ಚಿಕ್ಕಬಳ್ಳಾಪುರ: ಗುರುವಾರ ರಾತ್ರಿ ಚಿಕ್ಕಬಳ್ಳಾಪುರದಲ್ಲಿ (Chikballapur) ಸುರಿದ ಬಿರುಗಾಳಿ ಸಹಿತ ಆಲಿಕಲ್ಲು (Hailstorm) ಮಳೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ರೇಣುಮಾಕಲಹಳ್ಳಿ ಗ್ರಾಮದ ರೈತ (farmer) ರಾಮಮೂರ್ತಿ ಹಾಗೂ ನಾರಾಯಣ ಮೂರ್ತಿ ಎಂಬುವವರು ಬೆಳೆದಿದ್ದ ದ್ರಾಕ್ಷಿ ಫಸಲು ಆಲಿಕಲ್ಲು ಮಳೆಗೆ ಸಿಲುಕಿ ಹಾಳಾಗಿದೆ.
ಬೊಮ್ಮನಹಳ್ಳಿ ಗ್ರಾಮದ ಬೆರಾರೆಡ್ಡಿ ಎಂಬುವವರಿಗೆ ಸೇರಿದ ಜೋಳದ ಬೆಳೆ ಸಹ ಸಂಪೂರ್ಣ ನೆಲಕ್ಕುರುಳಿದೆ. ಇಷ್ಟೇ ಅಲ್ಲದೇ ರೈತರು ಬೆಳೆದಿದ್ದ ಹೂವಿನ ತೋಟ, ತರಕಾರಿ ಸೇರಿದಂತೆ ದಾಳಿಂಬೆ ಬೆಳೆಗಳು ಹಾನಿಯಾಗಿ ಲಕ್ಷಾಂತರ ರೂ. ಮೌಲ್ಯದ ಬೆಳೆ ಹಾನಿ ಸಂಭವಿಸಿದೆ. ಬೆಳೆ ಹಾನಿಯಿಂದ ಕಂಗಾಲಾಗಿರುವ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಹವಾಮಾನ ವೈಪರಿತ್ಯದಿಂದ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಮಾ. 18ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ( Meteorological Department) ಮಾಹಿತಿ ನೀಡಿದೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!