Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

Latest

ಹಾಸನಾಂಬಾ ಉತ್ಸವ ವಿಐಪಿ ಸಂಪ್ರದಾಯಕ್ಕೆ ಬ್ರೇಕ್, ಜನಸ್ನೇಹಿ ಉತ್ಸವಕ್ಕೆ ಅಂಕಿತ: ಕೃಷ್ಣ ಬೈರೇಗೌಡ

Public TV
Last updated: October 6, 2025 11:18 pm
Public TV
Share
3 Min Read
Krishna Byre Gowda
SHARE

 – ಅ.9ರಿಂದ 23ರ ವರೆಗೆ ಹಾಸನಾಂಬೆ ಉತ್ಸವ – 25 ಲಕ್ಷ ಭಕ್ತರ ಆಗಮನ ನಿರೀಕ್ಷೆ

ಬೆಂಗಳೂರು: ಅಕ್ಟೋಬರ್ 9ರಿಂದ ಅಕ್ಟೋಬರ್ 23ರವರೆಗೆ ಹಾಸನಂಬೆ ಉತ್ಸವ ನಡೆಯಲಿದೆ. ಹಾಸನಾಂಬಾ ಉತ್ಸವದಲ್ಲಿ (Hassanamba Jatre) ಪ್ರಸ್ತುತ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ನೀಡಿ ಜನಸ್ನೇಹಿ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ತಿಳಿಸಿದರು.

ವಿಕಾಸಸೌಧದಲ್ಲಿ ಸೋಮವಾರ ಹಾಸನ (Hassan) ಜಿಲ್ಲೆಯ ಶಾಸಕರು ಸಂಸದರು ಹಾಗೂ ಅಧಿಕಾರಿಗಳು ಜೊತೆ ಸಭೆ ನಡೆಸಿ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಹಾಸನಾಂಬಾ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದು, ಈ ವರ್ಷದಿಂದ ಈ ಸಂಸ್ಕೃತಿಕ ತಿಲಾಂಜಲಿ ಹಾಡಲಾಗುವುದು. ಅಲ್ಲದೇ ಜನಸ್ನೇಹಿ ಹಾಸನಾಂಬಾ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹಾಸನಾಂಬೆ ದರ್ಶನಕ್ಕೆ ವಿಶೇಷ ಪ್ಯಾಕೇಜ್ – ಬೆಂಗಳೂರಿಂದ 2016 ರೂ., ಮೈಸೂರಿಂದ 1250 ರೂ.

hasanamba temple hassan

ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್‌ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದುಎಂದು ಮಾಹಿತಿ ನೀಡಿದರು.

ಮುಂದುವರೆದು, ಶಾಸಕರು, ಸಚಿವರು ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. ಗಣ್ಯ ವ್ಯಕ್ತಿಗಳಿಗೆ ತಮ್ಮ ಕುಟುಂಬದ ನಾಲ್ಕು ಜನ ಸದಸ್ಯರನ್ನು ಜೊತೆಗೆ ಕರೆತರಲು ಅವಕಾಶ ನೀಡಲಾಗಿದೆ. ಆದರೆ, ಯಾವುದೇ ಖಾಸಗಿ ವಾಹನಗಳ ಮೂಲಕ ದೇವಾಲಯಕ್ಕೆ ಆಗಮಿಸಲು ಅವಕಾಶ ಇಲ್ಲ ಎಂದು ಅವರು ತಿಳಿಸಿದರು.

hassanamba

ಇದಲ್ಲದೆ, 1000 ರೂ. ಹಾಗೂ 300 ರೂ. ಬೆಲೆಯ ಪಾಸ್‌ಗಳನ್ನೂ ವಿತರಿಸಲಾಗುವುದು. ಪಾಸ್ ಪಡೆದವರಿಗೆ ದೇವರ ದರ್ಶನದ ಜೊತೆಗೆ ಪ್ರಸಾದವನ್ನೂ ನೀಡಲಾಗುವುದು. ಒಂದು ಪಾಸ್‌ಗೆ ಒಬ್ಬರಿಗೆ ಮಾತ್ರ ಅವಕಾಶ ಇರಲಿದೆ. ಎಸ್ಕಾರ್ಟ್‌ನಲ್ಲಿ ಆಗಮಿಸುವವರಿಗೆ ಬೆಳಗ್ಗೆ 10:30 ರಿಂದ 12:30ರ ವರೆಗೆ ಅವಕಾಶ ಇರಲಿದೆ. ಪಾಸ್ ಪಡೆದವರಿಗೆ ಬೆಳಗ್ಗೆ 7:30 ರಿಂದ 10ರ ನಡುವೆ ಪ್ರವೇಶ ನೀಡಲಾಗುವುದು. ಒಂದು ದಿನಕ್ಕೆ 1000 ಪಾಸ್‌ಗಳನ್ನು ಮಾತ್ರ ವಿತರಿಸಲಿದ್ದು, ಸಮಯ ಮೀರಿ ಬಂದವರಿಗೆ ಅವಕಾಶ ಇರುವುದಿಲ್ಲ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ದೇವಾಲಯಕ್ಕೆ ಭೇಟಿ ನೀಡುವವರ ಸಂಖ್ಯೆ ಗಣನೀಯ ಹೆಚ್ಚಳ:
ಹಾಸನಾಂಬಾ ದೇವಾಲಯಕ್ಕೆ 2021 ರಲ್ಲಿ 1ಲಕ್ಷ ಜನ ಮಾತ್ರ ಭೇಟಿ ನೀಡಿದ್ದರು. ಆದರೆ, 2022 ರಲ್ಲಿ 3 ಲಕ್ಷ ಹಾಗೂ 2023 ರಲ್ಲಿ 6 ಲಕ್ಷ ಜನ ಭೇಟಿ ನೀಡಿದ್ದಾರೆ.

ಕಳೆದ ವರ್ಷ 20 ಲಕ್ಷ ಜನ ಭೇಟಿ ನೀಡಿದ್ದಾರೆ. ಹೀಗಾಗಿ ಈ ವರ್ಷ 25ಲಕ್ಷ ಜನ ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಎಲ್ಲಾ ಇಲಾಖೆಯನ್ನೂ ಒಳಗೊಂಡು ಸುಗಮ ತಯಾರಿಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ.

ಈ ಬಾರಿ ಇರಲಿದೆ ಸಾಂಸ್ಕೃತಿಕ ಕಾರ್ಯಕ್ರಮ
ಅಕ್ಟೋಬರ್ 9 ರಿಂದಲೇ ಈ ಬಾರಿ ಸಾಂಸ್ಕೃತಿಕ ಕಾರ್ಯಕ್ರಮಗಳೂ ಇರಲಿವೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಮೂರು ವೇದಿಕೆ ಸಿದ್ಧಪಡಿಸಲಾಗಿದ್ದು, ಒಂದು ವೇದಿಕೆಯಲ್ಲಿ ಜಾನಪದ ಜಾತ್ರೆ ನಡೆಸಲಾಗುವುದು. ಈ ವೇದಿಕೆಯಲ್ಲಿ ನಾಡಿನ ನಾನಾ ಭಾಗದ ಜಾನಪದ ಕಲಾವಿದರು ಆಗಮಿಸಿ ನೃತ್ಯ ಪ್ರದರ್ಶಿಸಲಿದ್ದಾರೆ. ಜಾನಪದವನ್ನು ಉಳಿಸಿ ಬೆಳೆಸುವ ಹಾಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆ ಹಮ್ಮಿಕೊಳ್ಳಲಾಗಿದೆ. ಉಳಿದ ಎರಡು ವೇದಿಕೆಯಲ್ಲಿ ಸ್ಥಳೀಯ ಯುವಕ-ಯುವತಿಯರು ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಭಕ್ತಾದಿಗಳಿಗೆ ಈ ವರ್ಷ ನೂತನ ಅನುಭವವಾಗಲಿದೆ.

ಇದರ ಜೊತೆಗೆ ಹೆಲಿ ಟೂರಿಸಂ, ಫಲಪುಷ್ಪ ಪ್ರದರ್ಶನವೂ ಇರಲಿದೆ. ಸ್ತ್ರಿ ಶಕ್ತಿ ಸಂಘಗಳಿಂದ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನೂ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಜೊತೆಗೆ ಮಾತನಾಡಿದ್ದು ಹಾಸನಾಂಭ ಟೂರ್ ಪ್ಯಾಕೇಜ್ ಸಹ ಆರಂಭಿಸುವ ಯೋಚನೆ ಇದೆ ಎಂದರು.

ಭದ್ರತೆಗೆ ಒತ್ತು:
ಜನ ಸಂದಣಿ ನಿಯತ್ರಿಸುವ ಸಲುವಾಗಿ 2000 ಪೊಲೀಸರನ್ನು ನೇಮಕ ಮಾಡಲಾಗಿದೆ. 280ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಸಲಾಗಿದೆ. ಡ್ರೋನ್ ಕ್ಯಾಮೆರಾ ಸಹ ಬಳಕೆಯಲ್ಲಿದ್ದು, ಎಲ್ಲವಕ್ಕೂ ಎಐ ತಂತ್ರಜ್ಞಾನ ಬಳಸಲಾಗಿದೆ. ಸ್ಥಳದಲ್ಲೇ ಕಂಟ್ರೋಲ್ ರೂಂ ನಿರ್ಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯಲು ಆಸ್ಪದ ನೀಡಲಾಗುವುದಿಲ್ಲ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಅ.9 ರಿಂದ 23ರವರೆಗೆ ಹಾಸನಾಂಬೆ ಜಾತ್ರೆ – ಈ ಬಾರಿ ವಿಐಪಿ, ವಿವಿಐಪಿ ಪಾಸ್ ಇರಲ್ಲ

TAGGED:hassanHassanamba Jatrekrishna byre gowda
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
25 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
25 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
35 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
52 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?