ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು.. ಇದೇ ಜಾಗದಲ್ಲಿ ನನ್ನ ಮಗನನ್ನ ಮಲಗಿಸಿದ್ದೇನೆ… ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು, ಈಗ ಇಲ್ಲೇ ಮಲಗಿಸಿದ್ದೀನಿ.. ಯಾರಿಗೂ ಈ ಪರಿಸ್ಥಿತಿ ಬೇಡ… ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ (Chinnaswamy Stadium) ಬಳಿ ನಡೆದ ಕಾಲ್ತುಳಿತದಲ್ಲಿ (Stampede) ಪ್ರಾಣ ಕಳೆದುಕೊಂಡ ಆರ್ಸಿಬಿ ಅಭಿಮಾನಿ ಭೂಮಿಕ್ ತಂದೆಯ ಆಕ್ರಂದನ ನುಡಿಗಳಿವು…
ಹೌದು. ಘಟನೆ ನಡೆದು ಮೂರು ದಿನ ಕಳೆದಿದೆ. ಆದ್ರೆ ಹೆತ್ತವರ ಆಕ್ರಂತಕ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಕ್ಕಳನ್ನು ನೆನೆದು ಗೋಳಿಡುತ್ತಲೇ ಇದ್ದಾರೆ. ಅದೇ ರೀತಿ ಮೃತ ಎಂಜಿನಿಯರಿಂಗ್ ವಿದ್ಯಾರ್ಥಿ ಭೂಮಿಕ್ ತಂದೆ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದ ಡಿ.ಟಿ ಲಕ್ಷ್ಮಣ್ ಮಗನ ಸಮಾಧಿ ಮೇಲೆ ಮಲಗಿ ಗೋಳಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರು | ಸೂಟ್ಕೇಸ್ನಲ್ಲಿ ಬಾಲಕಿ ಶವ ಪತ್ತೆ ಪ್ರಕರಣ – ಬಿಹಾರದಲ್ಲಿ 7 ಆರೋಪಿಗಳು ಅರೆಸ್ಟ್
ಈ ಥರ ಪರಿಸ್ಥಿತಿ ಬೇರೆ ಯಾವ ತಂದೆ ತಾಯಿಗೂ ಬರಬಾರದು… ನನ್ನ ಮಗನನ್ನ ಇಲ್ಲೇ ಮಲಗಿಸಿದ್ದೀನಿ… ನನ್ನ ಮಗನ ಜೊತೆ ಮಲಗ್ತೀನಿ… ನನ್ನ ಮಗನ ಜೊತೆ ಮಲಗ್ತೀನಿ… ನನ್ನ ಮಗ ಇನ್ನೂ ಮಲಗಿದ್ದಾನೆ… ಯರ್ಯಾರ್ ಬ್ಯಾಡ್ ಕಾಮೆಂಟ್ ಮಾಡೀರಾ ಅರ್ಥ ಮಾಡ್ಕೊಳ್ಳಿ ಅವರ ತಂದೆ ಪರಿಸ್ಥಿತಿ ಅಂತ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಕಠುಕರಿಗೂ ಕಣ್ಣೀರು ತರಿಸುವಂತಿದೆ. ಇದನ್ನೂ ಓದಿ: ಭಯೋತ್ಪಾದನೆ ನಿರ್ಮೂಲನೆ ಮಾಡಿ, ಜೈಶ್ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್ಗೆ ಅಮೆರಿಕ ವಾರ್ನಿಂಗ್
ಮೃತಪಟ್ಟ ಭೂಮಿಕ್ ಯಾರು?
ಭೂಮಿಕ್ ಡಿ.ಟಿ.ಲಕ್ಷ್ಮಣ-ಅಶ್ವಿನಿ ದಂಪತಿಯ ಏಕೈಕ ಪುತ್ರ. ಕಳೆದ ಇಪ್ಪತ್ತು ವರ್ಷಗಳಿಂದ ಡಿ.ಟಿ.ಲಕ್ಷ್ಮಣ ಕುಟುಂಬಸ್ಥರು ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಡಿ.ಟಿ.ಲಕ್ಷ್ಮಣ ಬೆಂಗಳೂರಿನಲ್ಲಿ ಸಣ್ಣ ಕೈಗಾರಿಕೆ ನಡೆಸುತ್ತಿದ್ದಾರೆ. ಭೂಮಿಕ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ಓದುತ್ತಿದ್ದು ಬುಧವಾರ ಕೂಡ ಕಾಲೇಜಿಗೆ ತೆರಳಿದ್ದರು. ನಂತರ ಸ್ನೇಹಿತರ ಜೊತೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿದ್ದು, ಕಾಲ್ತುಳಿತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ರಾಜ್ಕುಮಾರ್ ತೀರಿಕೊಂಡಾಗ 4 ಜನಕ್ಕೆ ಗುಂಡು ಹೊಡೆಸಿದ್ರು, ಆಗ ಕುಮಾರಸ್ವಾಮಿ ರಾಜೀನಾಮೆ ಕೊಟ್ರಾ? – ಬೇಳೂರು ಗೋಪಾಲಕೃಷ್ಣ
ಏನಾಗಿತ್ತು?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್ಎಎಲ್ ಏರ್ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.
ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.