ಹಾಸನ: ಪ್ರೀತಿಗೆ ಕುಟುಂಬಸ್ಥರ ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾದ ಘಟನೆ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.
ಕೊಡಗು ಮೂಲದ ಪ್ರವೀಣ್ (25) ಹಾಗೂ ಪಲ್ಲವಿ (20) ಮೃತ ಪ್ರೇಮಿಗಳು. ಸಕಲೇಶಪುರ ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
- Advertisement 2
- Advertisement 3
ಪ್ರವೀಣ್ ಹಾಗೂ ಪಲ್ಲವಿ ಕಳೆದ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇದಕ್ಕೆ ಕುಟುಂಬಸ್ಥರು ವ್ಯಕ್ತಪಡಿಸಿದ್ದರು. ಇದರಿಂದಾಗಿ ಎರಡು ದಿನಗಳ ಹಿಂದೆ ಮನೆಬಿಟ್ಟಿದ್ದ ಪ್ರೇಮಿಗಳು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
- Advertisement 4
ಅಯ್ಯಪ್ಪಸ್ವಾಮಿ ದೇವಾಲಯದ ಬಳಿಯ ಕೆರೆಯಲ್ಲಿ ಮೃತಗಳು ತೇಲುತ್ತಿದ್ದನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಸಕಲೇಶಪುರ ಗ್ರಾಮಾಂತರ ಪೊಲೀಸರು ಮೃತದೇಹಗಳನ್ನು ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.