ಚುನಾವಣೆ ಹೊಸ್ತಿಲಲ್ಲಿ ಆಡಳಿತ ಯಂತ್ರಕ್ಕೆ ಸರ್ಜರಿ- ಹಾಸನ, ಮೈಸೂರು ಡಿಸಿಗಳ ಎತ್ತಂಗಡಿ

Public TV
1 Min Read
DC

ಬೆಂಗಳೂರು: ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ರಾಜ್ಯದ ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

rohini sindhuri 4

ಹಾಸನ ಡಿಸಿ ರೋಹಿಣಿ ಸಿಂಧೂರಿ, ಮೈಸೂರು ಡಿಸಿ ರಂದೀಪ್, ಬೆಂಗಳೂರು ನಗರ ಡಿಸಿ ಶಂಕರ್ ಸೇರಿದಂತೆ ಹಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರೋಹಿಣಿ ಸಿಂಧೂರಿಯವರನ್ನು ಉದ್ಯೋಗ ತರಬೇತಿ ಆಯುಕ್ತೆಯಾಗಿ ವರ್ಗ ಮಾಡಲಾಗಿದ್ದು, ಹಾಸನ ಡಿಸಿಯಾಗಿ ಮೈಸೂರಿನ ಡಿಸಿಯಾಗಿದ್ದ ರಂದೀಪ್‍ರನ್ನು ನೇಮಿಸಲಾಗಿದೆ.

cm siddaramaiah 2

ಮೈಸೂರಿಗೆ ನೂತನ ಡಿಸಿಯಾಗಿ ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಿದೆ. ಬೆಂಗಳೂರು ಜಿಲ್ಲಾಧಿಕಾರಿಯಾಗಿ ದಯಾನಂದ, ವಿಜಯಪುರ ಜಿಲ್ಲಾಧಿಕಾರಿಯಾಗಿ ಶೆಟ್ಟಣ್ಣನವರ್, ರಾಮನಗರ ಜಿಲ್ಲಾಧಿಕಾರಿಯಾಗಿ ಕ್ಯಾಪ್ಟನ್ ರಾಜೇಂದ್ರ, ಯುವಜನ ಸೇವೆ ಆಯುಕ್ತೆಯಾಗಿ ಮಮತಾ, ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ಕಾವೇರಿ ವರ್ಗಾವಣೆ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

Share This Article
Leave a Comment

Leave a Reply

Your email address will not be published. Required fields are marked *