Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

Public TV
Last updated: June 7, 2024 9:09 am
Public TV
Share
3 Min Read
hamare baarah
SHARE

– ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ (Muslim Organization) ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ  ʻಹಮಾರೆ ಬಾರಹ್‌ʼ (Hamare Baarah) ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ (Govt of Karnataka) ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ. ಇದನ್ನೂ ಓದಿ: ನಟಿ, ನೂತನ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

Hum Baraha cinema page 0001

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

Hum Baraha cinema page 0002

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು. ಇದನ್ನೂ ಓದಿ: ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದ ಶಾಂತಿಗೆ ಭಂಗವುಂಟಾಗುತ್ತದೆ. ಜೊತೆಗೆ ಸೌಹಾರ್ದತೆ ಹದಗೆಡುವ ಸಾಧ್ಯತೆಯಿದ್ದು, ಮಹಿಳೆಯರ ಭಾವನೆಗಳಿಗೂ ಧಕ್ಕೆಯುಂಟಾಗುತ್ತದೆ ಎಂಬ ಸನ್ನಿವೇಶಗಳು ಕಂಡುಬಂದಿವೆ. ಚಲನಚಿತ್ರ ಬಿಡುಗಡೆಗೂ ಮುನ್ನ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2)ರಡಿ ಸಂಬಂಧಪಟ್ಟವರಿಗೆ ನೋಟೀಸನ್ನು ಜಾರಿ ಮಾಡಿ ವಿವರಣೆ ಪಡೆಯಬೇಕಾಗಿತ್ತು. ಆದರೆ ಸದರಿ ಚಲನಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್.ಗುಪ್ತ, ಶಿಯೋ ಬಲಕ್ ಸಿಂಗ್, ಸಂಜಯ್ ನಾಗಪಾಲ್ ಹಾಗೂ ಮತ್ತಿತರರು ನೆರೆ ರಾಜ್ಯದಲ್ಲಿದ್ದು, ಸದರಿಯವರಿಗೆ ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2) ಅಡಿ ನೋಟೀಸು ಜಾರಿ ಮಾಡಿ, ಅವರುಗಳಿಂದ ವಿವರಣೆ ಪಡೆದು ಪರಿಶೀಲಿಸಲು ಸಾಕಷ್ಟು ಕಾಲಾವಕಾಶ ಇಲ್ಲದಿರುವುದರಿಂದ ಸಿನಿಮಾ ನಿಷೇಧಕ್ಕೆ ಆದೇಶಿಸಿದೆ. ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾಲನ್‌ಗಳು, ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

TAGGED:Cinema ActHamare BaarahKamal ChandraMuslim Organizationsiddaramaiahಕರ್ನಾಟಕ ಸರ್ಕಾರಮುಸ್ಲಿಂ ಸಂಘಟನೆಸಿದ್ದರಾಮಯ್ಯಸಿನಿಮಾ ಆಕ್ಟ್‌ಹಮಾರೆ ಬಾರಹ್‌ ಸಿನಿಮಾ
Share This Article
Facebook Whatsapp Whatsapp Telegram

Cinema Updates

disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
3 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
3 hours ago
yash kajal
Ramayana: ‘ರಾವಣ’ ಯಶ್ ಪತ್ನಿಯಾಗಿ ಕಾಜಲ್ ಅಗರ್ವಾಲ್?
4 hours ago
drithi puneeth rajkumar
ವಿದೇಶದಲ್ಲಿ ಪದವಿ ಪಡೆದ ಪುನೀತ್ ರಾಜ್‌ಕುಮಾರ್ ಪುತ್ರಿ ಧೃತಿ
5 hours ago

You Might Also Like

BSF Army Purnam kumar
Latest

ಬಿಎಸ್‌ಎಫ್‌ ಯೋಧನಿಗೆ 20 ದಿನವೂ ಇನ್ನಿಲ್ಲದ ಟಾರ್ಚರ್‌ ನೀಡಿದ್ದ ಪಾಕ್‌

Public TV
By Public TV
22 minutes ago
D K Shivakumar 2
Districts

ವಿಪಕ್ಷದವರು ಕ್ವಾರ್ಟರ್ ಅಲ್ಲ, ಫುಲ್ ಬಾಟಲ್ ಆದ್ರೂ ಹೇಳಲಿ ನಾವು ತಲೆ ಕೆಡಿಸಿಕೊಳ್ಳಲ್ಲ: ಡಿಕೆಶಿ

Public TV
By Public TV
26 minutes ago
Shobha Karandlaje
Dharwad

ಕಾಂಗ್ರೆಸ್ ಅವಧಿಯಲ್ಲಿ ದೇಶದ ರಕ್ಷಣಾ ಕ್ಷೇತ್ರ ಬಲಪಡಿಸಿಲ್ಲ: ಶೋಭಾ ಕರಂದ್ಲಾಜೆ

Public TV
By Public TV
37 minutes ago
CM Siddaramaiah 2
Districts

ಗಂಗಾವತಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆದರೆ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ – ಸಿಎಂ

Public TV
By Public TV
55 minutes ago
DCET Exam
Districts

ದ್ವಿತೀಯ ಪಿಯುಸಿ ಪರೀಕ್ಷೆ- 2 ಫಲಿತಾಂಶ ಪ್ರಕಟ

Public TV
By Public TV
1 hour ago
Chinnaswamy Stadium
Bengaluru City

ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್ – ಎಲ್ಲಿ ಪಾರ್ಕ್ ಮಾಡಬಹುದು?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?