– ಸಂಚಾರಿ ಪೊಲೀಸರ ವಿರುದ್ಧ ಆರೋಪ
ಹಾಸನ: ಕರ್ತವ್ಯಕ್ಕೆ ತೆರಳುತ್ತಿದ್ದ ವಕೀಲ ಅಪಘಾತದಲ್ಲಿ ಸಾವನ್ನಪ್ಪಿದ್ದು, ಈ ಸಾವಿಗೆ ಸಂಚಾರಿ ಪೊಲೀಸರೇ ಕಾರಣ ಎಂದು ಅವರ ವಿರುದ್ಧ ವಕೀಲರು ಧಿಕ್ಕಾರ ಕೂಗಿ ಪ್ರತಿಭಟಿಸಿದ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನದ ಎನ್.ಆರ್.ವೃತ್ತದಲ್ಲಿ ಲಾರಿ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ತೆರಳುತ್ತಿದ್ದ ವಕೀಲ ನಜೀರ್ ಅಹಮದ್ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ಸಂಚಾರಿ ಪೊಲೀಸರ ಕರ್ತವ್ಯ ಲೋಪವೇ ಕಾರಣ ಎಂದು ಆರೋಪಿಸಿ ವಕೀಲರು ದಿಢೀರ್ ರಸ್ತೆ ತಡೆ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಇದನ್ನೂ ಓದಿ: ಜನರ ಬಳಿ ಸುಲಿಗೆ ಮಾಡ್ಕೊಂಡು ನಿಂತಿದ್ದೀರಾ?- ಅಧಿಕಾರಿಗಳಿಗೆ ರವೀಂದ್ರ ಶ್ರೀಕಂಠಯ್ಯ ಕ್ಲಾಸ್
ಘಟನೆಯನ್ನು ಖಂಡಿಸಿ ಎನ್.ಆರ್.ವೃತ್ತದಲ್ಲಿ ವಕೀಲರು ಸಂಚಾರಿ ಪೊಲೀಸರ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಪೊಲೀಸರು ಬಡ ರೈತರ ಬಳಿ ಲಂಚ ವಸೂಲಿ ಮಾಡುವುದರಲ್ಲಿ ನಿರತರಾಗಿದ್ದರು. ಆದರೆ ಅವರು ಸರಿಯಾಗಿ ಕರ್ತವ್ಯವನ್ನು ಮಾತ್ರ ನಿಭಾಯಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಪರಿಣಾಮ ಪೊಲೀಸರು ಮತ್ತು ವಕೀಲರ ನಡುವೆ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಫೀಲ್ಡಿಗಿಳಿದ ಪೊಲೀಸರು – ವೀಲಿಂಗ್ ಪುಂಡರು ಅಂದರ್