Public TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos

Archives

  • October 2025
  • September 2025
  • August 2025
  • July 2025
  • June 2025
  • May 2025
  • April 2025
  • March 2025
  • February 2025
  • January 2025

Categories

  • 31 Districts
  • Advertisement
  • Astrology
  • Automobile
  • Ayodhya Ram Mandir
  • Ayodhya Updates
  • Bagalkot
  • BELAKU
  • Belgaum
  • Bellary
  • Bengaluru City
  • Bengaluru Rural
  • Bidar
  • Big Bulletin
  • Bollywood
  • Chamarajanagar
  • Chikkaballapur
  • Chikkamagaluru
  • Chitradurga
  • Cinema
  • Column
  • Corona
  • Court
  • Cricket
  • Crime
  • Dakshina Kannada
  • Davanagere
  • Delhi Election 2025
  • Dharwad
  • Dina Bhavishya
  • Districts
  • Education
  • Election News
  • Entertainment Videos
  • Explainer
  • Fashion
  • Featured
  • Food
  • Gadag
  • Hassan
  • Haveri
  • Health
  • Kalaburagi
  • Karnataka
  • Karnataka Budget 2022
  • Karnataka Budget 2023
  • Karnataka Budget 2024
  • Karnataka Election
  • Karnataka Election 2023
  • Kodagu
  • Kolar
  • Koppal
  • Latest
  • Main Post
  • Mandya
  • Monsoon
  • Most Shared
  • Mysuru
  • National
  • National
  • News Videos
  • Non Veg
  • Other Sports
  • Out of the box
  • Photos
  • Political News
  • Public Hero
  • Raichur
  • Ramanagara
  • Rameshwaram Cafe
  • Sandalwood
  • Shivamogga
  • Smartphones
  • South cinema
  • Special
  • Sports
  • States
  • Stories
  • Tech
  • Telangana
  • Telecom
  • Top Stories
  • Travel
  • Tumakuru
  • TV Shows
  • Udupi
  • Uncategorized
  • Uttara Kannada
  • Veg
  • Videos
  • Vijayapura
  • World
  • Yadgir
  • ಆತ್ಮಹತ್ಯೆ
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Bellary

ಐತಿಹಾಸಿಕ ಹಂಪಿ ಉತ್ಸವಕ್ಕೆ ತೆರೆ – ಸಾಂಸ್ಕೃತಿಕ ವೈಭವಕ್ಕೆ ಮನಸೋತ ಜನ

Public TV
Last updated: March 3, 2025 7:52 am
Public TV
Share
4 Min Read
Hampi Utsav 2025
SHARE

ಬಳ್ಳಾರಿ: ಫೆ.28 ರಿಂದ ಮಾ.2ರವರೆಗೆ ಮೂರು ದಿನಗಳ‌‌ ಕಾಲ ಅಪಾರ ಜನಸಾಗರದ ನಡುವೆ ಜರುಗಿದ ವಿಜಯನಗರದ (Vijayanagara) ಗತವೈಭವ ಸಾರುವ ಐತಿಹಾಸಿಕ ಹಂಪಿ ಉತ್ಸವಕ್ಕೆ ಭಾನುವಾರ ವಿದ್ಯುಕ್ತ ತೆರೆ ಬಿದ್ದಿದೆ. ಹಂಪಿ ಉತ್ಸವವನ್ನು ಜನೋತ್ಸವವಾಗಿಸುವಲ್ಲಿ ವಿಜಯನಗರ ಜಿಲ್ಲಾಡಳಿತ ಸಾಫಲ್ಯ ಕಂಡಿದೆ. ಬಿರುಬಿಸಿಲು ಲೆಕ್ಕಿಸದೇ ಲಕ್ಷಾಂತರ ಸಂಖ್ಯೆಯ ಜನ ಉತ್ಸವಕ್ಕೆ ಹರಿದು ಬಂದಿದ್ದರು.

ವಿಜಯನಗರ ಶಾಸಕ ಹೆಚ್.ಆರ್.ಗವಿಯಪ್ಪ ನೇತೃತ್ವದಲ್ಲಿ ಜನವರಿ ಇಂದಲೇ ಉತ್ಸವದ ಸಿದ್ಧತೆಯನ್ನು ಜಿಲ್ಲಾಡಳಿತ ಆರಂಭಿಸಿತ್ತು. ಉತ್ಸವದ ಯಶಸ್ವಿ ಆಯೋಜನೆಗಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಸ್ವಾಗತ, ಶಿಷ್ಠಾಚಾರ, ಕಲಾವಿದರ ಆಯ್ಕೆ, ಸಾರಿಗೆ, ವಸತಿ, ಆಹಾರ, ಪ್ರಚಾರ, ಜಾಹೀರಾತು ಮತ್ತು ಮಾಧ್ಯಮ ಸಮನ್ವಯ, ಹಣಕಾಸು, ವೇದಿಕೆ, ಕುಡಿಯುವ ನೀರು, ಆರೋಗ್ಯ ಮತ್ತು ನೈರ್ಮಲೀಕರಣ, ವಸ್ತು, ಕೃಷಿ, ಫಲಪುಷ್ಪ ಪ್ರದರ್ಶನ, ಕಾನೂನು ಸುವ್ಯವಸ್ಥೆ, ಕ್ರೀಡೆ, ವಿಚಾರ ಸಂಕಿರಣ, ಕವಿಗೋಷ್ಠಿ, ಎತ್ತು, ಕುರಿ, ಶ್ವಾನ ಸ್ಪರ್ಧೆ, ತುಂಗಾರತಿ, ವಸಂತ ವೈಭವ, ಜಾನಪದ ವಾಹಿನಿ, ಹಂಪಿ ಬೈಸ್ಕೈ (ಆಗಸದಿಂದ ಹಂಪಿ) ಅಗ್ನಿಶಾಮಕ ವ್ಯವಸ್ಥೆ ಸೇರಿದಂತೆ 20ಕ್ಕೂ ಹೆಚ್ಚು ವಿವಿಧ ಸಮಿತಿಗಳನ್ನು ರಚಿಸಲಾಗಿತ್ತು. ಮುಂಜಾಗೃತವಾಗಿ ಅಗತ್ಯ ಪೂರ್ವ ತಯಾರಿ, ಸಂಪನ್ಮೂಲ ಹಾಗೂ ಸಿಬ್ಬಂದಿ ಕ್ರೂಢೀಕರಣ ಮಾಡಿಕೊಂಡು ಉತ್ಸವದ ಆಯೋಜನೆಗೆ ಅಣಿಯಾಗಿತ್ತು. ಉತ್ಸವದ ಆಯೋಜನೆಯ ನಡುವೆಯೇ ಜಿಲ್ಲಾಡಳಿತಕ್ಕೆ ಮೈಲಾರ, ಕೊಟ್ಟೂರು, ಕುರುವತ್ತಿಯಂತಹ ಜಾತ್ರಾ ಮಹೋತ್ಸವ, ಗುಡೇಕೋಟೆ ಉತ್ಸವಗಳನ್ನು ಆಯೋಜಿಸಿ ಯಶಸ್ವಿಯಾಗಿ ಪೂರ್ಣಗೊಳಿಸುವ ಒತ್ತಡವಿತ್ತು. ತಿಂಗಳ ಕಾಲ ಅಧಿಕಾರಿಗಳು ಹಗಲಿರುಳು ದಣಿವರೆಯದೇ ದುಡಿದಿದ್ದಾರೆ.

Hampi Utsav 2025 1

ನೀರು ಹಾಯಿಸಿ ಧೂಳಿಗೆ ಮುಕ್ತಿ
ಪ್ರತಿ ಬಾರಿ ಉತ್ಸವದಲ್ಲಿಯೂ ಭಾರೀ ಸಂಖ್ಯೆಯಲ್ಲಿ ವಾಹನಗಳು ಜನರು ಓಡಾಟ ಮಾಡುವುದರಿಂದ ಧೂಳು ಎದ್ದು ಜನರಿಗೆ ಕಿರಿಕಿರಿ ಉಂಟಾಗುತ್ತಿತ್ತು. ಈ ಬಾರಿ ಜಿಲ್ಲಾಡಳಿತದಿಂದ ಮುಂಚಿತವಾಗಿಯೇ ಈ ಸಮಸ್ಯೆಗೆ ಪರಿಹಾರ ಹುಡುಕಲಾಯಿತು. ಮಾತಂಗ ಪರ್ವತ ಬಯಲಿನಲ್ಲಿ ನೆಲಕ್ಕೆ ಹಾಸಿಗೆ ಹೊದಿಸಿ ನೀರು ಹಾಯಿಸಲಾಯಿತು. ಹೊಸಪೇಟೆ ನಗರದಿಂದ ಹಂಪಿಯವರೆಗೆ ಪ್ರತಿನಿತ್ಯವೂ 5 ಟ್ಯಾಂಕರ್ ಮೂಲಕ ಪ್ರತಿ ಗಂಟೆಗೊಮ್ಮೆ ನೀರು ಹಾಯಿಸಲಾಗುತ್ತಿತ್ತು. ಇದರಿಂದಾಗಿ ಧೂಳಿನಿಂದ ಮುಕ್ತಿ ದೊರಕಿತು.

ನೀರು ನೆರಳಿನ ವ್ಯವಸ್ಥೆ
ನವೆಂಬರ್‌ನ ಚಳಿಗಾಲದ ಬದಲಾಗಿ ಮಾರ್ಚ್ ತಿಂಗಳ ಬಿರುಬೇಸಿಗೆಯಲ್ಲಿ ಹಂಪಿ ಉತ್ಸವ ಆಯೋಜಿಸಿದ್ದರಿಂದ ಜಿಲ್ಲಾಡಳಿತ ನೀರು ನೆರಳಿನ ವ್ಯವಸ್ಥೆಗೆ ಹೆಚ್ಚಿನ ಮಹತ್ವ ನೀಡಿತ್ತು. ಸ್ವತಃ ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಅವರು ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ, ಕುಡಿಯುವ ನೀರಿಗೆ ವ್ಯವಸ್ಥೆ ಮಾಡಿದ್ದರು. ರೂ.10 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿನ ಸರಬರಾಜಿಗಾಗಿ ಹೊಸದಾಗಿ ಪೈಪ್ ಲೈನ್ ನಿರ್ಮಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಖರೀದಿಸಿದ್ದ 250 ಕುಡಿಯುವ ನೀರಿನ ಕ್ಯಾನ್‌ಗಳನ್ನು 30 ಸ್ಥಳಗಳಲ್ಲಿ ಇರಿಸಿ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದರ ಜೊತೆಗೆ ಶಾಸಕ ಹೆಚ್.ಆರ್.ಗವಿಯಪ್ಪನವರು ಕೃಷ್ಣ ಮಂದಿರದ ಎದುರಿನ ಕೃಷ್ಣ ಬಜಾರಿನ ಬಳಿ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಕಲ್ಪಿಸಿದ್ದರು.

Hampi Utsav 2025 2

ಉತ್ತಮ ಆರೋಗ್ಯ ಸೇವೆ, ಸಾರಿಗೆ ನಿಯಂತ್ರಣ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಂಪಿ ಉತ್ಸವದಲ್ಲಿ 9 ತಾತ್ಕಾಲಿಕ ಚಿಕಿತ್ಸಾ ಕೇಂದ್ರ, 3 ಸಂಚಾರಿ ಆರೋಗ್ಯ ಘಟಕ, 13 ಆಂಬ್ಯುಲೆನ್ಸ್, 42 ತಜ್ಞ ವೈದ್ಯರು, 78 ಶುಶ್ರೂಷಕಿಯರು ಸೇರಿ 300ಕ್ಕೂ ಹೆಚ್ಚು ಆರೋಗ್ಯ ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ. ತಾತ್ಕಾಲಿಕ ಆರೋಗ್ಯ ಕೇಂದ್ರಗಳಲ್ಲಿ 5000ಕ್ಕೂ ಅಧಿಕ ಜನರು ಚಿಕಿತ್ಸೆ ಪಡೆದಿದ್ದಾರೆ. ಉತ್ಸವದ ಮೂರು ದಿನ ಜನರು ಹಂಪಿಗೆ ಆಗಮಿಸಲು ಹೊಸಪೇಟೆಯಿಂದ 30 ಹಾಗೂ ಕಂಪ್ಲಿ ಪಟ್ಟಣದಿಂದ 10 ಸಾರಿಗೆ ಬಸ್‌ಗಳನ್ನು ನಿಯೋಜಿಸಲಾತ್ತು. ಬಸ್‌ಗಳು ಕಾರ್ಯಾಚರಣೆ ನಡೆಸಿ ಜನರನ್ನು ಉತ್ಸವಕ್ಕೆ ಕರೆ ತಂದವು. ಮೊದಲ ದಿನ ಜಿಲ್ಲೆಯ ಎಲ್ಲ ಗ್ರಾಮಗಳಿಂದ 198 ಉಚಿತ ಬಸ್ ಸಾರಿಗೆ ಕಲ್ಪಿಸಲಾಗಿತ್ತು. ಸಂಚಾರಿ ಪೊಲೀಸರು ಕಡ್ಡಿರಾಂಪುರ ಹಾಗೂ ಕಮಲಾಪುರ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಣ ಮಾಡಿದರು. ಪ್ರಧಾನ ವೇದಿಕೆ ಬಳಿ 100 ಎಕರೆ ಜಾಗದಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿತ್ತು.

ಸೂಕ್ತ ಪೊಲೀಸ್ ಬಂದೋಬಸ್ತ್
ಹಂಪಿ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಇಲಾಖೆ ಸೂಕ್ತ ಬಂದೋಬಸ್ತ್ ವ್ಯವಸ್ಥೆಗೆ ಕ್ರಮವಹಿಸಲಾಗಿತ್ತು. ಹೊಸಪೇಟೆ ಮತ್ತು ಹಂಪಿಯಲ್ಲಿ 500 ಸಿಸಿ ಕ್ಯಾಮರಾಗಳನ್ನು ಅಳವಡಿಸಿ ಕಣ್ಗಾವಲು ಇರಿಸಲಾಗಿತ್ತು. ಕೊಪ್ಪಳ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ರಾಯಚೂರು ಸೇರಿದಂತೆ ಇತರೆ ಜಿಲ್ಲೆಗಳಿಂದ ಆಗಮಿಸಿದ 1250 ಕ್ಕೂ ಅಧಿಕ ಪೊಲೀಸ್ ಹಾಗೂ 500 ಗೃಹರಕ್ಷಕ ದಳ ಸಿಬ್ಬಂದಿ ಕಾರ್ಯನಿರ್ವಹಿಸಿದರು. 4 ಎ.ಎಸ್.ಸಿ, 4 ಕೆ.ಎಸ್.ಆರ್.ಪಿ, 5 ಡಿ.ಎ.ಆರ್ ತುಕಡಿಗಳನ್ನು ನಿಯೋಜಿಸಲಾಗಿತ್ತು. ಒರ್ವ ಎಸ್.ಪಿ, 4 ಎ.ಎಸ್.ಪಿ, 9 ಡಿ.ಎಸ್.ಪಿ, 36 ಸಿಪಿಐ, 79 ಪಿ.ಎಸ್.ಐ, 183 ಎ.ಎಸ್.ಐ ಸ್ಥಳದಲ್ಲೇ ಬೀಡು ಬಿಟ್ಟು ಬಂದೋಬಸ್ತ್ ಕಾರ್ಯ ನಿರ್ವಹಿಸಿದ್ದಾರೆ. ಪೊಲೀಸ್ ಇಲಾಖೆಯಿಂದ ತಾತ್ಕಾಲಿಕ ಪೊಲೀಸ್ ಠಾಣೆ ಹಾಗೂ ಸಾರ್ವಜನಿಕ ಮಾಹಿತಿ ಕೇಂದ್ರಗಳನ್ನು ತೆರೆದು, ಧ್ವನಿವರ್ಧಕದ ಮೂಲಕ ಅಗತ್ಯ ಜಾಗೃತಿ ಸೂಚನೆಗಳನ್ನು ಜನರಿಗೆ ನೀಡಲಾಗುತ್ತಿತ್ತು.

ಇನ್ನೂ ಉತ್ಸವದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಪ್ರತಿ ವೇದಿಕೆ, ತಾತ್ಕಾಲಿಕ ಬಸ್ ನಿಲ್ದಾಣ, ವಸ್ತುಪ್ರದರ್ಶನ ಸ್ಥಳದಲ್ಲಿ ಸಂಚಾರಿ ಶೌಚಾಲಯಗಳನ್ನು ಇರಿಸಲಾಗಿತ್ತು. ಉತ್ಸವದಲ್ಲಿ ಸ್ವಚ್ಚತೆಗಾಗಿಯೇ 400ಕ್ಕೂ ಹೆಚ್ಚು ಪೌರಕಾರ್ಮಿಕರನ್ನು ನಿಯೋಜಿಸಲಾಗಿತ್ತು. ಹೊಸಪೇಟೆ ನಗರ ಸಭೆ ಸೇರಿದಂತೆ ಕಮಲಾಪುರ, ಮರಿಯಮ್ಮನಹಳ್ಳಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೂಡ್ಲಿಗಿ ಸ್ಥಳೀಯ ಸಂಸ್ಥೆಗಳಿಂದ ಸ್ವಚ್ಚತಾ ಸೇನಾನಿಗಳು ನಿತ್ಯ ಸ್ವಚ್ಛತೆಗಾಗಿ ಶ್ರಮಿಸಿದರು. ಉತ್ಸವ ಮೂರು ದಿನಗಳ ಕಾಲ ಹಂಪಿ ಗ್ರಾಮ ಹಾಗೂ ವೇದಿಕೆ ಬಳಿ ಹೊಸಪೇಟೆ ನಗರಸಭೆ ವತಿಯಿಂದ ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ಮಾಡಲಾಗಿತ್ತು. ಒಟ್ಟಾರೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮನಃಪೂರ್ವಕವಾಗಿ ಉತ್ಸವದ ಯಶಸ್ವಿಗೆ ಕರ್ತವ್ಯ ನಿರ್ವಹಿಸಿದರು. 2025ರ ಹಂಪಿ ಉತ್ಸವ ಜನೋತ್ಸವವಾಗಿ ಯಶಸ್ವಿಯಾಗಿ ಸಂಪನ್ನಗೊಂಡಿದೆ.

TAGGED:BallariHampi Utsav 2025vijayanagara
Share This Article
Facebook Whatsapp Whatsapp Telegram

Cinema news

Bhageera Movie
ಒಂದು ವರ್ಷದ ಸಂಭ್ರಮದಲ್ಲಿ ಬಘೀರ
Cinema Latest Sandalwood Top Stories
Shilpa Shetty
ಶಿಲ್ಪಾ ಶೆಟ್ಟಿ ತಾಯಿ ದಿಢೀರ್ ಆಸ್ಪತ್ರೆಗೆ ದಾಖಲು – ಅಂಥದ್ದೇನಾಯ್ತು?
Cinema Bollywood Latest Top Stories
Love and war 1
ಟಾಕ್ಸಿಕ್ ಕಾರಣದಿಂದ ಬನ್ಸಾಲಿ ನಿರ್ದೇಶನದ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ
Cinema Bollywood Latest Top Stories
Rishab Shetty Kantara Chapter 1 Rukmini Vasanth
ಕಾಂತಾರ ಹೊಸ ದಾಖಲೆ – ಕರ್ನಾಟಕದಲ್ಲೇ 250 ಕೋಟಿ ಗಡಿ ದಾಟಿದ ಕಲೆಕ್ಷನ್‌!
Cinema Latest Sandalwood Top Stories

You Might Also Like

DK Shivakumar 5
Bengaluru City

ಸೋನಿಯಾ ಗಾಂಧಿ‌ ಹುದ್ದೆಯನ್ನೇ ಬಿಟ್ಟುಕೊಟ್ಟರು – ನವೆಂಬರ್‌ ಕ್ರಾಂತಿ ಹೊತ್ತಲ್ಲೇ ಡಿಕೆಶಿ ತ್ಯಾಗದ ಮಾತು

Public TV
By Public TV
33 minutes ago
siddaramaiah basava metro
Districts

ರಾಜ್ಯದ ವಿಶ್ವವಿದ್ಯಾಲಯಗಳಿಗೆ ಬಸವಣ್ಣ, ನಾಲ್ವಡಿ, ದೇವರಾಜ ಅರಸು ಹೆಸರಿಡಲು ಸರ್ಕಾರ ಚಿಂತನೆ

Public TV
By Public TV
1 hour ago
Hindu activist suhas shetty brutally murdered in Bajpe Mangaluru
Districts

ರೌಡಿಶೀಟರ್‌ ಸುಹಾಸ್ ಶೆಟ್ಟಿ ಹತ್ಯೆ ಕೇಸ್; 11 ಆರೋಪಿಗಳ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್‌

Public TV
By Public TV
1 hour ago
Priyank Kharge
Kalaburagi

ಆರ್‌ಎಸ್‌ಎಸ್‌ನವರು ಬಡ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Public TV
By Public TV
3 hours ago
DK Shivakumar 11
Bengaluru City

`ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ’ – ಶಾಸಕನ ಮಗನಿಗೆ ತನ್ನದೇ ಹೆಸರಿಟ್ಟು ನಾಮಕರಣ ನೆರವೇರಿಸಿದ ಡಿಕೆಶಿ

Public TV
By Public TV
3 hours ago
Mandya Madrasa
Mandya

ಶ್ರೀರಂಗಪಟ್ಟಣದ ಪುರಾತತ್ವ ಇಲಾಖೆಯ ಜಾಮೀಯಾ ಮಸೀದಿಯಲ್ಲಿ ಮದರಸ; ಕ್ರಮಕ್ಕೆ ಬಜರಂಗದಳ ಆಗ್ರಹ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
Welcome Back!

Sign in to your account

Username or Email Address
Password

Lost your password?