– ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸಿ, ಸಮಸ್ಯೆಗೆ ಸ್ಪಂದಿಸುವ ವ್ಯವಧಾನ ಇಲ್ಲ
ಬೆಂಗಳೂರು: ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಐದು ವರ್ಷ ಕಾಲ ಸಿದ್ದರಾಮಯ್ಯ ಅವರೇ ಸಿಎಂ ಎಂದಿದ್ದಾರೆ. ರಾಹುಲ್, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಕಾಂಗ್ರೆಸ್ಸಿನ ಹೈಕಮಾಂಡೇ ಅಥವಾ ಯತೀಂದ್ರ ಸಿದ್ದರಾಮಯ್ಯ ಅವರೇ ಹೈಕಮಾಂಡ್ ಆಗಿದ್ದಾರಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿವೈ ವಿಜಯೇಂದ್ರ (BY Vijayendra) ಪ್ರಶ್ನಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಪೈಪೋಟಿ ನಡೆಯುತ್ತಿದ್ದು, ಸದ್ಯದಲ್ಲಿ ಈ ಸಮಸ್ಯೆ ಬಗೆಹರಿಯುವುದಿಲ್ಲ. ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ಸಾಧ್ಯವಾದರೆ ಇದನ್ನು ಮುಂದೂಡಿ ಎಂದು ತಿಳಿಸಿದ್ದೆ. ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ನಾಡಿನ ಕೃಷಿಕರು, ರೈತರ, ಬಡವರ, ನೇಕಾರರ ಸಮಸ್ಯೆ ಸೇರಿ ಜ್ವಲಂತ ಸಮಸ್ಯೆಗಳ ಚರ್ಚೆ ಆಗಬೇಕೆಂದು ಮುಖ್ಯಮಂತ್ರಿಗಳಿಗೆ ಅಧಿವೇಶನ ಆರಂಭಕ್ಕೂ ಮೊದಲೇ ಗಮನ ಸೆಳೆದಿದ್ದೆ ಎಂದು ಹೇಳಿದರು. ಇದನ್ನೂ ಓದಿ: ಮೆಸ್ಸಿ ಕಾರ್ಯಕ್ರಮದಲ್ಲಿ ದಾಂಧಲೆ – ಆಯೋಜಕ ಸತಾದೃ ದತ್ತಾ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಮುಖ್ಯಮಂತ್ರಿ ವಿಷಯದಲ್ಲಿ ಪೈಪೋಟಿ ಹೆಚ್ಚಾಗಿದೆ. ಸಿದ್ದರಾಮಯ್ಯ ಅವರು ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಹೇಳುತ್ತಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿಗೆ ಬಂದಾಗ ಒಂದು ರೀತಿ ನಿಸ್ಸಹಾಯಕರಾಗಿ ಮಾತನಾಡಿದ್ದಾಗಿ ಗಮನ ಸೆಳೆದರು. ಇವರ ಗೊಂದಲದಿಂದ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದುಬಿದ್ದಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಪಾಕಿಸ್ತಾನ ಪರ ಸ್ಪೈ – ವಾಯುಪಡೆಯ ನಿವೃತ್ತ ಅಧಿಕಾರಿ ಅಸ್ಸಾಂನಲ್ಲಿ ಬಂಧನ
ನಾಯಕತ್ವ ಸಮಸ್ಯೆ ಪರಿಹರಿಸಿಕೊಂಡ ನಂತರವೇ ಅಧಿವೇಶನ ನಡೆಸಿ. ಆಗ ಮಾತ್ರ ರೈತರ ಸಮಸ್ಯೆ, ಎಲ್ಲ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬಹುದೆಂದು ಹೇಳಿದ್ದೆವು. ಆಡಳಿತ ಪಕ್ಷ ಮತ್ತು ಸಚಿವರಿಗೆ ವಿಪಕ್ಷ ನಾಯಕರ ಮಾತನ್ನು ಆಲಿಸುವ ಮತ್ತು ಸಮಸ್ಯೆಗೆ ಸ್ಪಂದಿಸಬೇಕೆಂಬ ವ್ಯವಧಾನವೂ ಇಲ್ಲದೇ ಇರುವುದು ನಿಜವಾಗಲೂ ದುರ್ದೈವ ಎಂದು ಟೀಕಿಸಿದರು. ಇದನ್ನೂ ಓದಿ: ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು – ಸಮಾವೇಶ ನೆಪದಲ್ಲೇ ಹೈಕಮಾಂಡ್ ಭೇಟಿ ಮಾಡ್ತಾರಾ?
ಪರಸ್ಪರ ಕತ್ತಿ ಮಸೆಯುವ ಸಿಎಂ, ಡಿಸಿಎಂ:
ಎರಡು ವರ್ಷಗಳಿಂದ ಒಗ್ಗಟ್ಟಿನ ಮಂತ್ರ ಜಪಿಸುತ್ತಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು, ಒಬ್ಬರಿಗೆ ಒಬ್ಬರು ಕತ್ತಿ ಮಸೆಯುತ್ತಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದ ಮೇಲೆ ಆಗುತ್ತಿದೆ. ಮುಖ್ಯಮಂತ್ರಿಗಳ ವಿಚಾರ ಕಾಂಗ್ರೆಸ್ಸಿನ ಆಂತರಿಕ ವಿಚಾರವಲ್ಲ, ಅವರು ರಾಜ್ಯಕ್ಕೆ ಮುಖ್ಯಮಂತ್ರಿ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ
ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥ ಆಗಿಲ್ಲ:
ರಾಜ್ಯದಲ್ಲಿ 54 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳ ಬೆಳೆಗಾರರು ಖರೀದಿ ಕೇಂದ್ರ ಪ್ರಾರಂಭಕ್ಕೆ ಒತ್ತಾಯಿಸುತ್ತಿದ್ದಾರೆ. ಕೇಂದ್ರ ಸರ್ಕಾರ 2,400 ರೂ. ಬೆಂಬಲ ಬೆಲೆ ನಿಗದಿಪಡಿಸಿದರೂ ಸೂಕ್ತ ಸಮಯದಲ್ಲಿ ಖರೀದಿ ಕೇಂದ್ರ ಪ್ರಾರಂಭಿಸಿಲ್ಲ. ರೈತರು ಮೆಕ್ಕೆಜೋಳವನ್ನು 1,700- 1,600 ರೂ.ಗೆ ದಲ್ಲಾಳಿಗಳಿಗೆ, ಮಧ್ಯವರ್ತಿಗಳಿಗೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ. ಬೆಳೆ ಪರಿಹಾರವನ್ನು ಘೋಷಿಸಿ 3 ತಿಂಗಳಾದರೂ ಸಮರ್ಪಕವಾಗಿ ಕೊಟ್ಟಿಲ್ಲ. ಭೀಕರ ಮಳೆಯಿಂದ ರಾಜ್ಯದಲ್ಲಿ ರಸ್ತೆಗಳು ಗುಂಡಿಗಳಿಂದ ತುಂಬಿಕೊಂಡಿವೆ. ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ, ಭ್ರಷ್ಟಾಚಾರ ಮಿತಿ ಮೀರಿದೆ. ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ದೂರಿದರು. ಇದನ್ನೂ ಓದಿ: 2ನೇ ಗಂಡನನ್ನು ಬಿಟ್ಟು ಕಾನ್ಸ್ಟೇಬಲ್ ಜೊತೆ ಮಹಿಳೆ ಎಸ್ಕೇಪ್ – ಪೇದೆ ಅಮಾನತು

