ಟೆಲ್ಅವಿವ್: ಕತಾರ್ ರಾಜಧಾನಿ ದೋಹಾದಲ್ಲಿ (Doha) ಇಸ್ರೇಲ್ ನಡೆಸಿದ ಭೀಕರ ವಾಯುದಾಳಿಯಲ್ಲಿ (Israel Air Strike) ನಮ್ಮ ನಾಯಕ ಬದುಕುಳಿದಿದ್ದಾರೆ. ಆದ್ರೆ ಹಮಾಸ್ ನಾಯಕ ಪುತ್ರ ಸೇರಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಹಮಾಸ್ ಬಂಡುಕೋರರ ಗುಂಪು ಅಧಿಕೃತ ಹೇಳಿಕೆ ನೀಡಿದೆ.
ಯುದ್ಧ ನಿಲ್ಲಬೇಕು, ಗಾಜಾದಿಂದ ಸೈನ್ಯ ಹಿಂದಕ್ಕೆ ತೆಗೆದುಕೊಳ್ಳಬೇಕು ಮತ್ತು ಗಾಜಾವನ್ನು ನೋಡಿಕೊಳ್ಳಲು ಬೇರೆಯೇ ಸಮಿತಿ ರಚನೆಯಾಗಬೇಕು ಎಂದು ಟ್ರಂಪ್ (Donald Trump) ಎಚ್ಚರಿಕೆ ಕೊಟ್ಟಿದ್ದರು. ಆ ಬೆನ್ನಲ್ಲೇ ಹಮಾಸ್ ಹಿರಿಯ ನಾಯಕರ ಗುರಿಯಾಗಿಸಿಕೊಂಡು ಇಸ್ರೇಲ್ ಸೇನೆ ದಾಳಿ ನಡೆಸಿದೆ. ಆದ್ರೆ ಇದೊಂದು ಹೇಡಿತನದ ದಾಳಿ ಎಂದು ಆಕ್ರೋಶ ಕತಾರ್ ಆಕ್ರೋಶ ವ್ಯಕ್ತಪಡಿಸಿದೆ. ಕದನ ವಿರಾಮ ಮತ್ತು ಯುದ್ಧ ಕೈದಿಗಳ ಕುರಿತು ಮಾತುಕತೆ ನಡೆಯುತ್ತಿದ್ದಾಗಲೇ ಇಸ್ರೇಲ್ ದಾಳಿ ನಡೆಸಿರುವುದನ್ನು ಹಮಾಸ್ ಗುಂಪು ಖಂಡಿಸಿದೆ.
ಇದು ಆಕ್ರಮಣಕಾರಿ ಸ್ವರೂಪದ ಅಪರಾಧ ಕೃತ್ಯ. ಒಪ್ಪಂದದ ಸಾಧ್ಯತೆಗಳನ್ನು ಹಾಳುಮಾಡುವ ಹಾಗೂ ನಿರಾಕರಿಸುವ ದೃಷ್ಟಿಕೋನವನ್ನು ತೋರಿಸುತ್ತದೆ. ಇದು ಘೋರ ಅಪರಾಧ, ಸ್ಪಷ್ಟ ಆಕ್ರಮಣ ಮಾತ್ರವಲ್ಲದೇ ಎಲ್ಲಾ ಅಂತಾರಾಷ್ಟ್ರೀಯ ನಿಯಮ ಮತ್ತು ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಪ್ಯಾಲೆಸ್ತೀನ್ ಗುಂಪು ಅಸಮಾಧಾನ ಹೊರಹಾಕಿದೆ. ಈ ದಾಳಿಯಲ್ಲಿ ಹಮಾಸ್ ನಾಯಕ ಖಲೀಲ್ ಅಲ್-ಹಯ್ಯನ ಪುತ್ರ, ಓರ್ವ ಸಹಾಯಕ ಸಿಬ್ಬಂದಿ, ಓರ್ವ ಭದ್ರತಾ ಅಧಿಕಾರಿ ಸೇರಿದಂತೆ ಕನಿಷ್ಠ 6 ಜನ ಸಾವನ್ನಪ್ಪಿದ್ದಾರೆ ಎಂದು ಗುಂಪು ದೃಢಪಡಿಸಿದೆ.
ಏನಾಗಿತ್ತು?
ಕತಾರ್ನ ರಾಜಧಾನಿ ದೋಹಾದಲ್ಲಿ ಮಂಗಳವಾರ ಇಸ್ರೇಲ್ ವಾಯು ದಾಳಿ ನಡೆಸಿತ್ತು. ಹಮಾಸ್ ಹಿರಿಯ ನಾಯಕರ ವಸತಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಇಸ್ರೇಲ್ ರಕ್ಷಣಾ ಪಡೆ (IDF) ಮತ್ತು ಇಸ್ರೇಲ್ ಭದ್ರತಾ ಸಂಸ್ಥೆ (ISA) ವಾಯು ದಾಳಿ ನಡೆಸಿತ್ತು. ಇದನ್ನೂ ಓದಿ: ನನ್ನ ಆತ್ಮೀಯ ಸ್ನೇಹಿತ ಮೋದಿ ಜೊತೆ ಮಾತನಾಡಲು ಎದುರು ನೋಡುತ್ತಿದ್ದೇನೆ: ಟ್ರಂಪ್
ಕದನ ವಿರಾಮ ಚರ್ಚೆ ವೇಳೆ ದಾಳಿ
ವರದಿಗಳ ಪ್ರಕಾರ, ಇಸ್ರೇಲ್ನ ದಾಳಿಯ ವೇಳೆ ಹಮಾಸ್ ನಾಯಕರು ದೋಹಾದಲ್ಲಿ ಕದನ ವಿರಾಮದ ಬಗ್ಗೆ ಚರ್ಚಿಸುತ್ತಿದ್ದರು. ಗಾಜಾ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕದನ ವಿರಾಮದ ಪ್ರಸ್ತಾಪದ ಬಗ್ಗೆ ಚರ್ಚಿಸುತ್ತಿದ್ದಾಗ ದೋಹಾದಲ್ಲಿ ಹಮಾಸ್ ನಿಯೋಗದ ಮೇಲೆ ದಾಳಿ ಮಾಡಲಾಗಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಸ್ಪೇನ್ನಲ್ಲಿ ಬೀಚ್ಗಳನ್ನು ಬಂದ್ ಮಾಡಿಸಿದ ನೀಲಿ ಡ್ರ್ಯಾಗನ್ – ಏನಿದರ ವಿಶೇಷ?
ಇಸ್ರೇಲ್ ಸೇನೆ ಹೇಳಿದ್ದೇನು?
ಇಸ್ರೇಲ್ ಸೇನೆಯು ಎಕ್ಸ್ನಲ್ಲಿ ಹಮಾಸ್ ನಾಯಕರ ಮೇಲೆ ವಾಯು ದಾಳಿ ನಡೆಸಿದ ಬಗ್ಗೆ ಸ್ಪಷ್ಟಪಡಿಸಿತ್ತು. ಸೂಕ್ತವಾದ ಮದ್ದುಗುಂಡುಗಳನ್ನು ಬಳಸಿ, ದೋಹಾದಲ್ಲಿರುವ ನಾಗರಿಕರಿಗೆ ಹಾನಿಯಾಗದಂತೆ ವಾಯು ದಾಳಿ ಮಾಡಲಾಗಿದೆ. ಇದಕ್ಕಾಗಿ ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದೆವು ಹಮಾಸ್ ನಾಯಕರ ವಿರುದ್ಧದ ಕಾರ್ಯಾಚರಣೆಗಳು ಮುಂದುವರಿಯುತ್ತವೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ನೇಪಾಳ ಧಗ ಧಗ – ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವಂತೆ ಸಿಎಂ ಸೂಚನೆ