– ಕಿಡಿಗೇಡಿಗಳಿಗೆ ಬಿಸಿ ಮುಟ್ಟಿಸಿದ ನ್ಯಾಯಾಧೀಶರು
ಬಳ್ಳಾರಿ: ಹಂಪಿ ಸ್ಮಾರಕ ಕೆಡವಿದ ಕಿಡಿಗೇಡಿಗಳಿಗೆ ನ್ಯಾಯಾಲಯ ಬಿಸಿ ಮುಟ್ಟಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ.
ಸ್ಮಾರಕಗಳನ್ನ ಕೆಡವಿದ ಆಯುಷ್ ಸಾಹು, ರಾಜಬಾಬು, ರಾಜ್ ಆರ್ಯನ್ ಮತ್ತು ರಾಜೇಶ್ ಚೌದರಿಯನ್ನ ಬಳ್ಳಾರಿ ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದರು. ಆದರೆ ಆರೋಪಿಗಳಿಗೆ ಜಾಮೀನು ಮಂಜೂರು ವೇಳೆ ಹೊಸಪೇಟೆಯ ಜೆಎಂಎಫ್ಸಿ ನ್ಯಾಯಾದೀಶೆ ಪೂಣಿರ್ಮಾ ಯಾಧವ ಅವರು ಮಹತ್ವದ ಆದೇಶ ನೀಡಿರುವುದು ವಿಶೇಷವಾಗಿದೆ. ಇದನ್ನೂ ಓದಿ: ಹಂಪಿ ಸ್ಮಾರಕ ಧ್ವಂಸ ಪ್ರಕರಣ – ಮೂವರು ಆರೋಪಿಗಳು ಅರೆಸ್ಟ್
ಸ್ಮಾರಕಗಳನ್ನ ಕೆಡವಿದ ಆರೋಪಿಗಳಿಗೆ ತಲಾ 70 ಸಾವಿರ ರೂಪಾಯಿ ದಂಡ ವಿಧಿಸಿದ್ದಲ್ಲದೇ, ಕೆಡವಿದ ಸ್ಮಾರಕಗಳನ್ನ ಆರೋಪಿಗಳೇ ಮರಳಿ ನಿಲ್ಲಿಸುವಂತೆ ಹೊಸಪೇಟೆಯ ಜೆಎಂಎಫ್ಸಿ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿರುವುದು ವಿಶೇಷವಾಗಿದೆ. ಅಷ್ಟೇ ಅಲ್ಲದೇ ಮರಳಿ ಸ್ಮಾರಕಗಳನ್ನ ನಿಲ್ಲಿಸಿದ ಬಗ್ಗೆ ಪ್ರಾಚ್ಯವಸ್ತು ಇಲಾಖೆ ಹಾಗೂ ಪೊಲೀಸರು ವರದಿ ನೀಡಿದ ನಂತರ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದು ವಿಶೇಷ ಪ್ರಕರಣವಾಗಿದೆ.
ಹಂಪಿಯ ವಿಷ್ಣು ದೇವಾಲಯದ ಹಿಂಭಾಗದ ಗಜಶಾಲೆಯ ಬಳಿಯ ಸಾಲು ಕಂಬಗಳನ್ನ ಕೆಡವಿ ಸ್ಮಾರಕಗಳನ್ನ ಕೆಡವಿದ ವಿಡಿಯೋ ಫೆಬ್ರವರಿ 1 ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆಯ ನಂತರ ಎಚ್ಚೆತ್ತುಕೊಂಡಿದ್ದ ಪ್ರಾಚ್ಯವಸ್ತು ಹಾಗೂ ಪುರಾತತ್ವ ಇಲಾಖೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿತ್ತು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv