ಹಂಸಲೇಖಾ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆದ ಕೃಷ್ಣರಾಜ್

Public TV
1 Min Read
hamsalekha director

ಬೆಂಗಳೂರು: ಸ್ಯಾಂಡಲ್‍ವುಡ್ ಖ್ಯಾತ ಸಂಗೀತಾ ನಿರ್ದೇಶಕ ಹಂಸಲೇಖಾ ವಿರುದ್ಧ ದಾಖಲಿಸಿದ್ದ ದೂರನ್ನು ಕೃಷ್ಣರಾಜ್ ಅವರು ಹಿಂಪಡೆದುಕೊಂಡಿದ್ದಾರೆ.

HAMSA PEJAWARA

ಇತ್ತೀಚೆಗಷ್ಟೇ ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಹಂಸಲೇಖ ಅವರು, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ.? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ. ಲಿವರ್ ಕೊಟ್ರೆ ತಿಂತಾರಾ? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂದು ಹೇಳಿದ್ದರು

ಹೀಗಾಗಿ ಪೇಜಾವರ ಶ್ರೀಗಳ ವಿರುದ್ಧ ಹಂಸಲೇಖ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಕೃಷ್ಣರಾಜ್ ಅವರು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೀಗ ಬ್ರಾಹ್ಮಣ ಸಂಘದ ದೂರಿಗೆ ನಾನು ಬೆಂಬಲಿಸ್ತೇನೆ ಅದಕ್ಕಾಗಿ ತನ್ನ ದೂರನ್ನು ಹಿಂಪಡೆಯುವುದಾಗಿ ಸಮಜಾಯಿಷಿ ನೀಡಿ ದೂರನ್ನು ಹಿಂಪಡೆದಿದ್ದಾರೆ. ಇದನ್ನೂ ಓದಿ:  ದಲಿತರು ಕೋಳಿ ಕೊಟ್ಟರೆ ತಿನ್ನುತ್ತಾರಾ?: ಕ್ಷಮೆ ಕೇಳಿದ ಹಂಸಲೇಖ

Share This Article