ಕನ್ನಡದ ಹೆಸರಾಂತ ತಾರಾ ಜೋಡಿ ವಸಿಷ್ಠ ಸಿಂಹ (Vasishtha Simha) ಮತ್ತು ಹರಿಪ್ರಿಯಾ (Haripriya) ದಂಪತಿ ಮಂತ್ರಾಲಯಕ್ಕೆ (Mantralaya) ತೆರಳಿ ರಾಯರ ದರ್ಶನ ಪಡೆದಿದ್ದಾರೆ. ಮದುವೆಯ ನಂತರ ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುವ ಈ ತಾರಾ ಜೋಡಿಯು ಮಂತ್ರಾಲಯಕ್ಕೂ ಬಂದು ರಾಯರ ಮೂಲ ಬೃಂದಾವನದ ದರ್ಶನದ ಮಾಡಿದ್ದಾರೆ.
ಎರಡೂವರೆ ವರ್ಷಗಳು ಪ್ರೀತಿಸಿದ್ದ ಸಿಂಹಪ್ರಿಯಾ ಜೋಡಿ ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಬಳಿಕ ಮೈಸೂರಿನಲ್ಲಿ ವಸಿಷ್ಠ ಸಿಂಹ (Vasista Simha) ಮತ್ತು ಹರಿಪ್ರಿಯಾ ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿಯೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮದುವೆ ಬಳಿಕ ವಸಿಷ್ಠ ಸಿಂಹ ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದರೆ, ಹರಿಪ್ರಿಯಾ ಯಾವುದೇ ಸಿನಿಮಾ ಒಪ್ಪಿಕೊಂಡಿಲ್ಲ. ಹಾಗಾಗಿ ಸಹಜವಾಗಿಯೇ ಸಿನಿಮಾ ರಂಗದಿಂದ ಅವರು ದೂರ ಉಳಿಯಲಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ. ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗುತ್ತಾರಾ ಅಥವಾ ಇಲ್ಲವಾ ಎನ್ನುವುದು ಕಾದು ನೋಡಬೇಕು.
Web Stories