Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತ ಹಾಕಿ ತಂಡದಲ್ಲಿ ಹಾಸನದ ಶೇಷೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಭಾರತ ಹಾಕಿ ತಂಡದಲ್ಲಿ ಹಾಸನದ ಶೇಷೇಗೌಡ

Districts

ಭಾರತ ಹಾಕಿ ತಂಡದಲ್ಲಿ ಹಾಸನದ ಶೇಷೇಗೌಡ

Public TV
Last updated: May 14, 2022 8:06 am
Public TV
Share
2 Min Read
hockey hassan sheshe gowda
SHARE

ಹಾಸನ: ಜಾವಗಲ್ ಶ್ರೀನಾಥ್, ಡೇವಿಡ್ ಜಾನ್ಸನ್‍ರಂತಹ ಪ್ರತಿಭೆಗಳು ಭಾರತದ ಕ್ರಿಕೆಟ್ ತಂಡದಲ್ಲಿ ಆಡಿ ಜಿಲ್ಲೆಗೆ ಕೀರ್ತಿ ತಂದಿದ್ದು ಇತಿಹಾಸ. ಈಗ ಹಾಕಿ ಕ್ರೀಡೆಯಲ್ಲಿಯೂ ಅಂತದ್ದೇ ಸಂಭ್ರಮ ದಿನಗಳು ಪ್ರಾರಂಭಗೊಡಿವೆ.

ಹೌದು ಹಾಸನ ನಗರದ ಬೀರನ ಹಳ್ಳಿಕೆರೆಯ ಪ್ರತಿಭೆ ಶೇಷೇಗೌಡ ಮೇ 23 ರಿಂದ ಜೂನ್ 1 ರವರೆಗೆ ಇಂಡೋನೇಷಿಯಾದ ಜಕಾರ್ತಾದಲ್ಲಿ ನಡೆಯುವ ಏಷ್ಯನ್ ಹಾಕಿ ಕ್ರೀಡಾ ಕೂಟದಲ್ಲಿ ಭಾಗವಹಿಸಲು ರಾಷ್ಟ್ರೀಯ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹಾಕಿ ಕ್ರೀಡೆಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸುತ್ತಿರುವ ಜಿಲ್ಲೆಯ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

hockey hassan sheshe gowda 2

ಬಾಲ್ಯದಲ್ಲೆ ನಿರೀಕ್ಷೆ ಮೂಡಿಸಿದ್ದ ಹುಡುಗ: ಈ ಹುಡಗ ಪ್ರತಿಭಾವಂತ, ಅದ್ಬುತ ಆಟಗಾರ, ಒಂದಲ್ಲ ಒಂದು ದಿನ ದೇಶಕ್ಕಾಗಿ ಆಟ ಆಡೇ ಆಡುತ್ತಾನೆ. ಹೀಗಂತ ಹಾಕಿ ತರಬೇತುದಾರರಾದ ರವೀಶ್, ಹಿರಿಯ ಆಟಗಾರರಾದ ಮಧು, ತಾರನಾಥ್ ಪದೇ ಪದೇ ಹೇಳುತ್ತಿದ್ದರು. ಅವರ ಆತ್ಮವಿಶ್ವಾಸಕ್ಕೆ ಇಂಬು ನೀಡುವಂತೆ ಆ ಯುವಕ ಕೆಲವು ತಿಂಗಳ ಹಿಂದೆ ರಾಷ್ಟ್ರೀಯ ತಂಡದ ಆಯ್ಕೆ ಕ್ಯಾಂಪ್ ಸೇರಿ ಸುದ್ದಿ ಮಾಡಿದ್ದ. ನಿರೀಕ್ಷೆ ಹುಸಿಯಾಗಲಿಲ್ಲ ಶೇಷೇಗೌಡರವರು ಈಗ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶೇಷೇಗೌಡರ ಈವರೆಗಿನ ಕ್ರೀಡಾ ಸಾಧನೆ: ಸೀನಿಯರ್ ರಾಷ್ಟ್ರೀಯ ಕ್ರೀಡಕೂಟ 2017 ಮತ್ತು 2019ರಲ್ಲಿ ಚಿನ್ನ, 2021ರಲ್ಲಿ ಬೆಳ್ಳಿ, 2018ರಲ್ಲಿ ಕಂಚಿನ ಪದಕ ಗೆದ್ದಿರುವ ಶೇಷೆಗೌಡ, 2014ರಲ್ಲಿ ಆಲ್ ಇಂಡಿಯಾ ಯೂನಿವರ್ಸಿಟಿ ಕ್ರೀಡಾಕೂಟದಲ್ಲಿ ಚಿನ್ನ, 2011ರಲ್ಲಿ ನಡೆದ 17 ವರ್ಷದೊಳಗಿನ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

hockey hassan sheshe gowda 1

ಬಡತನದಲ್ಲಿ ಅರಳಿದ ಪ್ರತಿಭೆ: ಹಾಸನ ನಗರದ ಬೀರನಹಳ್ಳಿಯ ಕೆರೆಯ ರಾಘವೇಂದ್ರ ಕಾಲೋನಿಯ, ಗಾರೆ ಕೆಲಸ ಮಾಡುವ ಕಡು ಬಡಕುಟುಂಬದ ಮಹೇಶ್ ಹಾಗೂ ಅಡುಗೆ ಕೆಲಸದ ಕಮಲ ದಂಪತಿಯ ಮಗ ಶೇಷೇಗೌಡ. ಬಾಲ್ಯದಿಂದಲೇ ಹಾಕಿ ಆಟವನ್ನು ತನ್ನ ಉಸಿರಾಗಿಸಿಕೊಂಡು ಬೆಳೆದ ಬಾಲಕ, ತಂಗಿ ಕೋಮಲ ಕೂಡ ಹಾಕಿ ಆಟಗಾರರಾಗಿದ್ದು, ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಾಯಿ ಕ್ರೀಡಾ ಹಾಸ್ಟೆಲ್‍ನಲ್ಲಿ ಹಾಕಿ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಣ್ಣನ ಸಾಧನೆಗೆ ಅಪಾರ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆರೋಪಿ ನಾಗೇಶ್ ಬಂಧಿಸಿದ ಪೊಲೀಸರಿಗೆ ಆರಗ ಜ್ಞಾನೇಂದ್ರ ಧನ್ಯವಾದ

ಆಗಿನ್ನೂ ಕ್ರೀಡಾ ಹಾಸ್ಟೆಲ್ ಇಲ್ಲದ ದಿನಗಳು: 4ನೇ ತರಗತಿಯಲ್ಲಿಯೇ ಕ್ರೀಡಾಂಗಣಕ್ಕೆ ಬರುತಿದ್ದ ಬಾಲಕನ ಪ್ರತಿಭೆ ಗುರುತಿಸಿದ್ದ ತರಬೇತುದಾರರಾದ ರವೀಶ್, ಶೇಷೇಗೌಡರಿಗೆ ತರಬೇತಿ ನೀಡಿ ಕೊಡಗು ಜಿಲ್ಲೆಯ ಕ್ರೀಡಾ ವಸತಿ ಶಾಲೆಗೆ ಕಳುಹಿಸಲು ದಾರಿ ತೋರಿದರು.

hockey

ನಂತರ ಪ್ರಥಮ ಪಿಯುಸಿಯಿಂದ ಪದವಿವರೆಗೆ ಬೆಂಗಳೂರಿನ ಕ್ರೀಡಾ ಶಾಲಾ ವಸತಿ ನಿಲಯದಲ್ಲಿ ಇದ್ದು ತರಬೇತಿ ಪಡೆದು, ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಸಾಧನೆ ಮಾಡಿದ ಶೇಷೇಗೌಡರಿಗೆ, ರೈಲ್ವೆ ಇಲಾಖೆಯು ಕೈ ಬೀಸಿ ಕರೆದು, ಚೆಕಿಂಗ್ ಇನ್ಸ್‍ಪೆಕ್ಟರ್ ಹುದ್ದೆ ನೀಡಿತ್ತು. ಸರ್ಕಾರಿ ಉದ್ಯೋಗ ಸಿಕ್ಕಿತು ಸಾಕೆಂದು ಶೇಷೆಗೌಡ ವಿಶ್ರಮಿಸಲಿಲ್ಲ, ವೈಯಕ್ತಿಕ ಮೋಜಿಗೆ ಮನಸ್ಸು ಮಾಡಲಿಲ್ಲ. ರೈಲ್ವೇಸ್ ತಂಡಕ್ಕೆ ಆಡುತ್ತಾ, ದಣಿವರಿಯದಂತೆ ನಿರಂತರವಾಗಿ ಅಭ್ಯಾಸ ಮಾಡಿದರು. ಭಾರತ ಜರ್ಸಿ ಹಾಕಿ ಆಡುವ ಕನಸು ಕಾಣುತ್ತಾ ನನಸಾಗಿಸಲು ಬೆವರು ಹರಿಸಿದರು. ಇದನ್ನೂ ಓದಿ: ಬಿಜೆಪಿಯಿಂದ ಮಾತ್ರ ಭಾರತ ವಿಶ್ವಗುರುವಾಗಲು ಸಾಧ್ಯ: ಜೆಪಿ ನಡ್ಡಾ

ಅದರ ಫಲವಾಗಿ ಕಳೆದ ಆರು ತಿಂಗಳಿನಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ತಂಡದ ಆಯ್ಕೆ ಕ್ಯಾಂಪ್‍ನಲ್ಲಿ ಪಾಲ್ಗೊಂಡಿರುವ ಶೇಷೇಗೌಡ, ತಮ್ಮ ಕೌಶಲ್ಯದಿಂದಲೇ ಆಯ್ಕೆಗಾರರ ಗಮನ ಸೆಳೆದರು. ಏಷ್ಯಾ ಕ್ರೀಡಾಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸುವ ಅವಕಾಶ ದೊರೆಯಿತು. ಒಟ್ಟಾರೆಯಾಗಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಹಾಕಿ ತಂಡಕ್ಕೆ ಜಿಲ್ಲೆಯ ಪ್ರತಿಭೆ ಆಯ್ಕೆಯಾಗಿದ್ದಾರೆ.

TAGGED:hassanhockeyindiasheshe gowdaಭಾರತಶೇಷೇಗೌಡಹಾಕಿಹಾಸನ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Robert Vadra
Districts

ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ರಾಬರ್ಟ್ ವಾದ್ರಾ

Public TV
By Public TV
8 minutes ago
Jitendra Shelke
Latest

ನಾಸಿಕ್‌ ಸ್ವಯಂಘೋಷಿತ ದೇವಮಾನವನ ಆಪ್ತ ಸಹಾಯಕ, ಆತನ ಪತ್ನಿ ಅಪಘಾತದಲ್ಲಿ ದುರ್ಮರಣ

Public TV
By Public TV
14 minutes ago
arch collapses on people in manvi two children dead four women seriously injured
Crime

ನಾಟಕ ನೋಡುತ್ತಿದ್ದವರ ಮೇಲೆ ಕುಸಿದು ಬಿದ್ದ ಕಮಾನು – ಇಬ್ಬರು ಮಕ್ಕಳು ಸಾವು, ನಾಲ್ವರು ಮಹಿಳೆಯರಿಗೆ ಗಂಭೀರ ಗಾಯ

Public TV
By Public TV
19 minutes ago
Beluru Elephant
Districts

ಮೂರು ದಿನಗಳ ಆಪರೇಷನ್‌ ಯಶಸ್ವಿ – ನರಹಂತಕ ಕಾಡಾನೆ ಸೆರೆ

Public TV
By Public TV
54 minutes ago
Vinay Kulkarni Darshan
Bengaluru City

ಪರಪ್ಪನ ಅಗ್ರಹಾರದ ಕ್ವಾರಂಟೈನ್ ಸೆಲ್‌ನಲ್ಲಿ ವಿನಯ್ ಕುಲಕರ್ಣಿ, ಗ್ಯಾಂಗ್ – ದರ್ಶನ್ ಸೆಲ್‌ನ ಕೂಗಳತೆ ದೂರದಲ್ಲೇ ಇರೋ ಕೈದಿಗಳು

Public TV
By Public TV
56 minutes ago
Hyderbad Bus Fire
Latest

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ – ಸಿಬ್ಬಂದಿ ಸಮಯ ಪ್ರಜ್ಞೆಯಿಂದ ಬದುಕುಳಿದ 18ಕ್ಕೂ ಅಧಿಕ ಪ್ರಯಾಣಿಕರು

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?