ಹಾಸನ: ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ.ಶಿವಲಿಂಗೇಗೌಡ ಗದೆ ಹಿಡಿದು ಭೀಮನ ಪಾತ್ರದ ಡೈಲಾಗ್ ಹೊಡೆದು ಆಭಿಮಾನಿಗಳನ್ನು ರಂಜಿಸಿದ್ದಾರೆ.
ತಾಲೂಕಿನ ಬಾಗೇಶಪುರ ಎಂಬ ಗ್ರಾಮದಲ್ಲಿ ನಡೆದ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ಕುರುಕ್ಷೇತ್ರ ನಾಟಕದಲ್ಲಿ ಗದೆ ಹಿಡಿದು ಭೀಮನ ಪಾತ್ರದಲ್ಲಿ ಕೆ.ಎಂ.ಶಿವಲಿಂಗೇಗೌಡ ಅವರು ಘರ್ಜಿಸಿದ್ದಾರೆ.
ಈ ಜಾತ್ರಾ ಮಹೋತ್ಸವಕ್ಕೆ ಕೆ.ಎಂ.ಶಿವಲಿಂಗೇಗೌಡ ಅವರನ್ನು ಮುಖ್ಯ ಆತಿಥಿಯಾಗಿ ಆಹ್ವಾನ ನೀಡಲಾಗಿತ್ತು. ಆ ಜಾತ್ರೆಯ ಪ್ರಯುಕ್ತ ಕುರುಕ್ಷೇತ್ರ ನಾಟಕವನ್ನು ಗ್ರಾಮಸ್ಥರು ಆಯೋಜಿಸಿದ್ದರು. ಜಾತ್ರೆಯಲ್ಲಿ ಭಾಗವಹಿಸಿದ ಶಾಸಕರು ನಂತರ ವೇದಿಕೆಯ ಮೇಲೆ ಹೋಗಿ ಗದೆ ಹಿಡಿದು ಭೀಮನ ಡೈಲಾಗ್ ಹೊಡೆದು ಜನರನ್ನು ರಂಜಿಸಿದ್ದಾರೆ. ತಮ್ಮ ನೆಚ್ಚಿನ ಶಾಸಕರು ಅಭಿನಯ ನೋಡಿದ ಊರಿನ ಗ್ರಾಮಸ್ಥರು ಮತ್ತು ಆಭಿಮಾನಿಗಳು ಶಿಳ್ಳೆ ಚಪ್ಪಾಳೆ ಹೊಡೆದರು.