ಕಲಬುರಗಿ: ವಿಶ್ವ ಹಿಂದೂ ಪರಿಷತ್ (Vishwa Hindu Parishad) ಬಜರಂಗದಳ (Bhajarangdal) ಕರ್ನಾಟಕ ಉತ್ತರ ಕರ್ನಾಟಕದ ವತಿಯಿಂದ ಶ್ರೀ ಹನುಮ ಮಾಲಾ ಕಾರ್ಯಕ್ರಮದ ನಿಮಿತ್ತ ಕಲಬುರಗಿ ಜಿಲ್ಲೆಯಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕಿಷ್ಕಿಂದ ಆನೆಗುಂದಿ ಅಂಜನಾದ್ರಿ ಪರ್ವತಕ್ಕೆ ನೂರಾರು ಹನುಮ ಮಾಲಾಧಾರಿಗಳು ಪ್ರಯಾಣ ಬೆಳೆಸಿದರು.
- Advertisement 2
ನಗರದ ನೆಹರೂ ಗಂಜ್ ಪ್ರದೇಶದ ಹನುಮಾನ್ ಮಂದಿರದಲ್ಲಿ ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ನಸುಕಿನ ಜಾವ ಹನುಮಂತನಿಗೆ ರುದ್ರಾಭಿಷೇಕ, ಹೋಮ ಹವನ, ನವಗ್ರಹ ಪೂಜೆಯ ನಂತರ 450 ಜನ ಹನುಮ ಮಾಲಾಧಾರಿಗಳಿಗೆ ಮಾಲಾಧಾರಣೆ ಮಾಡಲಾಯಿತು. ಇದನ್ನೂ ಓದಿ: ಸಿದ್ದರಾಮಯ್ಯ ಹೆಸರು ದೇವರ ಹೆಸರಿನಿಂದ ಬಂದಿದೆ, ಟೀಕಿಸಿದ್ರೆ ಹುಷಾರ್: ಎಂ.ಬಿ ಪಾಟೀಲ್
- Advertisement 3
- Advertisement 4
ಕಲಬುರಗಿ ನಗರದ ನೆಹರೂ ಗಂಜ್ ಪ್ರದೇಶದಿಂದ 11 ರಾಜಹಂಸ ಡಿಲಕ್ಸ್ ಬಸ್ ಗಳಿಗೆ ಚಂದು ಪಾಟೀಲ್ ಚಾಲನೆ ನೀಡುವ ಮುಖಾಂತರ ಮಾಲಾಧಾರಣೆ ಮಾಡಿದ ಮಾಲಾಧಾರಿಗಳ ಪ್ರಯಾಣ ಕೊಪ್ಪಳಕ್ಕೆ ಪ್ರಯಾಣ ಬೆಳೆಸಿತು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ವಿಭಾಗದ ಕಾರ್ಯದರ್ಶಿ ಶಿವರಾಜ್ ಸಂಗೋಳಗಿ, ಜಿಲ್ಲಾ ಅಧ್ಯಕ್ಷ ರಾಜು ನವಲದಿ, ಪ್ರಶಾಂತ್ ಗುಡ್ಡಾ, ಅಶ್ವಿನ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮಾಲಾಧಾರಿಗಳು ಕಲಬುರಗಿಯಿಂದ ಕೊಪ್ಪಳದ ಗವಿ ಸಿದ್ದೇಶ್ವರ ಸಂಸ್ಥಾನಕ್ಕೆ ತೆರಳಿ, ವಿಶ್ರಾಂತಿ ಪಡೆದು ಬೆಳಗ್ಗೆ ಪೂಜೆಯ ನಂತರ ಕಿಷ್ಕಿಂದ ಅಂಜನಾದ್ರಿ ಬೆಟ್ಟಕ್ಕೆ ಪ್ರಯಾಣ ಬೆಳಸಲಿದೆ. ಇದನ್ನೂ ಓದಿ: ರೌಡಿಗಳನ್ನು ರೌಡಿಗಳೆನ್ನಬೇಡಿ – ಇದು ಮಾಜಿ ರೌಡಿ ಶೀಟರ್ ಸಿ.ಟಿ ರವಿ ಫಾರ್ಮಾನು: ಕಾಂಗ್ರೆಸ್ ಲೇವಡಿ