ಚಂಡೀಗಢ: ಗೆಳತಿಯನ್ನು ಹತ್ಯೆಗೈದಿದ್ದ ಆರೋಪಿ, ಫರಿದಾಬಾದ್ ಕೋರ್ಟ್ ಸಂಕೀರ್ಣದ ಆರನೇ ಮಹಡಿಯಿಂದ ಜಿಗಿದು ಸಾವಿಗೀಡಾಗಿರುವ ಘಟನೆ ಹರಿಯಾಣದಲ್ಲಿ (Haryana) ನಡೆದಿದೆ.
ಮೃತರನ್ನು ಮಹೇಂದರ್ (24) ಎಂದು ಗುರುತಿಸಲಾಗಿದೆ. ಇನ್ನೊಬ್ಬ ವ್ಯಕ್ತಿಯೊಂದಿಗೆ ಕರೆ ಮಾಡಿ ಮಾತನಾಡುತ್ತಿದ್ದಳು ಎಂಬ ಶಂಕೆಯಿಂದ ಮಹೇಂದರ್ ಆಕೆಯನ್ನು ಕೊಂದಿದ್ದಾನೆ. ಬುಧವಾರ ಆಕೆಯನ್ನು ಥಳಿಸಿ ರಾತ್ರಿ ರಸ್ತೆ ಬದಿ ಬಿಟ್ಟು ಹೋಗಿದ್ದಾನೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಜೊತೆ ಹೆಜ್ಜೆ ಹಾಕಿದ ಆದಿತ್ಯ ಠಾಕ್ರೆ
ಸಾಯುವ ಮೊದಲು ರೋಹಿಣಿ ತನ್ನ ಸಹೋದರನಿಗೆ ಮಹೇಂದರ್ ಹಲ್ಲೆ ನಡೆಸಿರುವ ಬಗ್ಗೆ ಹೇಳಿದ್ದರು. ನಂತರ ಮುಜೆಸರ್ ಪೊಲೀಸ್ ಠಾಣೆಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲಾಗಿತ್ತು.
ಆರೋಪಿಯು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಮೃತಳ ಒಡೆದ ಫೋನ್ ಅನ್ನು ಅವನಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮುಜೆಸರ್ ಪೊಲೀಸ್ ಠಾಣೆಯ ಎಸ್ಎಚ್ಒ ಇನ್ಸ್ಪೆಕ್ಟರ್ ಕಬೂಲ್ ಸಿಂಗ್ ಹೇಳಿದ್ದಾರೆ. ಇದನ್ನೂ ಓದಿ: ಮದುವೆಯಾಗ್ಬೇಕು, ಮಳೆಯಿಂದ ನೀರುತುಂಬಿದ ದೇವಸ್ಥಾನ ಕ್ಲೀನ್ ಮಾಡಿಸಿ – ವಧು, ವರರ ಮನವಿ
ಶುಕ್ರವಾರ ಮಹೇಂದರ್ನನ್ನು ಫರಿದಾಬಾದ್ ಕೋರ್ಟ್ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಆತ ಆರನೇ ಮಹಡಿಯಿಂದ ಜಿಗಿದಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ.