Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ವಿಜೃಂಭಣೆಯಿಂದ ನಡೆದ ಹನುಮ ಮಾಲಾ ಜಯಂತಿ- ಅಂಜನಾದ್ರಿ ಬೆಟ್ಟವೇರಿದ ಸಾವಿರಾರು ಭಕ್ತರು

Public TV
Last updated: December 2, 2017 7:02 pm
Public TV
Share
2 Min Read
KPL FF
SHARE

ಕೊಪ್ಪಳ: ಹನುಮ ಜನಿಸಿದ ನಾಡು ಕೊಪ್ಪಳದಲ್ಲಿ ಪ್ರತಿ ವರ್ಷದಂತೆ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗಿದೆ.

ಪ್ರತಿ ವರ್ಷ ಹನುಮ ಜಯಂತಿಯಂದು ಭಕ್ತರು ಹನುಮಮಾಲಾ ವಿಸರ್ಜನೆ ಕಾರ್ಯಕ್ರಮವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸ್ತಾರೆ. ವ್ರತ ಕೈಗೊಂಡ ಭಕ್ತರು ಇಲ್ಲಿಗೆ ಬಂದು ಹನುಮ ಮಾಲೆಯನ್ನು ವಿಸರ್ಜನೆ ಮಾಡ್ತಾರೆ. ಅಂಜನಾದ್ರಿ ಬೆಟ್ಟದಲ್ಲಿ ಬೆಳಗ್ಗೆ ಎರಡು ಗಂಟೆಯಿಂದಲೇ ನಿರ್ಮಲ ಸೇವೆ, ಅಲಂಕಾರ, ಸಹಸ್ರನಾಮಾವಳಿ ಪಠಣ, ಹನುಮಸ್ತೋತ್ರ ಪಠಣದಂತ ಧಾರ್ಮಿಕ ಕಾರ್ಯಕ್ರಮ ನಡೆಯುತ್ತವೆ.

kpl 12

ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರ ಪೈಕಿ ಕೆಲವರು ರಾತ್ರಿಯೇ ಬೆಟ್ಟಕ್ಕೆ ಆಗಮಿಸಿದ್ದರು. ಮತ್ತಷ್ಟು ಭಕ್ತರು ಬೆಳಗ್ಗೆ ಎರಡು ಗಂಟೆಯಿಂದಲೇ ಗಂಗಾವತಿ ನಗರದಿಂದ ಪಾದಯಾತ್ರೆ ನಡೆಸಿ ಬೆಟ್ಟವೇರಿದರು. ರಾಜ್ಯದ ಜಿಲ್ಲೆಗಳಾದ ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಳ್ಳಾರಿ, ರಾಯಚೂರು, ಬೀದರ್, ಗುಲ್ಬರ್ಗ, ಯಾದಗಿರಿ, ಬಾಗಲಕೋಟೆ, ವಿಜಯಪುರದಿಂದ ಅಂದಾಜು 25 ಸಾವಿರಕ್ಕೂ ಹೆಚ್ಚು ಭಕ್ತರು 575 ಮೆಟ್ಟಿಲು ಹೊಂದಿರುವ ಅಂಜನಾದ್ರಿ ಬೆಟ್ಟವೇರಿ ಆಂಜನೇಯನ ದರ್ಶನ ಪಡೆದರು.

ಕಳೆದ ಬಾರಿ ಇದೇ ಸಂದರ್ಭದಲ್ಲಿ ಹಿಂದೂ ಮತ್ತು ಮುಸ್ಲಿಂ ನಡುವೆ ಗಲಭೆಯಾಗಿ ಗಂಗಾವತಿಯಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗಿತ್ತು. ಸತತ 1 ವಾರಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿತ್ತು. ಇದರಿಂದ ಮುನ್ನೆಚ್ಚರಿಕೆಯಾಗಿ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಮಾಡಿತ್ತು. ಇದರಿಂದ ಈ ಬಾರಿ ಹನುಮ ಮಾಲಾಧಾರಿಗಳು ಮೆರವಣಿಗೆ ಮಾಡುವ ಸಂಭ್ರಮಕ್ಕೆ ಪೊಲೀಸರು ಕೊಕ್ಕೆ ಹಾಕಿದ್ದು ಭಕ್ತರ ಆಕ್ರೋಶಕ್ಕೆ ಕಾರಣವಾಯಿತು.

kpl 15

ಈದ್ ಮಿಲಾದ್ ಹಬ್ಬವು ಇದೇ ಸಮಯದಲ್ಲಿ ಇರುವುದರಿಂದ ಯಾವುದೇ ರೀತಿ ಕೋಮು ಗಲಭೆ ಆಗದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ ಕಳೆದ 3 ದಿನದಿಂದ ಗಂಗಾವತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು. 733 ಪೊಲೀಸರನ್ನು ಗಂಗಾವತಿ ನಗರದಾದ್ಯಂತ ಬಂದೋಬಸ್ಟ್ ಗಾಗಿ ನಿಯೋಜನೆ ಮಾಡಲಾಗಿತ್ತು.

ಇನ್ನು ಗಂಗಾವತಿ ನಗರದ ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಹಾಗೂ ಕಿಡಿಗೇಡಿಗಳ ಮೇಲೆ ಹದ್ದಿನ ಕಣ್ಣು ಇರಿಸಲು ಡ್ರೋಣ್ ಕ್ಯಾಮೆರಾ ಅಳವಡಿಕೆ ಮಾಡಲಾಗಿತ್ತು. ಇದರಿಂದ ಯಾವುದೇ ಅಹಿತಕರ ಘಟನೆ ನಡೆಯದೆ ಎರಡು ಹಬ್ಬಗಳು ಶಾಂತಿಯುತವಾಗಿ ನಡೆದವು.

ಈ ವೇಳೆ ಗಂಗಾವತಿ ನಗರವನ್ನ ಪ್ರವೇಶಿಸದಂತೆ ವಾಹನಗಳಿಗೆ ರೂಟ್ ಮ್ಯಾಪ್ ಮಾಡಲಾಗಿತ್ತು. ಇದರಿಂದ ನಗರ ಪ್ರವೇಶ ಮಾಡುವ ವಾಹನಗಳನ್ನ ತೀವ್ರ ತಪಾಸಣೆ ಮಾಡಲಾಗ್ತಿತ್ತು. ಹನುಮ ಮಾಲಾಧಾರಿಗಳ ವಾಹನದಾರರು ನಾವೇನು ಪಾಕಿಸ್ತಾನ ದಿಂದ ಬಂದಿದ್ದೇವಾ ಅಂತ ಆಕ್ರೋಶ ವ್ಯಕ್ತಪಡಿಸಿದರು.

ಗಂಗಾವತಿ ಯಲ್ಲಿ ಕೊಪ್ಪಳ ಎಸ್ಪಿ ಅನೂಪ್ ಶೆಟ್ಟಿ ನೇತೃತ್ವದಲ್ಲಿ ವಹಿಸಿದ್ದ ಬಿಗಿ ಪೊಲೀಸ್ ವ್ಯವಸ್ಥೆಯಿಂದ ಹನುಮ ಜಯಂತಿ ಶಾಂತಿಯುತವಾಗಿ ನಡೆದಿದೆ. ಎಸ್‍ಪಿ ಮುಂಜಾಗ್ರತಾ ಕ್ರಮಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದರೆ ಮತ್ತೆ ಕೆಲವರು ಮೆರವಣಿಗೆಗೆ ಅವಕಾಶ ಕೊಡಬೇಕಿತ್ತು ಎಂದು ಅಪಸ್ವರ ಎತ್ತಿದ್ದಾರೆ. ಗಂಗಾವತಿಯಲ್ಲಿ ಈ ಬಾರಿ ಈದ್ ಮಿಲಾದ್ ಹಾಗೂ ಹನುಮಮಾಲಾ ಜಯಂತಿ ಶಾಂತಿಯುವಾಗಿ ನಡೆದಿರೋದು ಮಾತ್ರ ಎಲ್ಲರಲ್ಲಿ ಹರ್ಷ ತಂದಿದೆ.

kpl 11

kpl 9

kpl 8

kpl 3

TAGGED:Hanuma JayantiKoppalpolicePublic TVsecurityಕೊಪ್ಪಳಪಬ್ಲಿಕ್ ಟಿವಿಪೊಲೀಸ್ಭದ್ರತೆಹನುಮ ಜಯಂತಿ
Share This Article
Facebook Whatsapp Whatsapp Telegram

You Might Also Like

Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
26 minutes ago
Mallikarjun Kharge
Latest

ವಿಮಾನ ದುರಂತ ಸ್ಥಳಕ್ಕೆ ಭೇಟಿ – ಗಾಯಾಳುಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ ಮಲ್ಲಿಕಾರ್ಜುನ ಖರ್ಗೆ

Public TV
By Public TV
27 minutes ago
Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
1 hour ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
1 hour ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
1 hour ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?