ಅಪ್ರಾಪ್ತ ಬಾಲಕಿಗೆ ಕಿರುಕುಳ – ಕೆಸಿಆರ್ ಪಕ್ಷದ ನಾಯಕ ಬಂಧನ

Public TV
1 Min Read
arrest

ಹೈದರಾಬಾದ್: ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಸಮಿತಿಯ (BRS) ಸ್ಥಳೀಯ ಮುಖಂಡನೊಬ್ಬನನ್ನು ಹೈದರಾಬಾದ್‌ನಲ್ಲಿ (Hyderabad) ಪೊಲೀಸರು ಬಂಧಿಸಿದ್ದಾರೆ.

ತೆಲಂಗಾಣದ (Telangana) ಸಿಎಂ ಕೆ. ಚಂದ್ರಶೇಖರ್ ರಾವ್ (KCR) ಅವರ ಪಕ್ಷದ ನಾಯಕ, ಆರೋಪಿ ಅಖೀಲ್ ಅಹ್ಮದ್ 10 ವರ್ಷದ ಬಾಲಕಿಗೆ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸುನಿಲ್ ಕುಮಾರ್ ವಿರುದ್ಧ ಸಿಡಿದ ಹಿಂದೂ ಕಾರ್ಯಕರ್ತರು

Police Jeep

ವರದಿಗಳ ಪ್ರಕಾರ ಘಟನೆ ಭಾನುವಾರ ನಡೆದಿದೆ. 10 ವರ್ಷದ ಬಾಲಕಿ ಮೆಡಿಕಲ್ ಶಾಪ್‌ಗೆ ಹೋಗಿದ್ದಾಗ ಅಲ್ಲಿ ಅಖೀಲ್ ಅಹ್ಮದ್ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಬಳಿಕ ಬಾಲಕಿ ತನ್ನ ಮನೆಗೆ ಬಂದು ಪೋಷಕರಲ್ಲಿ ನಡೆದ ಘಟನೆ ತಿಳಿಸಿದ್ದಾಳೆ. ಬಾಲಕಿಯ ಪೋಷಕರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಓದಿದ್ದು 8ನೇ ತರಗತಿ, ಆದ್ರೆ IPS ಅಧಿಕಾರಿ ಎಂದು ಮಹಿಳೆಯರನ್ನು ನಂಬಿಸಿ ಲಕ್ಷ ಲಕ್ಷ ಹಣ ದೋಚಿದ

ದೂರನ್ನು ಪಡೆದ ಬಳಿಕ ನಾವು ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *