ನಿಗದಿತಕ್ಕಿಂತ ಹೆಚ್ಚಿನ ದರಕ್ಕೆ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಮಾಡ್ಬೇಡಿ: ಪ್ರೀತಂಗೌಡ

Public TV
1 Min Read
HSN 3

ಹಾಸನ: ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಮಾಡದಂತೆ ಶಾಸಕ ಪ್ರೀತಂಗೌಡ ಸೂಚನೆ ನೀಡಿದ್ದಾರೆ.

ಸರ್ಕಾರಿ ಕಚೇರಿ, ಬ್ಯಾಂಕ್ ಸೇರಿದಂತೆ ಇನ್ನಿತರ ಸಾರ್ವಜನಿಕ ಸ್ಥಳಗಳಲ್ಲಿ ಜನರು ಸ್ಯಾನಿಟೈಸರ್ ಬಳಸುವಾಗ ನೇರವಾಗಿ ಸ್ಯಾನಿಟೈಸರ್ ಬಾಟಲ್ ಮುಟ್ಟದಂತೆ ಹ್ಯಾಂಡ್ ಫ್ರೀ ಸ್ಯಾನಿಟೈಸರ್ ಸ್ಟ್ಯಾಂಡ್ ವಿತರಿಸಿದರು. ಬಳಿಕ ಮಾತನಾಡಿದ ಅವರು, ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಆಲೂಗೆಡ್ಡೆ ಬಿತ್ತನೆ ಬೀಜದ ವ್ಯಾಪಾರ ಇಂದಿನಿಂದ ಆರಂಭವಾಗಿದ್ದು, ಕೊರೊನಾ ಹಿನ್ನೆಲೆಯಲ್ಲಿ ಹಾಸನ ಎಪಿಎಂಸಿ ಮಾರುಕಟ್ಟೆಯೊಳಗೆ ಪ್ರವೇಶ ಮಾಡುವ ವಾಹನಗಳಿಗರ ಕಟ್ಟುನಿಟ್ಟಿನ ನಿಯಮ ಜಾರಿಗೊಳಿಸಲಾಗಿದ್ದು ಎಲ್ಲರೂ ಅದನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

HSN 2

ಕೊರೊನಾ ಹಿನ್ನೆಲೆಯಲ್ಲಿ ಎಪಿಎಂಸಿ ಮಾರುಕಟ್ಟೆಯೊಳಗೆ ಜನಜಂಗುಳಿ ನಿಯಂತ್ರಿಸಲು ಆಲೂಗೆಡ್ಡೆ ಬಿತ್ತನೆ ಬೀಜ ತುಂಬಿಕೊಂಡು ಬರುವ ಲಾರಿಗಳಿಗೆ ಸಂಜೆ 7ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಾತ್ರ ಮಾರುಕಟ್ಟೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಆ ನಂತರ ಬೆಳಗ್ಗೆ ರೈತರು ಮಾರುಕಟ್ಟೆಗೆ ಬಂದು ಬಿತ್ತನೆ ಬೀಜ ಖರೀದಿಸಬಹುದು ಎಂದರು.

ರೈತರು ಬಿತ್ತನೆ ಬೀಜ ತೆಗೆದುಕೊಂಡು ಹೋಗಲು ಟ್ರ್ಯಾಕ್ಟರ್ ಮತ್ತು ಆಟೋ ಬಳಸಬಹದು. ಪ್ರತಿ ಕ್ವಿಂಟಾಲ್ ಬಿತ್ತನೆ ಬೀಜಕ್ಕೆ 2150 ರಿಂದ 2250 ರೂಪಾಯಿ ದರ ನಿಗದಿ ಮಾಡಲಾಗಿದ್ದು ಇದಕ್ಕಿಂತ ಹೆಚ್ಚಿನ ದರಕ್ಕೆ ಬಿತ್ತನೆ ಬೀಜ ಮಾರುವಂತಿಲ್ಲ ಎಂದು ಶಾಸಕ ಪ್ರೀತಂಗೌಡ ಖಡಕ್ಕಾಗಿ ನುಡಿದಿದ್ದಾರೆ.

HSN 1

Share This Article
Leave a Comment

Leave a Reply

Your email address will not be published. Required fields are marked *