ಬೆಂಗಳೂರು: ನಟ ಹಾಗೂ ಸಾಮಾಜಿಕ ಹೋರಾಟಗಾರರೂ ಆಗಿರುವ ಚೇತನ್ ಅಹಿಂಸಾ (Chetan Kumar) ಒಂದಿಲ್ಲೊಂದು ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಇದರಿಂದ ಜಾಲತಾಣದಲ್ಲಿ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತಾರೆ. ಇದೀಗ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಪ್ರಮಾಣವಚನ ಸ್ವೀಕರಿದ ವಿಚಾರವನ್ನೂ ಟೀಕಿಸಿದ್ದಾರೆ.
- Advertisement 2
ಶನಿವಾರ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದರು. ಈ ಕಾರ್ಯಕ್ರಮದಲ್ಲಿ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನು ಪ್ರಶ್ನಿಸಿ ನಟ ಚೇತನ್ ಫೇಸ್ಬುಕ್ ಪುಟದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ
- Advertisement 3
- Advertisement 4
‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ – ಮುಂದಿನ ಕ್ಯಾಬಿನೆಟ್ನಲ್ಲಿ ಆದೇಶ
ಸತೀಶ್ ಜಾರಕಿಹೊಳಿ ಅವರನ್ನೂ ಟೀಕಿಸಿದ್ದು, ಶಾಸಕ ಸತೀಶ ಜಾರಕಿಹೊಳಿ ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ? ಎಂದು ಪ್ರಶ್ನಿಸಿದ್ದಾರೆ.