Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!

Cinema

ಹರಿತವಾದ ಕಥೆಯ ಸುಳಿವಿನೊಂದಿಗೆ ಬಂತು ‘ಹರಿಕಥೆ ಅಲ್ಲ ಗಿರಿಕಥೆ’ ಟ್ರೈಲರ್!

Public TV
Last updated: June 15, 2022 1:08 pm
Public TV
Share
2 Min Read
Harikathe Alla Girikathe
SHARE

ರಿಷಬ್ ಶೆಟ್ಟಿ, ನಾಯಕರಾಗಿ ನಟಿಸಿರುವ ‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರ ಈಗಾಗಲೇ ಹಲವಾರು ದಿಕ್ಕುಗಳಲ್ಲಿ ಚರ್ಚೆಗಳನ್ನು ಹುಟ್ಟುಹಾಕಿದೆ. ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್‌ನಡಿಯಲ್ಲಿ ಸಂದೇಶ ಅವರು ನಿರ್ಮಾಣ ಮಾಡಿರುವ ಈ ಸಿನಿಮಾ ಜನರನ್ನು ಸೆಳೆದಿರುವುದೇ ತನ್ನೊಳಗೆ ಬಚ್ಚಿಟ್ಟುಕೊಂಡಿರುವ ಭಿನ್ನವಾದ ಕಥೆಯ ಸುಳಿವಿನಿಂದ. ಟ್ರೈಲರ್‌ನಲ್ಲಿ ಒಂದಷ್ಟು ವಿಶೇಷತೆಗಳು ಕಾಣಿಸಬಹುದೆಂಬ ಕಾರಣದಿಂದ ಅದರತ್ತ ಜನ ಆಸೆಯಿಟ್ಟು ಕಾದು ಕೂತಿದ್ದರು. ಕಡೆಗೂ ಇದೀಗ ಹರಿತವಾದ, ವಿಶೇಷವಾದ ಕಥೆಯ ಸುಳಿವಿನೊಂದಿಗೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ಬಿಡುಗಡೆಗೊಂಡಿದೆ.

ಇದು ಮೂರು ‘ಗಿರಿ’ಗಳ ಸುತ್ತ ನಡೆಯೋ ಕಥಾನಕ ಎಂಬಂಥಾ ಸಣ್ಣ ಸುಳಿವನ್ನಷ್ಟೇ ಚಿತ್ರತಂಡ ಬಿಟ್ಟುಕೊಟ್ಟಿತ್ತು. ಹಾಗಾದರೆ ಈ ಗಿರಿ ಅಂದರೇನೆಂಬ ಹುಳವನ್ನು ಪ್ರತಿಯೊಬ್ಬರೂ ತಲೆಗೆ ಬಿಟ್ಟುಕೊಂಡಿದ್ದರು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಈಗ ರಿಲೀಸ್ ಆಗಿರುವ ಟ್ರೈಲರ್ ಎಲ್ಲ ವಿಧದಲ್ಲಿಯೂ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಯೂಟ್ಯೂಬ್ ನೋಡಿ ಕಳ್ಳತನ ಮಾಡಿದ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದ 

Harikathe Alla Girikathe 1

ಇಲ್ಲಿ ರಿಷಬ್‌ ಶೆಟ್ಟಿ ನಿರ್ದೇಶಕನಾಗೋ ಕನಸು ಹೊತ್ತು ತಿರುಗಾಡುವ ಡೈರೆಕ್ಟರ್ ಗಿರಿ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆಂಬ ಸುಳಿವು ಸಿಕ್ಕಿದೆ. ಅದರ ಜೊತೆ ಜೊತೆಗೇ ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ ಮುಂತಾದವರ ಪಾತ್ರಗಳು ಕೂಡಾ ಸಣ್ಣಮಟ್ಟದಲ್ಲಿ ಸುಳಿವು ಬಿಟ್ಟುಕೊಟ್ಟಿವೆ. ಇದುವರೆಗೆ ಜಾಹೀರಾಗಿರುವ ವಿಚಾರಗಳಾಚೆಗೆ ಇಲ್ಲಿನ ಕಥೆ ಹಬ್ಬಿಕೊಂಡಿದೆ ಎಂಬ ಸ್ಪಷ್ಟ ನಂಬಿಕೆ ಮೂಡಿಸುವಲ್ಲಿಯೂ ಈ ಟ್ರೈಲರ್ ಯಶಸ್ಸು ಕಂಡಿದೆ.

ಇದುವರೆಗೂ ಸಿನಿಮಾ ಕನಸು ಹೊತ್ತು ಗಾಂಧಿನಗರದಲ್ಲಿ ಸುಳಿದಾಡುವವರ ಕಥೆಗಳು ಸಾಕಷ್ಟು ಕಾಣಿಸಿಕೊಂಡಿವೆ. ಆದರೆ ‘ಹರಿಕಥೆ ಅಲ್ಲ ಗಿರಿಕಥೆ’ಯಲ್ಲಿರೋದು ಡಿಫರೆಂಟಾದ ಕಥೆ ಎಂಬುದನ್ನು ನಿರ್ದೇಶಕದ್ವಯರು ನಿಖರವಾಗಿಯೇ ನಿರೂಪಿಸಿದ್ದಾರೆ. ಅದು ಈ ಟ್ರೈಲರ್‌ನ ನಿಜವಾದ ಪ್ಲಸ್ ಪಾಯಿಂಟ್.

ಈ ಮೂಲಕ ದೊಡ್ಡ ಚಾಲೆಂಜೊಂದರಲ್ಲಿ ಚಿತ್ರತಂಡ ಗೆದ್ದಂತಾಗಿದೆ. ಈ ಟ್ರೈಲರ್‍ಗೆ ಸಿಗುತ್ತಿರುವ ವ್ಯಾಪಕ ಮೆಚ್ಚುಗೆ ಮತ್ತು ಬೆಂಬಲಗಳೇ ಸಿನಿಮಾದ ಗೆಲುವನ್ನು ನಿಕ್ಕಿಯಾಗಿಸಿದೆ. ಇದು ಚಿತ್ರತಂಡದ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ನಿಖರವಾಗಿ ಹೇಳಬೇಕೆಂದರೆ ‘ಹರಿಕಥೆ ಅಲ್ಲ ಗಿರಿಕಥೆ’ಯ ಟ್ರೈಲರ್ ನಿಜಕ್ಕೂ ಪರಿಣಾಮಕಾರಿಯಾಗಿದೆ.

Harikathe Alla Girikathe 2

ಸಂದೇಶ್ ನಾಗರಾಜ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಚಿತ್ರ ‘ಹರಿಕಥೆ ಅಲ್ಲ ಗಿರಿಕಥೆ’. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಈ ಸಿನಿಮಾದ ನಿರ್ದೇಶನದ ಜವಾಬ್ದಾರಿಯನ್ನು ನಿರ್ವಹಿಸಿದ್ದಾರೆ. ಇದು ಓರ್ವ ನಟನಾಗಿ ರಿಷಬ್ ಶೆಟ್ಟಿ ವೃತ್ತಿ ಬದುಕಿನ ಮಹತ್ವದ ಚಿತ್ರವಾಗೋದರಲ್ಲಿ ಯಾವ ಸಂದೇಹವೂ ಇಲ್ಲ. ಇದನ್ನೂ ಓದಿ:  ಕುವೆಂಪು, ಬಸವಣ್ಣಗೆ ಕುತ್ತು ಬಂದ ಮೇಲೆ ನಾವಿದ್ದು ಏನು ಮಾಡೋದು: ಹಂಸಲೇಖ 

ಈ ಚಿತ್ರ ಕೇವಲ ಕಥೆಯ ದಿಕ್ಕಿನಿಂದ ಮಾತ್ರವಲ್ಲದೇ ತಾಂತ್ರಿಕವಾಗಿಯೂ ಶ್ರೀಮಂತವಾಗಿದೆ. ಅದರ ಲಕ್ಷಣಗಳು ಈ ಟ್ರೈಲರ್‌ನಲ್ಲೂ ಕಾಣಿಸಿವೆ. ಇನ್ನುಳಿದಂತೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ, ರಚನಾ ಇಂದರ್, ತಪಸ್ವಿನಿ, ಹೊನ್ನವಳ್ಳಿ ಕೃಷ್ಣ ಮುಂತಾದವರ ತಾರಾಗಣದಿಂದ ‘ಹರಿಕಥೆ ಅಲ್ಲ ಗಿರಿಕಥೆ’ ಮೈಕೈ ತುಂಬಿಕೊಂಡಿದೆ. ಈ ಸಿನಿಮಾ ಜೂನ್‌ 23ಕ್ಕೆ ರಿಲೀಸ್‌ ಆಗುತ್ತಿದ್ದು, ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

TAGGED:Harikathe Alla Girikatherishab shettysandalwoodtrailerಚಂದನವನಟ್ರೈಲರ್ರಿಷಬ್ ಶೆಟ್ಟಿಸಿನಿಮಾಹರಿಕಥೆ ಅಲ್ಲ ಗಿರಿಕಥೆ
Share This Article
Facebook Whatsapp Whatsapp Telegram

Cinema news

Sri murali and prashant neel
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಮಾತು
Cinema Latest Sandalwood Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood

You Might Also Like

Indian High Commission in Dhaka
Latest

ಢಾಕಾದಲ್ಲಿರುವ ಭಾರತೀಯ ಹೈಕಮಿಷನ್‌ಗೆ ಬೆದರಿಕೆ – ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್

Public TV
By Public TV
6 minutes ago
supreme Court 1
Latest

ಮಾಲಿನ್ಯ ಹೆಚ್ಚಿರುವಾಗ ಟೋಲ್‌ಗಳಿಂದ ಆದಾಯ ಗಳಿಕೆಗೆ ಆದ್ಯತೆ ನೀಡೋದು ಅಸಾಧ್ಯ, ಸಂಗ್ರಹ ಸ್ಥಗಿತಗೊಳಿಸಿ: ಸುಪ್ರೀಂ

Public TV
By Public TV
10 minutes ago
Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
39 minutes ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
60 minutes ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
1 hour ago
Krishna Byre Gowda
Bagalkot

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ನಮ್ಮ ಕೂಸು, ಮುಗಿಸುವ ಬದ್ಧತೆ ನಮಗಿದೆ: ಕೃಷ್ಣ ಬೈರೇಗೌಡ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?