ನವದೆಹಲಿ: ಶಾಲೆಗೆ ಹೋಗುವಾಗ ವಿವಾಹಿತ ವ್ಯಕ್ತಿಯೊಬ್ಬ ಕಿರುಕುಳ ನೀಡಿದ್ದರಿಂದ ಮನನೊಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದೆಹಲಿಯ ಸುಲ್ತಾನ್ಪುರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಳು. ಸೆಪ್ಟೆಂಬರ್ 19ರಂದು ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಬಾಲಕಿಯ ಪೋಷಕರು ಶನಿವಾರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- Advertisement 2
ನಡೆದದ್ದು ಏನು?
ಬಾಲಕಿ ಶಾಲೆ ಹಾಗೂ ಟ್ಯೂಷನ್ಗೆ ಹೋಗುವಾಗ ಸ್ಥಳೀಯ ವಿವಾಹಿತ ವ್ಯಕ್ತಿಯೊಬ್ಬ ಆಕೆಗೆ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಬಾಲಕಿಯ ಜೊತೆಗೆ ಶಾಲೆಗೆ ಹೋಗಲು ನಿರಾಕರಿಸುತ್ತಿದ್ದ ಆಕೆಯ ಸಹೋದರರನ್ನು ಥಳಿಸಿದ್ದ. ಮದುವೆ ಆಗುತ್ತೇನೆ ಅಂತ ಪ್ರಸ್ತಾಪ ಮಾಡಿದ್ದನು. ಈ ಎಲ್ಲಾ ಘಟನೆಗಳಿಂದ ವಿದ್ಯಾರ್ಥಿನಿ ಮಾನಸಿಕವಾಗಿ ನೊಂದಿದ್ದಳು ಎಂಬುದಾಗಿ ವರದಿಯಾಗಿದೆ.
- Advertisement 3
ವಿವಾಹಿತ ವ್ಯಕ್ತಿಯ ವರ್ತನೆಯಿಂದ ಮನನೊಂದ ವಿದ್ಯಾರ್ಥಿನಿ, ಶನಿವಾರ ಮನೆಯ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv