ಸ್ಯಾಂಡಲ್ ವುಡ್ ನಟ ಹರೀಶ್ ರಾಜ್ ‘ಜೊತೆ ಜೊತೆಯಲಿ’ ಧಾರಾವಾಹಿಯಲ್ಲಿ ನಟಿಸುವುದು ಪಕ್ಕಾ ಆಗಿದೆ. ಈ ಧಾರಾವಾಹಿ ಟೀಮ್ ಕಡೆಯಿಂದ ತಮಗೆ ಕರೆ ಬಂದಿರುವ ವಿಚಾರವನ್ನೂ ಅವರು ಹಂಚಿಕೊಂಡಿದ್ದರು. ತಾವು ಕೂಡ ಸೀರಿಯಲ್ ತಂಡಕ್ಕೆ ಕೆಲವು ಷರತ್ತುಗಳನ್ನು ವಿಧಿಸಿರುವುದಾಗಿ, ಅದಕ್ಕೆ ಅವರು ಒಪ್ಪಿಕೊಂಡರೆ ಧಾರಾವಾಹಿಯಲ್ಲಿ ನಟಿಸುವುದಾಗಿ ತಿಳಿಸಿದ್ದರು. ಹರೀಶ್ ರಾಜ್ ಷರತ್ತುಗಳನ್ನು ವಾಹಿನಿ ಮತ್ತು ಧಾರಾವಾಹಿ ತಂಡ ಒಪ್ಪಿಕೊಂಡಿದೆ ಎನ್ನಲಾಗುತ್ತಿದೆ.
ಹರೀಶ್ ರಾಜ್ ಸಿನಿಮಾ ರಂಗದಲ್ಲೂ ಸಕ್ರೀರಾಗಿರುವ ಕಾರಣದಿಂದ ಹದಿನೈದು ದಿನ ಸೀರಿಯಲ್, ಹದಿನೈದು ದಿನ ಸಿನಿಮಾದಲ್ಲಿ ನಟಿಸುವುದಾಗಿ ಅವರು ವಾಹಿನಿಗೆ ತಿಳಿಸಿದ್ದರಂತೆ. ಈ ಮಾತಿಗೆ ವಾಹಿನಿ ಮತ್ತು ಧಾರಾವಾಹಿ ತಂಡ ಕೂಡ ಒಪ್ಪಿಗೆ ಸೂಚಿಸಿದೆ ಎನ್ನಲಾಗುತ್ತಿದ್ದು, ಅತೀ ಶೀಘ್ರದಲ್ಲೇ ಅವರು ಜೊತೆ ಜೊತೆಯಲಿ ಟೀಮ್ ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ:ಆ ಒಂದು ಹೆಸರಿನ ಟ್ಯಾಟೋನಿಂದ ಎರಡನೇ ಮದುವೆ ವದಂತಿಗೆ ಫುಲ್ ಸ್ಟಾಪ್ ಹಾಕಿದ ಮೇಘನಾ ರಾಜ್
ಈವರೆಗೂ ಅನಿರುದ್ಧ ಅವರು ನಿರ್ವಹಿಸುತ್ತಿದ್ದ ಆರ್ಯವರ್ಧನ್ ಪಾತ್ರಕ್ಕೆ ಹರೀಶ್ ರಾಜ್ ಅವರು ಆಯ್ಕೆಯಾಗಿದ್ದಾರೆ ಎಂದು ಹೇಳಲಾಗುತ್ತಿತ್ತು. ಆರ್ಯವರ್ಧನ್ ಪಾತ್ರವನ್ನು ಹರೀಶ್ ರಾಜ್ ಮುಂದುವರೆಸಿಕೊಂಡು ಹೋಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಹರೀಶ್ ರಾಜ್ ಬೇರೆ ಪಾತ್ರವನ್ನು ಮಾಡಲಿದ್ದಾರಂತೆ. ಆ ಪಾತ್ರ ಯಾವುದು? ಆರ್ಯವರ್ಧನ್ ಪಾತ್ರಕ್ಕೂ ಈ ಪಾತ್ರಕ್ಕೂ ಲಿಂಕ್ ಇದೆಯಾ? ಕಥೆಯಲ್ಲಿ ತಿರುವು ಎಂಥದ್ದು ಎನ್ನುವ ಕುತೂಹಲ ಇದೀಗ ಶುರುವಾಗಿದೆ.