸ್ತಾನ ಭಾರತದ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದೇ ಇದ್ದರೆ ಆ ರಾತ್ರಿ ಪಾಕಿಸ್ತಾನದ ಪಾಲಿಗೆ ಕರಾಳ ರಾತ್ರಿ ಆಗಲಿದೆ” ಎಂದು ಅಮೆರಿಕದ ಹಿರಿಯ ಅಧಿಕಾರಿಯೊಬ್ಬರು ನೀಡಿದ್ದ ಹೇಳಿಕೆಯ ವಿಚಾರವನ್ನು ತಮ್ಮ ಭಾಷಣದಲ್ಲಿ ಮೋದಿ ಪ್ರಸ್ತಾಪಿಸಿದರು.

ಈ ಹೇಳಿಕೆಯನ್ನು ಅಮೆರಿಕ ಹೇಳಿದ್ದು ಹೊರತು ನಾನು ಹೇಳಿಲ್ಲ. ಈ ಸಮಯದಲ್ಲಿ ನಾನು ಏನು ಹೇಳುವುದಿಲ್ಲ. ಸೂಕ್ತ ಸಮಯ ಬಂದಾಗ ನಾನೇ ಈ ವಿಚಾರವನ್ನು ಬಹಿರಂಗ ಪಡಿಸುತ್ತೇನೆ ಎಂದು ಮೋದಿ ತಿಳಿಸಿದರು.

ಭಾಷಣದಲ್ಲಿ ರಾಷ್ಟ್ರೀಯ ಭದ್ರತೆಯ ವಿಚಾರವನ್ನು ಪ್ರಸ್ತಾಪಿಸಿದ ಮೋದಿ, ಪ್ರಧಾನಿ ಸೀಟ್ ಇರುತ್ತದೋ ಇಲ್ಲವೋ ಗೊತ್ತಿಲ್ಲ. ನಾನು ಇರುವವರೆಗೂ ಉಗ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಒಂದೋ ನಾನು ಜೀವಂತವಾಗಿರಬೇಕು ಇಲ್ಲವೇ ಉಗ್ರರು ಜೀವಂತವಾಗಿರಬೇಕು. ಈ ನಿರ್ಧಾರವನ್ನು ನಾನು ಈಗಾಗಲೇ ಕೈಗೊಂಡಾಗಿದೆ ಎಂದು ತಿಳಿಸಿದರು.

modi bjp 2 e1555854783202

ಗುರುವಾರ ರಾಜ್ಯದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಈ ರಾಜ್ಯದ ಮಣ್ಣಿನ ಮಗನಾದ ನನ್ನನ್ನು ರಕ್ಷಿಸುವ ಕರ್ತವ್ಯ ನಿಮ್ಮ ಮೇಲಿದೆ. ಹೀಗಾಗಿ ಎಲ್ಲ 26 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿಕೊಂಡರು.

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ಶತಃಸಿದ್ಧ. ಆದರೆ ಗುಜರಾತಿನಲ್ಲಿ 26 ಸ್ಥಾನ ಗೆಲ್ಲದೇ ಇದ್ದಲ್ಲಿ ಮೇ 23ರ ಟಿವಿ ವಾಹಿನಿಗಳಲ್ಲಿ ಈ ವಿಚಾರದ ಬಗ್ಗೆ ಮುಖ್ಯ ಚರ್ಚೆಯಾಗುತ್ತದೆ ಎಂದು ವ್ಯಂಗ್ಯವಾಗಿ ಹೇಳಿದರು.

ಬಾಲಕೋಟ್ ನಲ್ಲಿರುವ ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದ ಬಳಿಕ ಫೆ.27 ರಂದು ಪಾಕಿಸ್ತಾನ ಭಾರತದ ಮೇಲೆ ವಾಯು ದಾಳಿ ನಡೆಸಲು ಮುಂದಾಗಿತ್ತು. ಈ ವೇಳೆ ಪಾಕ್ ವಿಮಾನದ ಜೊತೆಗಿನ ಡಾಗ್ ಫೈಟ್ ಕಾಳಗದಲ್ಲಿ ಎಫ್-16 ವಿಮಾನವನ್ನು ಅಭಿನಂದನ್ ಹೊಡೆದು ಉರುಳಿಸಿದ್ದರು. ಈ ವೇಳೆ ಪಾಕ್ ಅಭಿನಂದನ್ ಅವರಿದ್ದ ಮಿಗ್ -21 ವಿಮಾನದ ಮೇಲೆ ಕ್ಷಿಪಣಿ ದಾಳಿ ಮಾಡಿತ್ತು. ಪರಿಣಾಮ ಅಭಿನಂದನ್ ವಿಮಾನ ಪತನಗೊಂಡು ಪಾಕ್ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಬಿದ್ದಿತ್ತು. ನಂತರ ಪಾಕ್ ಸೇನೆ ಅಭಿನಂದನ್ ಅವರನ್ನು ವಶಕ್ಕೆ ಪಡೆದು ಮಾರ್ಚ್ 1 ರಂದು ರಾತ್ರಿ ಬಿಡುಗಡೆ ಮಾಡಿತ್ತು.

modi bjp 3 e1555854821469

TAGGED:Abhinandan Varthamanbjpindianarendra modipakistanಅಭಿನಂದನ್ನರೇಂದ್ರ ಮೋದಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories
honey singh 1
ನಾನು ದುಬೈನಲ್ಲಿ ಸೇಫ್ ಆಗಿದ್ದೇನೆ: ವದಂತಿಗಳಿಗೆ ಕಿವಿಗೊಡಬೇಡಿ ಎಂದ ಹನಿ ಸಿಂಗ್
Cinema Latest National Top Stories
Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories

You Might Also Like

Boats in the Strait of Hormuz amid the U.S. Israeli conflict with Iran
Latest

ಇರಾನ್ ದಾಳಿಗೆ ಮೂವರು ಭಾರತೀಯರು ಬಲಿ

Public TV
By Public TV
57 seconds ago
DK Shivakumar 9
Bengaluru City

ಹೇಮಾವತಿ ಲಿಂಕ್ ಕೆನಾಲ್ ಯೋಜನೆ ನಿಲ್ಲಿಸಲು ಸಾಧ್ಯವಿಲ್ಲ: ಡಿಕೆಶಿ

Public TV
By Public TV
1 hour ago
pete hegseth
Latest

ಮುಂದಿನ 24-48 ಗಂಟೆಗಳಲ್ಲಿ ಇರಾನ್ ಮೇಲಿನ ದಾಳಿ ಅತ್ಯಂತ ಭೀಕರವಾಗಿರಲಿದೆ – US ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ 

Public TV
By Public TV
2 hours ago
trump maga
Latest

ಇರಾನ್‌ ವಿರುದ್ಧ ಕಾರ್ಯಾಚರಣೆಗೆ ವಾಯುನೆಲೆ ಕೊಡಲ್ಲ ಎಂದ ಸ್ಪೇನ್‌ ಜೊತೆ ವ್ಯಾಪಾರ ಒಪ್ಪಂದ ರದ್ದುಗೊಳಿಸಿದ ಟ್ರಂಪ್‌

Public TV
By Public TV
2 hours ago
Bhatkal people petrol bunk
Latest

ಇಸ್ರೇಲ್‌-ಇರಾನ್‌ ಯದ್ಧ; ಭಟ್ಕಳದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಸಾಲುಗಟ್ಟಿ ನಿಂತ ಜನ

Public TV
By Public TV
3 hours ago
basava kalyana police station protest
Bidar

ಮೌಲ್ವಿಗಳನ್ನ ಚುಡಾಯಿಸಿದ್ದಕ್ಕೆ ಕೆರಳಿ ಪ್ರೊಟೆಸ್ಟ್ – ಪೊಲೀಸ್ ಠಾಣೆ ಎದುರು ಭಾರಿ ಹೈಡ್ರಾಮಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?