ಗರ್ಭಗುಡಿ ಬಾಗಿಲು ಮುರಿದು ದೇವರ ಆಭರಣ ದೋಚಿದ ಕಳ್ಳರು

Public TV
1 Min Read
collage hsn

ಹಾಸನ: ಗರ್ಭಗುಡಿಯ ಬಾಗಿಲು ಮುರಿದ ಕಳ್ಳರು ದೇವರ ಆಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆರೆಕೋಡಿಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ.

ಈ ಘಟನೆ ತಡರಾತ್ರಿ ನಡೆದಿದ್ದು, ಗ್ರಾಮದ ಹೊರಭಾಗದಲ್ಲಿ ಇರುವ ಚೋಣುರಯ್ಯ ದೇವಾಲಯದ ಗರ್ಭಗುಡಿಯ ಬಾಗಿಲು ಒಡೆದು ಆಭರಣ ದೋಚಿ ಪರಾರಿಯಾಗಿದ್ದಾರೆ. ಬೆಳಗ್ಗೆ ದೇವಸ್ಥಾನದ ಪೂಜಾರಿಯಾದ ಮಹದೇವ್ ಅವರು ದೇವಾಲಯಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

collage hsn 2

ದೇವಸ್ಥಾನದ ಬೀಗವನ್ನು ಬ್ಲೇಡ್ ಉಪಯೋಗಿಸಿ ಕಟ್ ಮಾಡಿರುವ ಕಳ್ಳರು ನಂತರ ಗರ್ಭಗುಡಿಯ ಬಾಗಿಲನ್ನು ಮುರಿದು ಸುಮಾರು ಒಂದು ಲಕ್ಷ ಬೆಲೆ ಬಾಳುವ ದೇವರ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಇತ್ತೀಚಿಗೆ ಈ ಭಾಗದಲ್ಲಿ ಕಳ್ಳತನ ಪ್ರಕರಣಗಳು ಜಾಸ್ತಿಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *