ಬೆಂಗಳೂರು: ಚಿನ್ನ ಮಾರಾಟ ಮಾಡಿ, ಹಣ ಕೊಡೋದಾಗಿ ಹೇಳಿ 1.6 ಕೋಟಿ ರೂ. ಮೌಲ್ಯದ 1,300 ಗ್ರಾಂ ಚಿನ್ನವನ್ನು ಲಪಟಾಯಿಸಿದ್ದ ಇಬ್ಬರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಜೀರನ್ ಸಕಾರಿಯಾ, ರಾಜೇಂದ್ರ ಸಕಾರಿಯಾ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಉಮರ್ 2 ತಿಂಗಳ ಹಿಂದೆ ಮನೆಗೆ ಬಂದಿದ್ದ – ದೆಹಲಿ ಸ್ಫೋಟದಿಂದ ನಮಗೂ ಆಘಾತವಾಗಿದೆ ಎಂದ ಅತ್ತಿಗೆ
ಕಳೆದ ಕೆಲವು ತಿಂಗಳ ಹಿಂದೆ ಹರ್ಷಿತ್.ಬಿ ಎಂಬುವವರಿಗೆ ಆರೋಪಿಗಳು ಪರಿಚಯವಾಗಿದ್ದರು. ಅದಾದ ಬಳಿಕ ಮಹಿಳೆಯಿಂದ 1.60 ಕೋಟಿ ಮೌಲ್ಯದ 1300 ಗ್ರಾಂ ಚಿನ್ನದ ಗಟ್ಟಿಯನ್ನು ಪಡೆದು ಮಾರಾಟ ಮಾಡಿಕೊಡುವುದಾಗಿ ಹೇಳಿದ್ದರು. ಚಿನ್ನ ಪಡೆದು ಮೂರು ತಿಂಗಳಾದರೂ ಕೂಡ ಹಣ ನೀಡಿರಲಿಲ್ಲ. ಇದರಿಂದ ಮಹಿಳೆ ಹಲಸೂರು ಗೇಟ್ (Halsoor Gate) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ನಡೆಸಿ ಇಬ್ಬರು ಆರೋಪಗಳನ್ನು ಅರೆಸ್ಟ್ ಮಾಡಿ, ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಹಲವರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಗೃಹ ಸಚಿವ ಅಮಿತ್ ಶಾ – ಪ್ರಿಯಾಂಕ್ ಖರ್ಗೆ

