Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ವಿನೇಶ್‌ ಫೋಗಟ್‌ಗೆ 4 ಕೋಟಿ ರೂ. ಬಹುಮಾನ – ಬೆಳ್ಳಿ ಪದಕ ವಿಜೇತೆ ಮಾದರಿಯಲ್ಲಿ ಗೌರವಿಸಲು ಸಕಲ ಸಿದ್ಧತೆ

Public TV
Last updated: August 8, 2024 1:33 pm
Public TV
Share
3 Min Read
Vinesh Phogat.jpg 2
SHARE

ಚಂಡೀಗಢ: ಪ್ಯಾರಿಸ್‌ ಒಲಿಂಪಿಕ್ಸ್‌ (Paris Olympics 2024) ಫೈನಲ್‌ ಪಂದ್ಯಕ್ಕೂ ಮುನ್ನವೇ ಅನರ್ಹಗೊಂಡು ಕುಸ್ತಿಗೆ ವಿದಾಯ ಹೇಳಿದ ವಿನೇಶ್‌ ಫೋಗಟ್‌ (Vinesh Phogat) ಅವರಿಗೆ ಹರಿಯಾಣ ಸರ್ಕಾರ 4 ಕೋಟಿ ರೂ. ಬಹುಮಾನ ಘೋಷಿಸಿದೆ. ಇದರೊಂದಿಗೆ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ (Olympic Silver Medalist) ಮಾದರಿಯಲ್ಲೇ ಸ್ವಾಗತ ಕೋರಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ.

हरियाणा की हमारी बहादुर बेटी विनेश फौगाट ने ज़बरदस्त प्रदर्शन करके ओलंपिक में फाइनल में प्रवेश किया था। किन्हीं भी कारणों से वो भले ही ओलंपिक का फाइनल नहीं खेल पाई हो लेकिन हम सबके लिए वो एक चैंपियन है।

हमारी सरकार ने ये फैसला किया है कि विनेश फौगाट का स्वागत और अभिनंदन एक…

— Nayab Saini (@NayabSainiBJP) August 8, 2024

ಈ ಕುರಿತು ಎಕ್ಸ್‌ ಖಾತೆಯಲ್ಲಿ ಹರಿಯಾಣ ಸಿಎಂ ನಯಾಬ್‌ ಸಿಂಗ್‌ ಸೈನಿ (Nayab Singh Saini) ಮಾಹಿತಿ ಹಂಚಿಕೊಂಡಿದ್ದಾರೆ. ಒಲಿಂಪಿಕ್ಸ್‌ ಫ್ರೀಸ್ಟೈಲ್‌ ಕುಸ್ತಿ ವಿಭಾಗದಲ್ಲಿ ಫೈನಲ್‌ ತಲುಪಿ ಇತಿಹಾಸ ನಿರ್ಮಿಸಿದ ವಿನೇಶ್‌ ಫೋಗಟ್‌ ಅವರನ್ನು ತವರಿನಲ್ಲಿ ಬೆಳ್ಳಿ ಪದಕ ವಿಜೇತರಾಗಿ ಗೌರವಿಸಲಾಗುವುದು ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Vinesh Phogat 3

ಹರಿಯಾಣದ ಧೈರ್ಯಶಾಲಿ ಮಗಳು ವಿನೇಶ್ ಫೋಗಟ್ ಒಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಫೈನಲ್‌ಗೆ ತಲುಪಿದ್ದರು. ಆದ್ರೆ ಕಾರಣಾಂತರದಿಂದ ಫೈನಲ್ ಪಂದ್ಯದಲ್ಲಿ ಸ್ಪರ್ಧಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ಅವರು ನಮಗೆಲ್ಲ ಚಾಂಪಿಯನ್ ಆಗಿದ್ದಾರೆ. ಹಾಗಾಗಿ ಪದಕ ವಿಜೇತರಂತೆಯೇ ವಿನೇಶ್‌ರನ್ನ ಗೌರವಿಸುವ ನಿರ್ಧಾರವನ್ನ ನಮ್ಮ ಸರ್ಕಾರ ತೆಗೆದುಕೊಂಡಿದೆ. ಬೆಳ್ಳಿ ಪದಕ ವಿಜೇತರಿಗೆ ಸಮಾನವಾಗಿ ಗೌರವಿಸುತ್ತದೆ, ಜೊತೆಗೆ ಬೆಳ್ಳಿ ಪದಕ ವಿಜೇತರಿಗೆ ಸರ್ಕಾರ ನೀಡುವ ಪ್ರಶಸ್ತಿ ಮತ್ತು ಸೌಲಭ್ಯಗಳನ್ನೂ ಫೋಗಟ್ ಅವರಿಗೆ ಕೃತಜ್ಞತೆಯಿಂದ ನೀಡಲಾಗುತ್ತದೆ. ವಿನೇಶ್, ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ ಎಂದು ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Vinesh Phogat 1

ಹರಿಯಾಣ ಸರ್ಕಾರದ ಕ್ರೀಡಾನೀತಿ ಏನು?
ಕ್ರೀಡಾ ನೀತಿಯ ಪ್ರಕಾರ, ಹರಿಯಾಣ ಸರ್ಕಾರವು ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಿಗೆ 6 ಕೋಟಿ ರೂ., ಬೆಳ್ಳಿ ಪದಕ ವಿಜೇತರಿಗೆ 4 ಕೋಟಿ ರೂ. ಮತ್ತು ಕಂಚಿನ ಪದಕ ವಿಜೇತರಿಗೆ 2.5 ಕೋಟಿ ರೂ. ನೀಡಲಾಗುತ್ತದೆ. ವಿನೇಶ್‌ ಅವರು ಫೈನಲ್‌ ತಲುಪಿದ್ದ ಕಾರಣ ಸೋತಿದ್ದರೂ ಬೆಳ್ಳಿ ಪದಕ ಖಚಿತವಾಗುತ್ತಿತ್ತು. ಈ ಕಾರಣಕ್ಕಾಗಿಯೇ ವಿನೇಶ್‌ ಅವರನ್ನು ಬೆಳ್ಳಿ ಪದಕ ವಿಜೇತೆ ಸ್ಥಾನಮಾನ ನೀಡಿ ಗೌರವಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ, ಎನ್‌ಡಿಎ ಸರ್ಕಾರ ಅಲ್ಪಸಂಖ್ಯಾತ ವಿರೋಧಿಗಳು – ವಕ್ಫ್ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆಗೆ ಸಿಎಂ ಆಕ್ಷೇಪ

ವಿನೇಶ ಫೋಗಟ್‌ ನಿವೃತ್ತಿ ಘೋಷಣೆ:
ಒಲಿಂಪಿಕ್ಸ್‌ನಲ್ಲಿ (Paris Olympics) ಪದಕದ ನಿರೀಕ್ಷೆಯಲ್ಲಿದ್ದಾಗಲೇ ಅನರ್ಹಗೊಂಡಿರುವ ಭಾರತೀಯ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಬೇಸರದಿಂದಲೇ ಕುಸ್ತಿಗೆ ವಿದಾಯ ಹೇಳಿದ್ದಾರೆ. ಎಕ್ಸ್‌ ಖಾತೆಯಲ್ಲಿ ಭಾವುಕ ಸಾಲು ಬರೆದುಕೊಂಡು ನಿವೃತ್ತಿ ಘೋಷಿಸಿದರು. ಅಮ್ಮಾ, ನನ್ನ ವಿರುದ್ಧ ಕುಸ್ತಿ (Wrestling) ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಸಂಪೂರ್ಣ ಛಿದ್ರವಾಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ’ ಎಂದು ವಿನೇಶ್ ಫೋಗಟ್ ಬರೆದುಕೊಂಡಿದ್ದಾರೆ.

ಫೋಗಟ್‌ ಅನರ್ಹಗೊಂಡಿದ್ದು ಏಕೆ?
50 ಕೆಜಿ ಫ್ರಿಸ್ಟೈಲ್‌ ವಿಭಾಗದಲ್ಲಿ ಫೈನಲ್‌ ಪ್ರವೇಶಿಸಿದ್ದ ವಿನೇಶ್ ಫೋಗಟ್ ಈ ಬಾರಿ ಬಂಗಾರ ಗೆಲ್ಲಬಹುದು ಎಂದು ನಿರೀಕ್ಷೆ ಭಾರತೀಯರಿಗಿತ್ತು. ಪದಕ ಸುತ್ತಿನ ಪಂದ್ಯಕ್ಕೂ ಮುನ್ನ ದೇಹದ ತೂಕದಲ್ಲಿ ಕೇವಲ 100 ಗ್ರಾಂ ಅಧಿಕವಿದ್ದ ಕಾರಣದಿಂದ ಕುಸ್ತಿಪಟುವನ್ನು ಫೈನಲ್‌ನಿಂದ ಅನರ್ಹಗೊಳಿಸಲಾಯಿತು. ಇದಾದ ಒಂದು ದಿನದಲ್ಲೇ ವಿನೇಶ್ ಫೋಗಟ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: 1 ಕೆಜಿ ಜಾಸ್ತಿ ಎತ್ತಿದ್ದರೆ ಪದಕ – ಮೀರಾಬಾಯಿ ಚಾನುಗೆ ಕಂಚು ಜಸ್ಟ್‌ ಮಿಸ್‌! 

TAGGED:Nayab Saini BJPOlympic Silver MedalistParis Olympic 2024Vinesh Phogatನಯಾಬ್‌ ಸಿಂಗ್‌ ಸೈನಿಪ್ಯಾರಿಸ್‌ ಒಲಿಂಪಿಕ್ಸ್‌ವಿನೇಶ್ ಫೋಗಟ್ಹರಿಯಾಣ ಸರ್ಕಾರ
Share This Article
Facebook Whatsapp Whatsapp Telegram

Cinema Updates

Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
10 minutes ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
1 hour ago
Kamal Haasan 1
ʻಥಗ್‌ ಲೈಫ್‌ʼ ಸಿನಿಮಾಗೆ ಬ್ಯಾನ್‌ ಬಿಸಿ – ಹೈಕೋರ್ಟ್ ಮೆಟ್ಟಿಲೇರಿದ ಕಮಲ್ ಹಾಸನ್
2 hours ago
Ranjani Raghavan
ಕಮಲ್ ಹಾಸನ್‌ಗೆ ಕನ್ನಡದ ಪುಸ್ತಕ ನೀಡಿದ ರಂಜನಿ ರಾಘವನ್
2 hours ago

You Might Also Like

Heinrich Klaasen David Miller
Cricket

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಕ್ಷಿಣ ಆಫ್ರಿಕಾದ ದೈತ್ಯ ಬ್ಯಾಟರ್‌ ಕ್ಲಾಸೆನ್‌ ಗುಡ್‌ಬೈ

Public TV
By Public TV
46 seconds ago
Eshwar Khandre
Bengaluru City

150 ವರ್ಷದ ಬಳಿಕ ಬೆಂಗಳೂರಿನಲ್ಲಿ ಬೃಹತ್ ಜೈವಿಕ ಉದ್ಯಾನವನ ನಿರ್ಮಾಣ: ಈಶ್ವರ್ ಖಂಡ್ರೆ

Public TV
By Public TV
4 minutes ago
CRIME
Crime

ಪಂಜಾಬ್ ಪೊಲೀಸರ ಭರ್ಜರಿ ಕಾರ್ಯಾಚರಣೆ – 113 ಡ್ರಗ್ ಪೆಡ್ಲರ್‌ಗಳು ಅರೆಸ್ಟ್

Public TV
By Public TV
45 minutes ago
rcb 4
Cricket

ಈ ಬಾರಿ ಕಳೆಯಲಿದೆಯೇ ಫೈನಲ್‌ ಕಂಟಕ? – ಕಪ್‌ ಗೆದ್ದು ಅಭಿಮಾನಿಗಳಿಗೆ ಔತಣ ಕೊಡಲಿದೆಯೇ ಆರ್‌ಸಿಬಿ?

Public TV
By Public TV
53 minutes ago
Hamsalekha H.D Kumaraswamy
Bengaluru City

ಫೈನಲ್‌ನಲ್ಲಿ ಸೆಣೆಸಲಿರುವ ಆರ್‌ಸಿಬಿಗೆ ಗಣ್ಯರಿಂದ ಶುಭಾಶಯಗಳ ಮಹಾಪೂರ!

Public TV
By Public TV
55 minutes ago
H D Kumaraswamy
Automobile

ಟೆಸ್ಲಾಗೆ 2 ಶೋ ರೂಂ ತೆರೆಯುವ ಆಸಕ್ತಿ ಇದೆ, ಆದ್ರೆ ಭಾರತದಲ್ಲೇ ಕಾರು ಉತ್ಪಾದಿಸುವ ಆಸಕ್ತಿ ಇಲ್ಲ: ಹೆಚ್‌ಡಿಕೆ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?