Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹರ್ಯಾಣದಲ್ಲಿ ಅತಂತ್ರ ಇದ್ದರೂ ಬಿಜೆಪಿ ಸರ್ಕಾರ

Public TV
Last updated: October 24, 2019 9:40 pm
Public TV
Share
3 Min Read
haryana A
SHARE

– ಕಿಂಗ್ ಮೇಕರ್ ಚೌಟಾಲ್‍ಗೆ ಸಖತ್ ಡಿಮಾಂಡ್
– ಕಾಂಗ್ರೆಸ್‍ಗೆ ಆಕ್ಸಿಜನ್ ಆದ ಸೋನಿಯಾ ಸಾರಥ್ಯ

ಚಂಡೀಗಢ: ಮಹಾರಾಷ್ಟ್ರದಲ್ಲಿ ಬಹುಮತದೊಂದಿಗೆ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ್ದರೂ, ಹರಿಯಾಣದಲ್ಲಿ ಭಾರೀ ಪ್ರಮಾಣದಲ್ಲಿ ಹಿನ್ನಡೆ ಅನುಭವಿಸಿದೆ. ಎರಡನೇ ಬಾರಿಗೆ ಅಧಿಕಾರಕ್ಕೇರಲು ಸರಳ ಬಹುಮತ ಪಡೆಯದಿದ್ದರೂ ಪಕ್ಷೇತರರೊಂದಿಗೆ ಸರ್ಕಾರ ರಚನೆಗೆ ಕೈ ಹಾಕಿದೆ.

ಹೊಸ ಪಕ್ಷ ಹುಟ್ಟುಹಾಕಿದ ಜನನಾಯಕ್ ಜನತಾ ಪಾರ್ಟಿಯ ದುಶ್ಯಂತ್ ಚೌಟಾಲಾ ಈಗ ಕಿಂಗ್ ಮೇಕರ್ ಆಗಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಗೆ ಕಾಂಗ್ರೆಸ್ ಕೈ ಹಾಕಿದ್ದರೂ, ಕರ್ನಾಟಕದಂತೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಡಲು ಚೌಟಾಲಾ ಬಿಗಿಪಟ್ಟು ಹಿಡಿದಿದ್ದರಿಂದ ಮಾತುಕತೆ ಮುರಿದು ಬಿದ್ದಿದೆ. ದುಶ್ಯಂತ್ ಚೌಟಾಲಾ ಅವರನ್ನು ಬಿಜೆಪಿ ಕೂಡ ಸಂಪರ್ಕಿಸಿದ್ದು, ಪಕ್ಷೇತರರೊಂದಿಗೆ ಸರ್ಕಾರ ರಚನೆಗೆ ಬಿಜೆಪಿ ಹಕ್ಕು ಪ್ರತಿಪಾದಿಸಿದೆ.

collage amith haryana cm

ಹರ್ಯಾಣ ಫಲಿತಾಂಶ: ಹರ್ಯಾಣದ ಒಟ್ಟು 90 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರ ರಚಿಸಲು 46 ಸ್ಥಾನಗಳ ಸರಳ ಬಹುಮತ ಅಗತ್ಯವಿದೆ. ಚುನಾವಣೆಯಲ್ಲಿ ಆಡಳಿತದಲ್ಲಿದ್ದ ಬಿಜೆಪಿ ಕೇವಲ 40ಕ್ಕೆ ಸೀಮಿತವಾಗಿದೆ. ಕಾಂಗ್ರೆಸ್ 31 ಸ್ಥಾನಗಳು ಲಭಿಸಿದರೆ, ಜೆಜೆಪಿ 10 ಕ್ಷೇತ್ರದಲ್ಲಿ ಗೆದ್ದು ಕಿಂಗ್ ಮೇಕರ್ ಆಗಿ ಹೊರ ಹೊಮ್ಮಿದೆ. ಐಎನ್‍ಎಲ್‍ಡಿ ಒಂದು ಸ್ಥಾನಕ್ಕೆ ತೃಪ್ತಿ ಪಟ್ಟರೆ, ಇತರೆ 8 ಸ್ಥಾನ ಬಂದಿದೆ.

ಬಿಜೆಪಿ ಸೋಲಿಗೆ ಕಾರಣಗಳೇನು?
ಬಿಜೆಪಿಯಲ್ಲಿ ಪಕ್ಷ ನಿಷ್ಠರ ಕಡೆಗಣಿಸಿ, ಪಕ್ಷಾಂತರಿಗಳಿಗೆ ಮಣೆ ಹಾಕಲಾಯಿತು. ಇದರಿಂದಾಗಿ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಮಿತಿಮೀರಿದ ನಿರುದ್ಯೋಗ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದರು. ರಾಜ್ಯದಲ್ಲಿ ಜಾಟ್ ಸಮುದಾಯ ಹೆಚ್ಚಿದ್ದರೂ ಬ್ರಾಹ್ಮಣ ಸಮುದಾಯದ ಖಟ್ಟರ್ ಅವರಿಗೆ ಸಿಎಂ ಪಟ್ಟ ಕೊಟ್ಟಿದ್ದು ಅಸಮಾಧಾನಕ್ಕೆ ಕಾರಣವಾಗಿತ್ತು. ಇದರಿಂದಾಗಿ ಜಾಟ್ ಸಮುದಾಯದ ಮತ ವಿಭಜನೆ ಆಯಿತು. ಬಿಜೆಪಿ ನಾಯಕರು ಪ್ರಚಾರದ ವೇಳೆ ಸಂವಿಧಾನದ 370ನೇ ವಿಧಿ ರದ್ದತಿ, ವೀರ್ ಸಾವರ್ಕರ್ ಅವರಿಗೆ ಭಾರತರತ್ನ ವಿಚಾರ ನೀಡುವ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡಿತ್ತು. ಅದು ಕೂಡ ಬಿಜೆಪಿಗೆ ಫಲಿಸಲಿಲ್ಲ. ಜೊತೆಗೆ ಅತಿಯಾದ ಆತ್ಮವಿಶ್ವಾಸ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರಚಾರ ಫಲಕೊಡಲಿಲ್ಲ.

subhash barala 3

ಕಿಂಗ್ ಮೇಕರ್:
ಕರ್ನಾಟಕದಲ್ಲಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಂತೆ ಹರ್ಯಾಣದಲ್ಲಿ ಜನನಾಯಕ್ ಜನತಾ ಪಾರ್ಟಿಯ ದುಶ್ಯಂತ್ ಚೌಟಾಲಾ ಕಿಂಗ್ ಮೇಕರ್ ಆಗಿದ್ದಾರೆ. ಕರ್ನಾಟಕದಂತೆ ಹೇಗಾದರೂ ಅಧಿಕಾರಕ್ಕೇರಬೇಕು ಅಂತ ಸೋನಿಯಾ ಗಾಂಧಿ ಅವರು ಚೌಟಾಲಾ ಅವರನ್ನು ಸಂಪರ್ಕಿಸಿದ್ದಾರೆ. ಬೆಳಗ್ಗೆ ಅತಂತ್ರ ಫಲಿತಾಂಶದ ಲಕ್ಷಣ ಅರಿತ ತಕ್ಷಣವೇ ದುಶ್ಯಂತ್ ಅವರನ್ನ ಸಂಪರ್ಕಿಸಿದರು. ಬಳಿಕ ಭೂಪಿಂದರ್ ಸಿಂಗ್ ಹೂಡ ಮೂಲಕ ಕೇವಲ ಅರ್ಧಗಂಟೆಯೊಳಗೆ 7 ಬಾರಿ ಸಂಪರ್ಕಿಸಿ ಡಿಸಿಎಂ ಸ್ಥಾನ ನೀಡುವುದಾಗಿ ಹೇಳಿದರು. ಆದರೆ ದುಶ್ಯಂತ್ ಅವರು ಮಾತ್ರ ಸಿಎಂ ಸ್ಥಾನಕ್ಕೆ ಪಟ್ಟುಹಿಡಿದ್ದಾರೆ. ಇತ್ತ ಬಿಜೆಪಿ ಕೂಡ ದುಶ್ಯಂತ್‍ಗೆ ಡಿಸಿಎಂ ಸ್ಥಾನ ಕೊಡುವುದಾಗಿ ಹೇಳಿದೆ.

Dushyant Chautala

ಅಖಾಲಿದಳದ ಬಾದಲ್‍ಗಳ ಮೂಲಕ ಚೌಟಾಲಾ ಮನವೊಲಿಕೆಗೆ ಅಮಿತ್ ಶಾ ಯತ್ನಿಸಿದ್ದಾರೆ. ಡಿಮಾಂಡ್ ಹೆಚ್ಚಿಸಿದ್ದರ ಲಾಭಕ್ಕೆ ಹವಣಿಸಿದ ಚೌಟಾಲಾ, ವಿಧಾನಸಭೆಯ ಕೀ ನನ್ನಲ್ಲಿದೆ. ತಾನೂ ಯಾವ ಪಕ್ಷದೊಂದಿಗೆ ಮಾತನಾಡಿಲ್ಲ. ನಾಳೆ ಮಾತನಾಡುತ್ತೇನೆ. ಯಾರು ನನಗೆ ಸಿಎಂ ಪಟ್ಟ ಕೊಡುತ್ತಾರೋ ಅವರ ಜೊತೆ ಕೈಜೋಡಿಸುವುದಾಗಿ ದುಶ್ಯಂತ್ ಹೇಳಿದ್ದಾರೆ. ಈ ಎಲ್ಲ ವಿದ್ಯಮಾನಗಳ ನಡುವೆ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಸಲುವಾಗಿ ರಾಜ್ಯಪಾಲರ ಭೇಟಿಗೆ ಮನೋಹರ್ ಲಾಲ್ ಖಟ್ಟರ್ ಸಮಯ ಕೇಳಿದ್ದಾರೆ.

Babita Yogeshwar

ಸೋತ ಪ್ರಮುಖರು, ಸೆಲೆಬ್ರಿಟಿಗಳು:
ಹರ್ಯಾಣದ ತೋಹಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಸೋಲು ಕಂಡಿದ್ದಾರೆ. ಸೋಲಿನ ಹೊಣೆಹೊತ್ತು ರಾಜೀನಾಮೆ ಕೊಟ್ಟಿದ್ದಾರೆ ಅಂತ ಸುದ್ದಿಯಾಗಿತ್ತು. ಆದರೆ ಇದೆಲ್ಲಾ ವದಂತಿ ಅಂತ ಸುಭಾಷ್ ಬರಾಲಾ ಅಲ್ಲಗಳೆದಿದ್ದಾರೆ. ಕೈಥಾಲ್ ಕ್ಷೇತ್ರದಿಂದ ಚುನಾವಣೆ ಎದುರಿಸಿದ್ದ ಕಾಂಗ್ರೆಸ್‍ನ ರಂದೀಪ್ ಸುರ್ಜೇವಾಲಾ ಸೋತಿದ್ದಾರೆ. ಇತ್ತೀಚೆಗೆ ಬಿಜೆಪಿಗೆ ಸೇರಿದ್ದ ಕುಸ್ತಿಪಟುಗಳಾದ ಬಬಿತಾ ಪೋಗಟ್ ದಾದ್ರಿ ಕ್ಷೇತ್ರದಿಂದ ಹಾಗೂ ಯೋಗೇಶ್ವರ್ ದತ್ ಬರೋದಾ ಕ್ಷೇತ್ರದಿಂದ ಚುನಾವಣೆಗೆ ನಿಂತು ಪರಾಭವಗೊಂಡಿದ್ದಾರೆ. ಬಿಜೆಪಿ ಟಿಕೆಟ್ ನೀಡಿದ್ದ ಟಿಕ್‍ಟಾಕ್ ಸ್ಟಾರ್, ಅದಂಪುರ್ ದ ಅಭ್ಯರ್ಥಿ ಸೋನಾಲಿ ಪೋಗಟ್ ಸೋತಿದ್ದಾರೆ.

TAGGED:bjpDushyant ChautalaHaryana Assembly ElectionsJJPPublic TVಪಬ್ಲಿಕ್ ಟಿವಿಫಲಿತಾಂಶಮಹಾರಾಷ್ಟ್ರವಿಧಾನಸಭಾ ಚುನಾವಣೆ 2019ಹರ್ಯಾಣ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
7 hours ago
big bulletin 17 August 2025 part 1
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-1

Public TV
By Public TV
7 hours ago
big bulletin 17 August 2025 part 2
Big Bulletin

ಬಿಗ್‌ ಬುಲೆಟಿನ್‌ 17 August 2025 ಭಾಗ-2

Public TV
By Public TV
8 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
8 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
8 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?