ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಸ್ಥಗಿತ

Public TV
1 Min Read
HSN GUDDA KUSITHA 3

ಹಾಸನ: ಮಂಗಳೂರು-ಬೆಂಗಳೂರು ನಡುವಿನ ರೈಲು ಮಾರ್ಗದಲ್ಲಿ ಇಂದು ಗುಡ್ಡ ಕುಸಿದ ಪರಿಣಾಮ ತಾತ್ಕಾಲಿಕವಾಗಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

HSN GUDDA KUSITHA 2

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವ್ಯಾಪ್ತಿಯಲ್ಲಿರುವ ಶಿರುವಾಗಿಲು ಬಳಿ ಮಳೆ ಕಾರಣ ಇಂದು ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತ ಕಂಡುಬಂದಿದೆ. ಮಾರ್ಗದ 86ನೇ ಮೈಲಿಯ ಸಮೀಪದಲ್ಲಿ ಇರುವ ರೈಲ್ವೆ ಸುರಂಗದ ಬಳಿ ಮಣ್ಣು ಕುಸಿಯುತ್ತಿದ್ದು ರೈಲ್ವೆ ಕಾರ್ಮಿಕರು ತೆರವು ಕಾರ್ಯ ಮುಂದುವರಿಸಿದ್ದಾರೆ.

HSN GUDDA KUSITHA AV 4

ಸದ್ಯ ಯಾವುದೇ ಅಪಾಯ ಇಲ್ಲ ಎಂದು ರೈಲ್ವೆ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದು, ರೈಲು ಸಂಚಾರ ಶೀಘ್ರ ಆರಂಭವಾಗುವುದಾಗಿ ಮಾಹಿತಿ ನೀಡಿದ್ದಾರೆ. ಕಳೆದ ವರ್ಷವೂ ಇದೇ ಭಾಗದಲ್ಲಿ ಭಾರೀ ಭೂ ಕುಸಿತ ಉಂಟಾಗಿ ರೈಲು ಮಾರ್ಗವನ್ನು ತಿಂಗಳ ಕಾಲ ಸ್ಥಗಿತಗೊಳಿಸಲಾಗಿತ್ತು. ಇಷ್ಟಾದರೂ ಸಹ ಈ ಕುರಿತು ಅಧಿಕಾರಿಗಳು ಹಾಗೂ ರಾಜಕಾರಣಿಗಳು ನಿರ್ಲಕ್ಷ್ಯವಹಿಸಿದ್ದು, ಗುಡ್ಡ ಕುಸಿತದಿಂದ ಸುರಕ್ಷತೆಯ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *