Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

Bengaluru City

ಕರ್ನಾಟಕದಲ್ಲಿ ʻಹಮಾರೆ ಬಾರಾಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

Public TV
Last updated: June 7, 2024 9:09 am
Public TV
Share
3 Min Read
hamare baarah
SHARE

– ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿವಿಧ ಮುಸ್ಲಿಂ ಸಂಘಟನೆಗಳ (Muslim Organization) ಮನವಿ ಮೇರೆಗೆ ಸರ್ಕಾರವು ರಾಜ್ಯದಲ್ಲಿ ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆ ಮತ್ತು ಪ್ರಸಾರವನ್ನು ನಿಷೇಧಿಸಿ ಆದೇಶಿಸಿದೆ. ಶುಕ್ರವಾರ (ಇಂದು) ಬಿಡುಗಡೆಯಾಗಬೇಕಿದ್ದ  ʻಹಮಾರೆ ಬಾರಹ್‌ʼ (Hamare Baarah) ಚಿತ್ರವನ್ನು ಈಗಾಗಲೇ ದೇಶಾದ್ಯಂತ ವಿವಿಧೆಡೆ ನಿಷೇಧಿಸಲಾಗಿದೆ.

ಸಿನಿಮಾ ಟ್ರೈಲರ್‌ನಲ್ಲಿಯೇ ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತರುವಂತಹ ಅಂಶಗಳಿವೆ. ಆದ್ದರಿಂದ ಚಿತ್ರ ಬಿಡುಗಡೆ ಮಾಡದಂತೆ ಮುಸ್ಲಿಂ ಸಂಘಟನೆಗಳು ರಾಜ್ಯ ಸರ್ಕಾರಕ್ಕೆ (Govt of Karnataka) ಮನವಿ ಮಾಡಿದ್ದವು. ವಿವಿಧ ಸಂಘಟನೆಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಚಲನಚಿತ್ರ ಬಿಡುಗಡೆಗೆ ನಿಷೇಧ ಹೇರಿದೆ. ಇದನ್ನೂ ಓದಿ: ನಟಿ, ನೂತನ ಸಂಸದೆ ಕಂಗನಾ ರಣಾವತ್‌ಗೆ ಕಪಾಳಮೋಕ್ಷ

Hum Baraha cinema page 0001

ಸರ್ಕಾರದ ಆದೇಶ ಪ್ರತಿಯಲ್ಲಿ ಏನಿದೆ?
ವಿವಿಧ ಜಿಲ್ಲೆ ಹಾಗೂ ತಾಲೂಕುಗಳ ಮುಸ್ಲಿಂ ಸಂಘಗಳಿಂದ ಸ್ವೀಕೃತವಾಗಿರುವ ಮನವಿಗಳಲ್ಲಿ ಇತ್ತೀಚೆಗೆ ಖಾಸಗಿ ವಾಹಿನಿಯೊಂದು ʻಹಮಾರೆ ಬಾರಾಹ್ʼ ಎಂಬ ಚಲನಚಿತ್ರದ ಟ್ರೈಲರ್ (Cinema Trailer) ಬಿಡುಗಡೆ ಮಾಡಿದ್ದು, ಇದರಲ್ಲಿ ಮುಸ್ಲಿಂ ಧರ್ಮದ ಬಗ್ಗೆ ಪ್ರಚೋದನಾತ್ಮಕ ಮತ್ತು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ. ಆದ್ದರಿಂದ ಇಂತಹ ಚಿತ್ರಗಳಿಗೆ ಅನುಮತಿ ನೀಡಿದರೆ ಧರ್ಮ ಮತ್ತು ಜಾತಿಗಳ ಮಧ್ಯೆ ದ್ವೇಷ ಹುಟ್ಟಿಸುತ್ತದೆ. ದೇಶದಲ್ಲಿ ಒಂದು ಧರ್ಮವನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿ, ಕೋಮು ಸೌಹಾರ್ದತೆಗೆ ಧಕ್ಕೆಯುಂಟು ಮಾಡಿ, ದೇಶದಲ್ಲಿ ಅಶಾಂತಿ ಉಂಟು ಮಾಡುವುದು, ಮುಸ್ಲಿಂ ಧರ್ಮದ ಭಾವನೆಗಳಿಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರವಾಗಿದೆ.

Hum Baraha cinema page 0002

ಚಲನಚಿತ್ರಗಳು ಸಮಾಜದಲ್ಲಿ ಮಾರ್ಗದರ್ಶನವಾಗಬೇಕು, ಅದನ್ನು ಬಿಟ್ಟು ಧರ್ಮಗಳ ಮಧ್ಯೆ ದ್ವೇಷ ಭಾವನೆ ಹುಟ್ಟಿಸುವುದಲ್ಲ. ಅದರಂತೆ, ಜೂನ್‌ 7 ರಂದು ಬಿಡುಗಡೆಯಾಗಲಿರುವ ʻಹಮಾರೆ ಬಾರಾಹ್ʼ ಎಂಬ ವಿವಾದಾತ್ಮಕ ಸಿನಿಮಾವನ್ನು ಬಿಡುಗಡೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಘಟನೆಗಳು ಮನವಿ ಮಾಡಿದ್ದವು. ಇದನ್ನೂ ಓದಿ: ನನ್ನ ತಾಯಿ ಕೂಡ ಪ್ರತಿಭಟನೆಯಲ್ಲಿದ್ರು- ಕಂಗನಾಗೆ ಕಪಾಳಮೋಕ್ಷ ಮಾಡಿದ ಸಿಬ್ಬಂದಿ ಸಮರ್ಥನೆ

ಈ ಚಲನಚಿತ್ರದ ಟ್ರೈಲರ್ ಅನ್ನು ಪರಿಶೀಲಿಸಲಾಗಿ ʻಹಮಾರೆ ಬಾರಾಹ್ʼ ಚಲನಚಿತ್ರದಲ್ಲಿ ಪವಿತ್ರ ಗ್ರಂಥ ಕುರಾನ್ ಶರೀಫರಲ್ಲಿ ಇರುವ ಸೂರೆ ಎ ಬಕರ ದ ಸಾಲಿನಲ್ಲಿನ ಉಪದೇಶಗಳು ಹಾಗೂ ಸಂದೇಶಗಳ ಕುರಿತಂತೆ ನಿರ್ಮಾಪಕ ಹಾಗೂ ನಿರ್ದೇಶಕರು ತಪ್ಪು ಅಪಾರ್ಥ ಸೃಷ್ಟಿಸಿ, ಪ್ರಚೋದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆ ನೀಡಿ, ಕೆಲವು ಧರ್ಮದ ಜನರುಗಳನ್ನು ಕೆರಳಿಸುವ, ದ್ವೇಷ ಭಾವನೆ ಪ್ರಚೋದಿಸುವ ಮತ್ತು ಒಂದು ಸಮಾಜವನ್ನು ಅವಹೇಳನಕಾರಿಯಾಗಿ ಬಿಂಬಿಸುವ ಪ್ರಯತ್ನದಂತೆ ಕಾಣುತ್ತದೆ. ಒಂದು ಸಮಾಜವನ್ನು ಧರ್ಮದ ಆಧಾರದಲ್ಲಿ ವಿಶ್ಲೇಷಣೆ ಮಾಡುವುದು ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಸಂಭವವಿದೆ.

ʻಹಮಾರೆ ಬಾರಾಹ್ʼ ಚಲನಚಿತ್ರ ಬಿಡುಗಡೆಗೆ ಅನುಮತಿ ಕೊಟ್ಟಲ್ಲಿ ರಾಜ್ಯದ ಶಾಂತಿಗೆ ಭಂಗವುಂಟಾಗುತ್ತದೆ. ಜೊತೆಗೆ ಸೌಹಾರ್ದತೆ ಹದಗೆಡುವ ಸಾಧ್ಯತೆಯಿದ್ದು, ಮಹಿಳೆಯರ ಭಾವನೆಗಳಿಗೂ ಧಕ್ಕೆಯುಂಟಾಗುತ್ತದೆ ಎಂಬ ಸನ್ನಿವೇಶಗಳು ಕಂಡುಬಂದಿವೆ. ಚಲನಚಿತ್ರ ಬಿಡುಗಡೆಗೂ ಮುನ್ನ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2)ರಡಿ ಸಂಬಂಧಪಟ್ಟವರಿಗೆ ನೋಟೀಸನ್ನು ಜಾರಿ ಮಾಡಿ ವಿವರಣೆ ಪಡೆಯಬೇಕಾಗಿತ್ತು. ಆದರೆ ಸದರಿ ಚಲನಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್.ಗುಪ್ತ, ಶಿಯೋ ಬಲಕ್ ಸಿಂಗ್, ಸಂಜಯ್ ನಾಗಪಾಲ್ ಹಾಗೂ ಮತ್ತಿತರರು ನೆರೆ ರಾಜ್ಯದಲ್ಲಿದ್ದು, ಸದರಿಯವರಿಗೆ ಕರ್ನಾಟಕ ಸಿನಿಮಾ (ರೆಗ್ಯೂಲೇಶನ್) ಆಕ್ಟ್ -1964ರ ಸೆಕ್ಷನ್ -15(2) ಅಡಿ ನೋಟೀಸು ಜಾರಿ ಮಾಡಿ, ಅವರುಗಳಿಂದ ವಿವರಣೆ ಪಡೆದು ಪರಿಶೀಲಿಸಲು ಸಾಕಷ್ಟು ಕಾಲಾವಕಾಶ ಇಲ್ಲದಿರುವುದರಿಂದ ಸಿನಿಮಾ ನಿಷೇಧಕ್ಕೆ ಆದೇಶಿಸಿದೆ. ಎರಡು ವಾರಗಳ ಅವಧಿಗೆ ಅಥವಾ ಮುಂದಿನ ಆದೇಶದ ವರೆಗೆ ರಾಜ್ಯದ ಯಾವುದೇ ಎಲೆಕ್ಟ್ರಾನಿಕ್ ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನಿಮಾ ಮಂದಿರಗಳು, ಖಾಸಗಿ ಟಿವಿ ಚಾಲನ್‌ಗಳು, ಇತರೆ ಮಾಧ್ಯಮಗಳ ಮೂಲಕ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

TAGGED:Cinema ActHamare BaarahKamal ChandraMuslim Organizationsiddaramaiahಕರ್ನಾಟಕ ಸರ್ಕಾರಮುಸ್ಲಿಂ ಸಂಘಟನೆಸಿದ್ದರಾಮಯ್ಯಸಿನಿಮಾ ಆಕ್ಟ್‌ಹಮಾರೆ ಬಾರಹ್‌ ಸಿನಿಮಾ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
1 hour ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
1 hour ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
2 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
2 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
2 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?