ಚಂಡೀಗಢ: ವ್ಯಕ್ತಿಯೊಬ್ಬನ (Man) 2 ಕೈಗಳನ್ನು (Hand) ಕತ್ತರಿಸಿ ಅದನ್ನು ತೆಗೆದುಕೊಂಡು ಹೋದ ಘಟನೆ ಹರಿಯಾಣದ (Haryana) ಕುರುಕ್ಷೇತ್ರದಲ್ಲಿ ನಡೆದಿದೆ.
ಜುಗ್ನು ಹಲ್ಲೆಗೊಳಗಾದ ವ್ಯಕ್ತಿ. ಹತ್ತರಿಂದ ಹನ್ನೆರಡು ಮಂದಿ ಅಪರಿಚಿತರು ಮುಖ ಮುಚ್ಚಿಕೊಂಡು ಕುರುಕ್ಷೇತ್ರ ಹವೇಲಿಗೆ ನುಗ್ಗಿದ್ದರು. ಈ ವೇಳೆ ಅಲ್ಲೇ ಇದ್ದ ಜುಗ್ನು ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಆತನ 2 ಕೈಗಳನ್ನು ಕತ್ತರಿಸಿದ್ದಾರೆ. ಅಷ್ಟಕ್ಕೆ ತೃಪ್ತರಾಗದ ಅವರು ಅದನ್ನು ತೆಗೆದುಕೊಂಡು ಹೋಗಿದ್ದಾರೆ.
ಈ ವೇಳೆ ರಕ್ತದ ಮಡುವಿನಲ್ಲಿ ಮಲಗಿದ್ದ ಜಗ್ನುನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಈತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆ ಆಗಿಲ್ಲ ಎಂದು ಕಿಚಾಯಿಸಿದ ಸ್ನೇಹಿತನ ಕೊಲೆ
ಘಟನೆಗೆ ಸಂಬಂಧಿಸಿದಂತೆ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶಿಲಿಸಲಾಗುತ್ತಿದ್ದು, ಇನ್ನೂ ಘಟನೆಯ ಹಿಂದಿನ ನಿಖರವಾದ ಕಾರಣ ಸ್ಪಷ್ಟವಾಗಿಲ್ಲ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಮಾವತಿ ದಡದಲ್ಲಿ ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k