Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಭೂಪಿಂದರ್‌ ಹೂಡಾಗೆ ಮಣೆ ಹಾಕಿ ಕೈ ಸುಟ್ಟುಕೊಂಡ ಕಾಂಗ್ರೆಸ್!‌

Public TV
Last updated: October 9, 2024 11:09 am
Public TV
Share
3 Min Read
Bhupinder Singh Hooda and rahul gandhi
SHARE

ನವದೆಹಲಿ: ಹರಿಯಾಣದಲ್ಲಿ (Hariyana) ಸೋಲಿಗೆ ಕಾರಣ ಯಾರು ಈ ಪ್ರಶ್ನೆಗೆ ಸದ್ಯಕ್ಕೆ ಕಾಂಗ್ರೆಸ್‌ (Congress) ಬಳಿ ಸ್ಪಷ್ಟವಾದ ಉತ್ತರ ಇಲ್ಲ. ಆದರೆ ಬಹುತೇಕ ಅಲ್ಲಿನ ಕೈ ನಾಯಕರು ಮಾಜಿ ಸಿಎಂ, ಜಾಟ್‌ ನಾಯಕ ಭೂಪಿಂದರ್ ಸಿಂಗ್ ಹೂಡಾ (Bhupinder Singh Hooda) ಅವರಿಂದಲೇ ಹರಿಯಾಣದಲ್ಲಿ ನಮಗೆ ಸೋಲಾಗಿದೆ ಎಂಬ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.

2019ರ ಚುನಾವಣೆಯಯಲ್ಲಿ ಹರಿಯಾಣದಲ್ಲಿ ಅತಂತ್ರ ಫಲಿತಾಂಶ ಬಂದಿತ್ತು. ಬಿಜೆಪಿ 40 ಸ್ಥಾನ ಗೆದ್ದರೆ ಕಾಂಗ್ರೆಸ್‌ 31 ಸ್ಥಾನ ಗೆದ್ದುಕೊಂಡಿತ್ತು. ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಸಿಕ್ಕಿರಲಿಲ್ಲ. ಈ ಸಂದರ್ಭದಲ್ಲಿ ಮಾಜಿ ಸಿಎಂ ಭೂಪಿಂದರ್ ಸಿಂಗ್ ಅವರು ಸೂಚಿಸಿದ ಅಭ್ಯರ್ಥಿಗಳಿಗೆ ಟಿಕೆಟ್‌ ಹಂಚಿಕೆ ಮಾಡಿದ್ದರೆ ಜಯಗಳಿಸುತ್ತಿತ್ತು ಎಂಬ ವಿಶ್ಲೇಷಣೆ ಕಾಂಗ್ರೆಸ್‌ ವಲಯದಿಂದ ವ್ಯಕ್ತವಾಗಿತ್ತು.

2024ರ ಲೋಕಸಭಾ ಚುನಾವಣೆಯಲ್ಲಿ 5 ಕ್ಷೇತ್ರಗಳಲ್ಲಿ ಜಯಗಳಿಸಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭೂಪಿಂದರ್ ಸಿಂಗ್ ಹೂಡಾ ಅವರ ಕೈ ಮೇಲಾಯಿತು. ದಲಿತ ನಾಯಕಿ, ಸಿರ್ಸಾ ಕ್ಷೇತ್ರದ ಸಂಸದೆ ಕುಮಾರಿ ಶೆಲ್ಜಾ ಮತ್ತು ರಣ್‌ದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಹರಿಯಾಣದವರೇ ಆಗಿದ್ದರೂ ಹೈಕಮಾಂಡ್‌ ಭೂಪಿಂದರ್ ಹೂಡಾ ಅವರಿಗೆ ಮಣೆ ಹಾಕಿತು. ಪರಿಣಾಮ ಒಟ್ಟು 90 ಕ್ಷೇತ್ರಗಳ ಪೈಕಿ 72 ಮಂದಿ ತನ್ನ ಬೆಂಬಲಿಗರಿಗೆ ಟಿಕೆಟ್‌ ನೀಡುವಲ್ಲಿ ಹೂಡಾ ಯಶಸ್ವಿಯಾದರು. ಟಿಕೆಟ್‌ ಹಂಚಿಕೆಯಲ್ಲಿ ಹೂಡಾ ಬೆಂಬಲಿಗರಿಗೆ ಹೈಕಮಾಂಡ್‌ ಮಣೆ ಹಾಕಿದ್ದು ಮಾತ್ರವಲ್ಲೇ ಹರಿಯಾಣದಲ್ಲಿ ಹೂಡಾಗೆ ಫುಲ್‌ ಹ್ಯಾಂಡ್‌ ನೀಡಿದ್ದು ಕಾಂಗ್ರೆಸ್‌ ಸೋಲಿಗೆ ಪ್ರಮುಖ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ವಿನೇಶ್‌ ಫೋಗಟ್ ಹೋದಲ್ಲೆಲ್ಲ ಸತ್ಯನಾಶವಾಗಲಿದೆ: ಬ್ರಿಜ್ ಭೂಷಣ್ ಶರಣ್ ಸಿಂಗ್

Rahul Gandhi Bhupinder Hooda Kumari Shailja 1

ಹೂಡಾ ಅವರು ಪಕ್ಷದ ಮೇಲೆ ಏಕಸ್ವಾಮ್ಯ ಸಾಧಿಸುತ್ತಿದ್ದಾರೆ ಎಂದು ಆರೋಪಿಸಿ ಕಿರಣ್ ಚೌಧರಿ ಮತ್ತು ಕುಲದೀಪ್ ಬಿಷ್ಣೋಯ್ ಅವರಂತಹ ಹಿರಿಯ ನಾಯಕರು ಪಕ್ಷದಿಂದ ನಿರ್ಗಮಿಸಿದ್ದರು.

ಹೂಡಾ ಅವರು ಮುಂದಿನ ಸಿಎಂ ನಾನೇ ಎಂಬಂತೆ ವರ್ತಿಸುತ್ತಿದ್ದರು. ಹರಿಯಾಣದಲ್ಲಿ ಜಾಟ್‌ ಸಮುದಾಯದ ಜನ 27% ಇದ್ದರೆ ಮುಸ್ಲಿಮರ ಸಂಖ್ಯೆ 6% ಇದೆ. ಕಾಂಗ್ರೆಸ್‌ ಈ ಬಾರಿ ಜಾಟ್‌ ಮತ್ತು ಮುಸ್ಲಿಮರ ಮತಗಳು ಹೆಚ್ಚು ನೆಚ್ಚಿಕೊಂಡಿತ್ತು. ಅಷ್ಟೇ ಅಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಜಾಟರಿಗೆ ಟಿಕೆಟ್‌ ನೀಡಿತ್ತು. ಕೃಷಿ ಹೋರಾಟದಲ್ಲಿ ಪಂಜಾಬ್‌ ಬಿಟ್ಟರೆ ಹರಿಯಾಣದಲ್ಲೇ ಹೆಚ್ಚಿನ ಪ್ರತಿರೋಧ ವ್ಯಕ್ತವಾಗಿತ್ತು. ರೈತರನ್ನು ಹರಿಯಾಣದ ಗಡಿಯಲ್ಲೇ ತಡೆಯಲಾಗಿತ್ತು. ಜೊತೆಗೆ ಅಗ್ನಿವೀರ್‌ ವಿಷಯವನ್ನು ಕಾಂಗ್ರೆಸ್‌ ಪ್ರಸ್ತಾಪ ಮಾಡಿತ್ತು. ಈ ಎಲ್ಲಾ ಕಾರಣದಿಂದ ಈ ಬಾರಿ ಗೆಲುವು ನಮ್ಮದೇ ಎಂದು ಕಾಂಗ್ರೆಸ್‌ ಭಾವಿಸಿತ್ತು. ಇದನ್ನೂ ಓದಿ: ಹರಿಯಾಣ ಚುನಾವಣೆ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಕಾಂಗ್ರೆಸ್‌

Kumari Selja

ಗೆಲುವಿನ ಅತಿಯಾದ ಆತ್ಮವಿಶ್ವಾಸದಲ್ಲಿದ್ದ ಕಾಂಗ್ರೆಸ್‌ಗೆ ಒಳಗೊಳಗೆ ಏಟು ಬೀಳುತ್ತಿದ್ದರೂ ಅದನ್ನು ಶಮನ ಮಾಡಲು ಹೈಕಮಾಂಡ್‌ ನಾಯಕರು ಮುಂದಾಗಲಿಲ್ಲ. ಹೂಡಾ ಹೇಳಿದ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದಕ್ಕಾಗಿ ಪಕ್ಷದೊಂದಿಗೆ ಅಸಮಾಧಾನಗೊಂಡಿದ್ದ ಕುಮಾರಿ ಸೆಲ್ಜಾ ಕೆಲವು ದಿನಗಳ ಕಾಲ ಪ್ರಚಾರದಿಂದಲೇ ದೂರ ಉಳಿದಿದ್ದರು. ಅವರನ್ನು ಮನವೊಲಿಸಿದ ಬಳಿಕ ಕೊನೆಯ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಅಷ್ಟೇ ಅಲ್ಲದೇ ಅವರು ಪದೇ ಪದೇ ಸಿಎಂ ಕುರ್ಚಿಯ ಮೇಲೆ ಹಕ್ಕು ಸಾಧಿಸಿದ್ದು ಪಕ್ಷಕ್ಕೆ ಮುಳುವಾಯಿತು.

ಭೂಪಿಂದರ್‌ ಹೂಡಾ ಅವರು ಮಾರ್ಚ್‌ 2005ರಿಂದ ಅಕ್ಟೋಬರ್‌ 2024ರ ವರೆಗೆ ಮುಖ್ಯಮಂತ್ರಿಯಾಗಿದ್ದರು. ಈ ಅವಧಿಯಲ್ಲಿ ದಲಿತರಿಗೆ ಅನ್ಯಾಯವಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹರಿಯಾಣ ಸಾರ್ವಜನಿಕ ಸೇವಾ ಆಯೋಗ ಮತ್ತು ಹರಿಯಾಣ ಸ್ಟಾಫ್ ಸೆಲೆಕ್ಷನ್ ಕಮಿಷನ್ ಉದ್ಯೋಗಳನ್ನು ಹಣ ಪಡೆದು ನೀಡಿದ್ದಾರೆ. ಇದರ ಜೊತೆ ಗಾಂಧಿ ಕುಟುಂಬವನ್ನು ಓಲೈಸಲು ಸರ್ಕಾರಿ ಜಾಗವನ್ನು ರಾಬಾರ್ಟ್‌ ವಾದ್ರಾಗೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಆಡಳಿತ ವಿರೋಧಿ ಅಲೆಗಿಂತಲೂ ಹೂಡಾ ಅವಧಿಯಲ್ಲಿ ನಡೆದಿದೆ ಎಂಬ ಭ್ರಷ್ಟಾಚಾರವನ್ನು ಬಿಜೆಪಿ ಯಶಸ್ವಿಯಾಗಿ ಬಿಂಬಿಸಿತ್ತು. ಇದೆಲ್ಲದರ ಪರಿಣಾಮ ಕಾಂಗ್ರೆಸ್‌ ಹರಿಯಾಣದಲ್ಲಿ ಸೋತಿದೆ.

 

TAGGED:Bhupinder Singh Hoodabjpcongresspoliticsಕಾಂಗ್ರೆಸ್ಬಿಜೆಪಿಭೂಪಿಂದರ್‌ ಹೂಡಾಹರಿಯಾಣ ಚುನಾವಣೆ
Share This Article
Facebook Whatsapp Whatsapp Telegram

Cinema Updates

amid calls for boycott aamir khan productions changes display pic to indian flag internet calls it damage control
‘ಸಿತಾರೆ ಜಮೀನ್ ಪರ್’ ಗೆ ಬಾಯ್ಕಾಟ್‌ ಭಯ – ತ್ರಿವರ್ಣ ಧ್ವಜ ಡಿಪಿ ಹಾಕಿದ ಆಮೀರ್ ಖಾನ್!
10 hours ago
Rani Mukerji Shah Rukh Khan
ʻಕಿಂಗ್’ ಜೊತೆ ಮತ್ತೆ ಒಂದಾಗಲಿದ್ದಾರೆ ರಾಣಿ ಮುಖರ್ಜಿ!
12 hours ago
disha madan
ಕಾನ್ ಫೆಸ್ಟಿವಲ್‌ನಲ್ಲಿ ಕನ್ನಡತಿ- ಅಮ್ಮನ ಸೀರೆ ಗೌನ್ ಮಾಡಿದ ದಿಶಾ ಮದನ್
16 hours ago
pawan kalyan 1 1
ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಚಿತ್ರದ ರಿಲೀಸ್ ಡೇಟ್ ಅನೌನ್ಸ್
16 hours ago

You Might Also Like

techie murder
Bengaluru City

ಸಿಗರೇಟ್ ವಿಚಾರಕ್ಕೆ ಕಿರಿಕ್ – ಬೆಂಗಳೂರಲ್ಲಿ ಕಾರು ಗುದ್ದಿಸಿ ಟೆಕ್ಕಿ ಕೊಲೆ

Public TV
By Public TV
2 minutes ago
s 500 air defence system
Bengaluru City

S-500 ಏರ್ ಡಿಫೆನ್ಸ್ ಸಿಸ್ಟಂ ಬಂದ್ರೆ ವಿಶ್ವದಲ್ಲಿ ಭಾರತವೇ ಪವರ್‌ಫುಲ್‌

Public TV
By Public TV
4 minutes ago
Akash missile defence system
Latest

ಬರೋಬ್ಬರಿ 600 ಡ್ರೋನ್‌ಗಳಿಂದ ಪಾಕ್‌ ದಾಳಿ – ಎಲ್ಲವನ್ನೂ ಹೊಡೆದುರುಳಿಸಿದ್ದ ಭಾರತ

Public TV
By Public TV
36 minutes ago
Crime
Crime

ಸಿಎಂ ಮಂಗಳೂರು ಪ್ರವಾಸದಲ್ಲಿದ್ದಾಗಲೇ ಅಹಿತಕರ ಘಟನೆ – ಬಂಟ್ವಾಳದಲ್ಲಿ ವ್ಯಕ್ತಿ ಮೇಲೆ ತಲ್ವಾರ್‌ನಿಂದ ಅಟ್ಯಾಕ್‌

Public TV
By Public TV
59 minutes ago
back pain
Health

ಬೆನ್ನುನೋವೆ? – ನಿತ್ಯ ಈ 5 ಯೋಗಾಸನ ಮಾಡಿ ಪರಿಹಾರ ಕಂಡುಕೊಳ್ಳಿ..

Public TV
By Public TV
1 hour ago
Veg Cutlet
Food

ಥಟ್ ಅಂತ ರೆಡಿ ಮಾಡಿ ವೆಜ್ ಕಟ್ಲೆಟ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?