ಚಂಡೀಗಢ: ತನ್ನ ಹೆಸರಿಗೆ ಹೋಟೆಲ್ ನೋಂದಾಯಿಸಲು ನಿರಾಕರಿಸಿದಕ್ಕೆ ಪೋಷಕರನ್ನೇ ವ್ಯಕ್ತಿಯೋರ್ವ ಗುಂಡು ಹಾರಿಸಿ ಹತ್ಯೆಗೈದಿರುವ ಘಟನೆ ಹರಿಯಾಣದ ಜಜ್ಜರ್ನಲ್ಲಿ ನಡೆದಿದೆ.
ಘಟನೆ ಸಂಬಂಧ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ದೊರೆತಿದ್ದು, ಸ್ಥಳಕ್ಕೆ ಧಾವಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತ ತಂದೆಯನ್ನು ಹೋಟೆಲ್ ನಡೆಸುತ್ತಿದ್ದ ಚಂದ್ರಭಾನ್ (58) ಎಂದು ಗುರುತಿಸಲಾಗಿದೆ.
ಆರೋಪಿ ಪುತ್ರ ತರುಣ್ ಹೋಟೆಲ್ ಅನ್ನು ತನ್ನ ಹೆಸರಿಗೆ ನೋಂದಾಯಿಸುವಂತೆ ತಂದೆಗೆ ಒತ್ತಾಯಿಸುತ್ತಿದ್ದ. ಆದರೆ ಇದಕ್ಕೆ ಚಂದ್ರಭಾನ್ ನಿರಾಕರಿಸಿದ್ದಾರೆ. ಇದರಿಂದ ಕೋಪಗೊಂಡ ತರುಣ್ ಶನಿವಾರ ಬೆಳಗ್ಗೆ ಕೋಣೆಯಲ್ಲಿ ಮಲಗಿದ್ದ ತಾಯಿ ಮತ್ತು ತಂದೆಯನ್ನು ಗುಂಡಿಕ್ಕಿ ಕೊಂದಿದ್ದಾನೆ. ಇದನ್ನೂ ಓದಿ: ಬಿಎಸ್ವೈ ಕಂಡು ಕಣ್ಣೀರು ಹಾಕಿದ ರೇಣುಕಾಚಾರ್ಯ
ಗುಂಡಿನ ಸದ್ದು ಕೇಳಿ ತರುಣ್ ಪತ್ನಿ ಕೆಳಗೆ ಬಂದು ನೋಡಿದಾಗ ತನ್ನ ಅತ್ತೆ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ನೋಡಿದ್ದಾರೆ. ನಂತರ ಈ ಬಗ್ಗೆ ಪೊಲೀಸರಿಗೆ ಮಹಿಳೆ ಮಾಹಿತಿ ನೀಡಿದ್ದಾರೆ. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದಾನೆ. ಇದನ್ನೂ ಓದಿ: ದೇಶದಲ್ಲಿ 4 ಕೋಟಿಗೂ ಅಧಿಕ ಜನ ಮೊದಲ ಡೋಸ್ ಲಸಿಕೆ ಪಡೆದಿಲ್ಲ!