ಹಾಸನ: ಜೆಡಿಎಸ್ನಲ್ಲಿ (JDS) ಭಿನ್ನಮತ ಸ್ಫೋಟಗೊಂಡಿದೆ. ಸೆ.13 ರಂದು ಹಾಸನದಲ್ಲಿ (Hassana) ನಡೆದಿದ್ದ ದಿ. ಮಾಜಿ ಶಾಸಕ ಎಚ್.ಎಸ್.ಪ್ರಕಾಶ್ ಹುಟ್ಟುಹಬ್ಬದ ಕಾರ್ಯಕ್ರಮದ ಬಗ್ಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ (H.D Revanna) ಬಹಿರಂಗವಾಗಿ ಆಕ್ರೋಶ ಹೊರಹಾಕಿದ್ದಾರೆ.
ಕಾರ್ಯಕ್ರಮದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಗರಂ ಆದ ಎಚ್.ಡಿ.ರೇವಣ್ಣ ಅದೇನು ಅಂತ ನನಗೆ ಗೊತ್ತಿಲ್ಲ. ನನಗೆ ಆ ವಿಷಯವೇ ಗೊತ್ತಿಲ್ಲ. ನನಗೆ ಅವರು ಯಾವ ವಿಷಯಕ್ಕೆ ಕಾರ್ಯಕ್ರಮ ಮಾಡಿದ್ದಾರೆ, ಅದೇನು ಅಂತ ಗೊತ್ತಿಲ್ಲ. ನನ್ನ ಜೊತೆ ಯಾರು ಫೋನ್ನಲ್ಲಿ ಮಾತನಾಡಿಲ್ಲ ಎಂದು ಫುಲ್ ಗರಂ ಆದರು. ಇದನ್ನೂ ಓದಿ: ಹರಿಯುವ ನೀರಿನಲ್ಲಿ ಸಿಲುಕಿದ ತಾಯಿ, ಮಗ – ಗುಜುರಿ ವ್ಯಾಪಾರಿಯಿಂದ ರಕ್ಷಣೆ
ಹಾಸನದಲ್ಲಿ ನಡೆದಿದ್ದ ದಿ.ಎಚ್.ಎಸ್.ಪ್ರಕಾಶ್ ಅವರ 71 ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, (H.DKumaraswamy) ಸಿ.ಎಂ.ಇಬ್ರಾಹಿಂ (C.M Ibrahim) ಹಾಗೂ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಎಚ್.ಪಿ.ಸ್ವರೂಪ್ಗೆ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಎಂದು ಪರೋಕ್ಷವಾಗಿ ಹೆಚ್ಡಿಕೆ ಹೇಳಿದ್ದರು. ಅಲ್ಲದೇ ರೇವಣ್ಣ ಜೊತೆ ಫೋನ್ನಲ್ಲಿ ಮಾತನಾಡಿದ್ದೇನೆ ಎಂದಿದ್ದರು. ಇದರಿಂದ ಕೆಂಡಾಮಂಡಲರಾಗಿರುವ ರೇವಣ್ಣ ಕಾರ್ಯಕ್ರಮದ ಬಗ್ಗೆ ಪ್ರಶ್ನೆ ಕೇಳುತ್ತಿದ್ದಂತೆ ಸಿಟ್ಟಿನಿಂದಲೇ ಮಾಧ್ಯಮಗೋಷ್ಠಿಯಿಂದ ಎದ್ದು ಹೋದರು. ಇದನ್ನೂ ಓದಿ: ನಾವು ಕತ್ತೆ ಕಾಯೋಕೆ ಇಲ್ಲಿ ಬಂದಿಲ್ಲ- ಸದನದಲ್ಲಿ ಮಾಧುಸ್ವಾಮಿ ಗರಂ